<p>ಪ್ರಜಾವಾಣಿ ವಾರ್ತೆ</p>.<p>ಕಂಪ್ಲಿ: ‘ತಾಲ್ಲೂಕಿನ ಗುತ್ತಿಗೆದಾರರು ಈಗಾಗಲೇ ನಿರ್ವಹಿಸಿರುವ ಸರ್ಕಾರದ ವಿವಿಧ ಇಲಾಖೆಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಬಾಕಿ ಹಣವನ್ನು ತ್ವರಿತವಾಗಿ ಬಿಡುಗಡೆ ಮಾಡಬೇಕು’ ಗುತ್ತಿಗೆದಾರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಿ. ರಮೇಶ್ ದೇವಲಾಪುರ ಒತ್ತಾಯಿಸಿದರು.</p>.<p>ಇಲ್ಲಿಯ ಅತಿಥಿಗೃಹದಲ್ಲಿ ಭಾನುವಾರ ನಡೆದ ಗುತ್ತಿಗೆದಾರರ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.</p>.<p>‘ಬ್ಯಾಂಕ್, ಲೇವಾದೇವಿಗಾರರಿಂದ ಸಾಲ ಪಡೆದು ಕಾಮಗಾರಿ ಪೂರ್ಣಗೊಳಿಸಲಾಗಿದೆ. ಹಲವು ಗುತ್ತಿಗೆದಾರರು ಆಸ್ತಿ ಅಡಮಾನ ಇಟ್ಟಿದ್ದಾರೆ. ಬಾಕಿ ಬಿಲ್ ಪಾವತಿಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಸರ್ಕಾರದಿಂದ ಅನುದಾನ ಸಿಗದೆ ಗುತ್ತಿಗೆದಾರರು ತೊಂದರೆ ಎದುರಿಸುತ್ತಿದ್ದಾರೆ. ಮಂಜೂರಾದ ಕಾಮಗಾರಿಗೆ ಗ್ರಾವೆಲ್ ಸೇರಿದಂತೆ ವಿವಿಧ ತೊಡಕುಗಳಿವೆ. ಗುತ್ತಿಗೆದಾರರ ಹಿತಾಸಕ್ತಿಗೆ ಸರ್ಕಾರ ಕ್ರಮ ವಹಿಸಬೇಕು. ಸ್ಥಳೀಯ ಗುತ್ತಿಗೆದಾರರಿಗೆ ಆದ್ಯತೆ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಸಂಘದ ಗೌರವಾಧ್ಯಕ್ಷ ಎನ್. ಮಲ್ಲಿಕಾರ್ಜುನರೆಡ್ಡಿ ಮಾತನಾಡಿ, ‘ಮುಂದಿನ ಸಭೆಯಲ್ಲಿ ಉಳಿದ ಪದಾಧಿಕಾರಿಗಳ ಆಯ್ಕೆ ಮಾಡಲಾಗುವುದು. ಸಂಘದ ಕಚೇರಿಗೆ ನಿವೇಶನ ಒದಗಿಸುವಂತೆ ಪುರಸಭೆಗೆ ಮನವಿ ಸಲ್ಲಿಸಲಾಗುವುದು’ ಎಂದರು.</p>.<p>ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಿ. ರಾಮಾಂಜಿನಿ ಸುಗ್ಗೇನಹಳ್ಳಿ, ಪದಾಧಿಕಾರಿಗಳಾದ ಎನ್. ತಿಪ್ಪಯ್ಯ, ಪಿ. ಬಾಲೇಸಾಬ್ ಎಮ್ಮಿಗನೂರು, ಮೆಟ್ರಿ ಮಹೇಶ್, ವೀರಭದ್ರುಡು, ರಾಗಿ ಗಿರೀಶ್ ರಾಮಸಾಗರ, ಭಾಸ್ಕರ, ತಿಮ್ಮಾರೆಡ್ಡಿ ಸುಗ್ಗೇನಹಳ್ಳಿ, ಬಸವಪ್ರಭು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಕಂಪ್ಲಿ: ‘ತಾಲ್ಲೂಕಿನ ಗುತ್ತಿಗೆದಾರರು ಈಗಾಗಲೇ ನಿರ್ವಹಿಸಿರುವ ಸರ್ಕಾರದ ವಿವಿಧ ಇಲಾಖೆಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಬಾಕಿ ಹಣವನ್ನು ತ್ವರಿತವಾಗಿ ಬಿಡುಗಡೆ ಮಾಡಬೇಕು’ ಗುತ್ತಿಗೆದಾರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಿ. ರಮೇಶ್ ದೇವಲಾಪುರ ಒತ್ತಾಯಿಸಿದರು.</p>.<p>ಇಲ್ಲಿಯ ಅತಿಥಿಗೃಹದಲ್ಲಿ ಭಾನುವಾರ ನಡೆದ ಗುತ್ತಿಗೆದಾರರ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.</p>.<p>‘ಬ್ಯಾಂಕ್, ಲೇವಾದೇವಿಗಾರರಿಂದ ಸಾಲ ಪಡೆದು ಕಾಮಗಾರಿ ಪೂರ್ಣಗೊಳಿಸಲಾಗಿದೆ. ಹಲವು ಗುತ್ತಿಗೆದಾರರು ಆಸ್ತಿ ಅಡಮಾನ ಇಟ್ಟಿದ್ದಾರೆ. ಬಾಕಿ ಬಿಲ್ ಪಾವತಿಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಸರ್ಕಾರದಿಂದ ಅನುದಾನ ಸಿಗದೆ ಗುತ್ತಿಗೆದಾರರು ತೊಂದರೆ ಎದುರಿಸುತ್ತಿದ್ದಾರೆ. ಮಂಜೂರಾದ ಕಾಮಗಾರಿಗೆ ಗ್ರಾವೆಲ್ ಸೇರಿದಂತೆ ವಿವಿಧ ತೊಡಕುಗಳಿವೆ. ಗುತ್ತಿಗೆದಾರರ ಹಿತಾಸಕ್ತಿಗೆ ಸರ್ಕಾರ ಕ್ರಮ ವಹಿಸಬೇಕು. ಸ್ಥಳೀಯ ಗುತ್ತಿಗೆದಾರರಿಗೆ ಆದ್ಯತೆ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಸಂಘದ ಗೌರವಾಧ್ಯಕ್ಷ ಎನ್. ಮಲ್ಲಿಕಾರ್ಜುನರೆಡ್ಡಿ ಮಾತನಾಡಿ, ‘ಮುಂದಿನ ಸಭೆಯಲ್ಲಿ ಉಳಿದ ಪದಾಧಿಕಾರಿಗಳ ಆಯ್ಕೆ ಮಾಡಲಾಗುವುದು. ಸಂಘದ ಕಚೇರಿಗೆ ನಿವೇಶನ ಒದಗಿಸುವಂತೆ ಪುರಸಭೆಗೆ ಮನವಿ ಸಲ್ಲಿಸಲಾಗುವುದು’ ಎಂದರು.</p>.<p>ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಿ. ರಾಮಾಂಜಿನಿ ಸುಗ್ಗೇನಹಳ್ಳಿ, ಪದಾಧಿಕಾರಿಗಳಾದ ಎನ್. ತಿಪ್ಪಯ್ಯ, ಪಿ. ಬಾಲೇಸಾಬ್ ಎಮ್ಮಿಗನೂರು, ಮೆಟ್ರಿ ಮಹೇಶ್, ವೀರಭದ್ರುಡು, ರಾಗಿ ಗಿರೀಶ್ ರಾಮಸಾಗರ, ಭಾಸ್ಕರ, ತಿಮ್ಮಾರೆಡ್ಡಿ ಸುಗ್ಗೇನಹಳ್ಳಿ, ಬಸವಪ್ರಭು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>