<p><strong>ಕಂಪ್ಲಿ:</strong> ಪಟ್ಟಣದ ಷಾ.ಮಿಯಾಚಂದ್ ಸರ್ಕಾರಿ ಪ್ರೌಢ ಶಾಲೆ ಕೊಠಡಿಗಳು ಶಿಥಿಲ ಮತ್ತು ಚಾವಣಿ ದುರಸ್ತಿಯಲ್ಲಿದ್ದು, ಮುನ್ನೆಚ್ಚರಿಕೆಯಾಗಿ ವಿದ್ಯಾರ್ಥಿಗಳನ್ನು ಕುಳ್ಳಿರಿಸದಂತೆ ಲೋಕಾಯುಕ್ತ ನಿರೀಕ್ಷಕ ನಾಗರೆಡ್ಡಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.</p><p>ಇಲ್ಲಿಯ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಮಾತನಾಡಿ, ಮಳೆಗಾಲ ಆಗಿರುವುದರಿಂದ ತ್ವರಿತವಾಗಿ ಕೊಠಡಿಗಳ ದುರಸ್ತಿಗೆ ಶಿಕ್ಷಣ ಇಲಾಖೆ ಗಮನಹರಿಸಬೇಕು. ಮಂಜೂರಾದ ನೂತನ ಕೊಠಡಿಗಳ ಕಾಮಗಾರಿಯನ್ನೂ ಆರಂಭಿಸುವಂತೆ ತಿಳಿಸಿದರು.</p><p>ಪಟ್ಟಣದ ವಿವಿಧೆಡೆ ನಿಂತ ನೀರಿನಲ್ಲಿ ಸೊಳ್ಳೆಗಳು ಕಾಣಿಸಿಕೊಳ್ಳುವುದು, ಸಾಂಕ್ರಾಮಿಕ ರೋಗ ಹರಡದಂತೆ ಫಾಂಗಿಂಗ್ ಸಿಂಪರಣೆಗೆ ಪುರಸಭೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ವಸತಿ ನಿಲಯಗಳ ನಿಲಯ ಪಾಲಕರು ಗುಣಮಟ್ಟದ ಪಡಿತರ, ಮೊಟ್ಟೆ ಖರೀದಿಸಬೇಕು ಎಂದು ತಿಳಿಸಿದರು.</p><p>ಅಧಿಕಾರಿಗಳು ವಿನಾಕಾರಣ ಸಾರ್ವಜನಿಕರನ್ನು ಕಚೇರಿಗೆ ಅಲೆಯಿಸದೆ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿಕೊಡುವಂತೆ ತಿಳಿಸಿದರು.</p><p>ತಾಲ್ಲೂಕು ಪಂಚಾಯಿತಿ ನರೇಗಾ ಎ.ಡಿ ಕೆ.ಎಸ್. ಮಲ್ಲನಗೌಡ, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ:</strong> ಪಟ್ಟಣದ ಷಾ.ಮಿಯಾಚಂದ್ ಸರ್ಕಾರಿ ಪ್ರೌಢ ಶಾಲೆ ಕೊಠಡಿಗಳು ಶಿಥಿಲ ಮತ್ತು ಚಾವಣಿ ದುರಸ್ತಿಯಲ್ಲಿದ್ದು, ಮುನ್ನೆಚ್ಚರಿಕೆಯಾಗಿ ವಿದ್ಯಾರ್ಥಿಗಳನ್ನು ಕುಳ್ಳಿರಿಸದಂತೆ ಲೋಕಾಯುಕ್ತ ನಿರೀಕ್ಷಕ ನಾಗರೆಡ್ಡಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.</p><p>ಇಲ್ಲಿಯ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಮಾತನಾಡಿ, ಮಳೆಗಾಲ ಆಗಿರುವುದರಿಂದ ತ್ವರಿತವಾಗಿ ಕೊಠಡಿಗಳ ದುರಸ್ತಿಗೆ ಶಿಕ್ಷಣ ಇಲಾಖೆ ಗಮನಹರಿಸಬೇಕು. ಮಂಜೂರಾದ ನೂತನ ಕೊಠಡಿಗಳ ಕಾಮಗಾರಿಯನ್ನೂ ಆರಂಭಿಸುವಂತೆ ತಿಳಿಸಿದರು.</p><p>ಪಟ್ಟಣದ ವಿವಿಧೆಡೆ ನಿಂತ ನೀರಿನಲ್ಲಿ ಸೊಳ್ಳೆಗಳು ಕಾಣಿಸಿಕೊಳ್ಳುವುದು, ಸಾಂಕ್ರಾಮಿಕ ರೋಗ ಹರಡದಂತೆ ಫಾಂಗಿಂಗ್ ಸಿಂಪರಣೆಗೆ ಪುರಸಭೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ವಸತಿ ನಿಲಯಗಳ ನಿಲಯ ಪಾಲಕರು ಗುಣಮಟ್ಟದ ಪಡಿತರ, ಮೊಟ್ಟೆ ಖರೀದಿಸಬೇಕು ಎಂದು ತಿಳಿಸಿದರು.</p><p>ಅಧಿಕಾರಿಗಳು ವಿನಾಕಾರಣ ಸಾರ್ವಜನಿಕರನ್ನು ಕಚೇರಿಗೆ ಅಲೆಯಿಸದೆ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿಕೊಡುವಂತೆ ತಿಳಿಸಿದರು.</p><p>ತಾಲ್ಲೂಕು ಪಂಚಾಯಿತಿ ನರೇಗಾ ಎ.ಡಿ ಕೆ.ಎಸ್. ಮಲ್ಲನಗೌಡ, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>