<p><strong>ಕಂಪ್ಲಿ</strong>: ಪಟ್ಟಣ ಸೇರಿ ತಾಲ್ಲೂಕಿನಾದ್ಯಂತ ಶನಿವಾರ ರಾತ್ರಿ 1.87 ಸೆಂ.ಮೀ ಮಳೆಯಾಗಿದ್ದು, 4 ಕಚ್ಚಾ ಮನೆಗಳು ಭಾಗಶಃ ಹಾನಿಯಾಗಿದ್ದರೆ, ಗಾಳಿಗೆ ಅಲ್ಲಲ್ಲಿ ವಿದ್ಯುತ್ ಕಂಬಗಳು ಬಾಗಿವೆ.</p>.<p>ತಾಲ್ಲೂಕಿನ ಎಮ್ಮಿಗನೂರು ಹಾಗೂ ಚಿಕ್ಕಜಾಯಿಗನೂರು ಗ್ರಾಮದಲ್ಲಿ ತಲಾ ಒಂದು ಮತ್ತು ಮೆಟ್ರಿ ಗ್ರಾಮದಲ್ಲಿ ಎರಡು ಕಚ್ಚಾ ಮನೆಗಳು ಭಾಗಶಃ ಬಿದ್ದಿವೆ. ಆದರೆ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.</p>.<p>ಪಟ್ಟಣದಲ್ಲಿ ಮತ್ತು ಗ್ರಾಮೀಣ ಭಾಗದಲ್ಲಿ ಮಳೆ ಹಿನ್ನೆಲೆ ಬಾಗಿದ್ದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ ಮುಂದುವರಿದಿತ್ತು.</p>.<p><strong>ಮಳೆಗೆ ತಂಪಾದ ಇಳೆ:</strong> ಕೆಲ ದಿನಗಳಿಂದ ಬೇಸಿಗೆ ಬಿಸಿಗೆ ಹೈರಾಣಾಗಿದ್ದ ತಾಲ್ಲೂಕಿನ ಜನರು ಶನಿವಾರ ರಾತ್ರಿ ಸುರಿದ ಮಳೆಯಿಂದ ಇಳೆ ತಂಪಾಗಿ ನಿಟ್ಟುಸಿರುಬಿಟ್ಟಿದ್ದಾರೆ.</p>.<p>ಪ್ರತಿ ದಿನ ಮಳೆ ಬರುವ ಮುನ್ಸೂಚನೆ ಆಕಾಶದಲ್ಲಿ ಕಾಣಿಸಿಕೊಂಡರು ಮಳೆ ಮಾತ್ರ ಬಾರದೆ ರೈತರಿಗೂ ನಿರಾಸೆಯುಂಟು ಮಾಡುತ್ತಿತ್ತು. ಇದೀಗ ಸುರಿದ ಮಳೆಯಿಂದ ಸಂತಸಗೊಂಡಿರುವ ರೈತರು ಕೃಷಿ ಚಟುವಟಿಕೆಗಳನ್ನು ಅಲ್ಲಲ್ಲಿ ಆರಂಭಿಸಿರುವುದು ಕಂಡುಬಂತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-25-789555048</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ</strong>: ಪಟ್ಟಣ ಸೇರಿ ತಾಲ್ಲೂಕಿನಾದ್ಯಂತ ಶನಿವಾರ ರಾತ್ರಿ 1.87 ಸೆಂ.ಮೀ ಮಳೆಯಾಗಿದ್ದು, 4 ಕಚ್ಚಾ ಮನೆಗಳು ಭಾಗಶಃ ಹಾನಿಯಾಗಿದ್ದರೆ, ಗಾಳಿಗೆ ಅಲ್ಲಲ್ಲಿ ವಿದ್ಯುತ್ ಕಂಬಗಳು ಬಾಗಿವೆ.</p>.<p>ತಾಲ್ಲೂಕಿನ ಎಮ್ಮಿಗನೂರು ಹಾಗೂ ಚಿಕ್ಕಜಾಯಿಗನೂರು ಗ್ರಾಮದಲ್ಲಿ ತಲಾ ಒಂದು ಮತ್ತು ಮೆಟ್ರಿ ಗ್ರಾಮದಲ್ಲಿ ಎರಡು ಕಚ್ಚಾ ಮನೆಗಳು ಭಾಗಶಃ ಬಿದ್ದಿವೆ. ಆದರೆ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.</p>.<p>ಪಟ್ಟಣದಲ್ಲಿ ಮತ್ತು ಗ್ರಾಮೀಣ ಭಾಗದಲ್ಲಿ ಮಳೆ ಹಿನ್ನೆಲೆ ಬಾಗಿದ್ದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ ಮುಂದುವರಿದಿತ್ತು.</p>.<p><strong>ಮಳೆಗೆ ತಂಪಾದ ಇಳೆ:</strong> ಕೆಲ ದಿನಗಳಿಂದ ಬೇಸಿಗೆ ಬಿಸಿಗೆ ಹೈರಾಣಾಗಿದ್ದ ತಾಲ್ಲೂಕಿನ ಜನರು ಶನಿವಾರ ರಾತ್ರಿ ಸುರಿದ ಮಳೆಯಿಂದ ಇಳೆ ತಂಪಾಗಿ ನಿಟ್ಟುಸಿರುಬಿಟ್ಟಿದ್ದಾರೆ.</p>.<p>ಪ್ರತಿ ದಿನ ಮಳೆ ಬರುವ ಮುನ್ಸೂಚನೆ ಆಕಾಶದಲ್ಲಿ ಕಾಣಿಸಿಕೊಂಡರು ಮಳೆ ಮಾತ್ರ ಬಾರದೆ ರೈತರಿಗೂ ನಿರಾಸೆಯುಂಟು ಮಾಡುತ್ತಿತ್ತು. ಇದೀಗ ಸುರಿದ ಮಳೆಯಿಂದ ಸಂತಸಗೊಂಡಿರುವ ರೈತರು ಕೃಷಿ ಚಟುವಟಿಕೆಗಳನ್ನು ಅಲ್ಲಲ್ಲಿ ಆರಂಭಿಸಿರುವುದು ಕಂಡುಬಂತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-25-789555048</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>