<p>ಕಂಪ್ಲಿ: ತಾಲ್ಲೂಕಿನ ಶ್ರೀರಾಮರಂಗಾಪುರ ಗ್ರಾಮದ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ಆವರಣದಲ್ಲಿ ಉಚಿತ ಆಯುಷ್ ಚಿಕಿತ್ಸಾ ಶಿಬಿರ ಗುರುವಾರ ಜರುಗಿತು. 80ಕ್ಕೂ ಹೆಚ್ಚು ರೋಗಿಗಳ ರಕ್ತಪರೀಕ್ಷೆ, ರಕ್ತದೊತ್ತಡ ಪರೀಕ್ಷೆ ನಡೆಸಿ ಔಷಧ ವಿತರಿಸಲಾಯಿತು.</p>.<p>ಪ್ರಭಾರ ವೈದ್ಯಾಧಿಕಾರಿ ಡಾ. ಗುರುಮುರುಗೇಶ್ ಮಾತನಾಡಿ, ‘ಆಯುರ್ವೇದ ಅನಾದಿ ಕಾಲದಿಂದಲೂ ಜಾಲ್ತಿಯಲ್ಲಿರುವ ಉತ್ತಮ ಚಿಕಿತ್ಸಾ ಪದ್ಧತಿಯಾಗಿದೆ. ಯಾವುದೇ ಅಡ್ಡ ಪರಿಣಾಮಗಳಿಲ್ಲದೆ, ತಡವಾದರೂ ಶಾಶ್ವತ ಉಪಶಮನ ನೀಡುವ ಶಕ್ತಿ ಆಯುರ್ವೇದಕ್ಕಿದೆ’ ಎಂದರು.</p>.<p>ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಭರತ್ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ, ಗರ್ಭಕಂಠ ಕ್ಯಾನ್ಸರ್ ತಡೆಗಾಗಿ ಕಿಶೋರಿಯರಿಗೆ ಎಚ್ಪಿವಿ ಲಸಿಕೆ ಹಾಕಿಸುವಲ್ಲಿ ಪಾಲಕರು ನಿಗಾವಹಿಸಬೇಕು ಎಂದರು.</p>.<p>ಆಸ್ಪತ್ರೆ ಸಿಬ್ಬಂದಿ ಗೌರಿ ಶಂಕರ, ಮಲ್ಲಿಕಾರ್ಜುನ, ಮಮತಾ, ಆಶಾ ಕಾರ್ಯಕರ್ತೆ ಅನಿತಾ, ಜ್ಯೋತಿ, ಮಹೇಶ್ವರಮ್ಮ, ಆಯುಷ್ ಇಲಾಖೆ ಸಿಬ್ಬಂದಿ ಆಲ್ತಾಫ್, ರಾಜ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-25-416033381</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಂಪ್ಲಿ: ತಾಲ್ಲೂಕಿನ ಶ್ರೀರಾಮರಂಗಾಪುರ ಗ್ರಾಮದ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ಆವರಣದಲ್ಲಿ ಉಚಿತ ಆಯುಷ್ ಚಿಕಿತ್ಸಾ ಶಿಬಿರ ಗುರುವಾರ ಜರುಗಿತು. 80ಕ್ಕೂ ಹೆಚ್ಚು ರೋಗಿಗಳ ರಕ್ತಪರೀಕ್ಷೆ, ರಕ್ತದೊತ್ತಡ ಪರೀಕ್ಷೆ ನಡೆಸಿ ಔಷಧ ವಿತರಿಸಲಾಯಿತು.</p>.<p>ಪ್ರಭಾರ ವೈದ್ಯಾಧಿಕಾರಿ ಡಾ. ಗುರುಮುರುಗೇಶ್ ಮಾತನಾಡಿ, ‘ಆಯುರ್ವೇದ ಅನಾದಿ ಕಾಲದಿಂದಲೂ ಜಾಲ್ತಿಯಲ್ಲಿರುವ ಉತ್ತಮ ಚಿಕಿತ್ಸಾ ಪದ್ಧತಿಯಾಗಿದೆ. ಯಾವುದೇ ಅಡ್ಡ ಪರಿಣಾಮಗಳಿಲ್ಲದೆ, ತಡವಾದರೂ ಶಾಶ್ವತ ಉಪಶಮನ ನೀಡುವ ಶಕ್ತಿ ಆಯುರ್ವೇದಕ್ಕಿದೆ’ ಎಂದರು.</p>.<p>ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಭರತ್ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ, ಗರ್ಭಕಂಠ ಕ್ಯಾನ್ಸರ್ ತಡೆಗಾಗಿ ಕಿಶೋರಿಯರಿಗೆ ಎಚ್ಪಿವಿ ಲಸಿಕೆ ಹಾಕಿಸುವಲ್ಲಿ ಪಾಲಕರು ನಿಗಾವಹಿಸಬೇಕು ಎಂದರು.</p>.<p>ಆಸ್ಪತ್ರೆ ಸಿಬ್ಬಂದಿ ಗೌರಿ ಶಂಕರ, ಮಲ್ಲಿಕಾರ್ಜುನ, ಮಮತಾ, ಆಶಾ ಕಾರ್ಯಕರ್ತೆ ಅನಿತಾ, ಜ್ಯೋತಿ, ಮಹೇಶ್ವರಮ್ಮ, ಆಯುಷ್ ಇಲಾಖೆ ಸಿಬ್ಬಂದಿ ಆಲ್ತಾಫ್, ರಾಜ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-25-416033381</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>