<p><strong>ಕಂಪ್ಲಿ:</strong> ಇಲ್ಲಿನ ಕೋಟೆ ಪ್ರದೇಶದ ಬಳಿಯ ತುಂಗಭದ್ರಾನದಿ ಸೇತುವೆ ಬಳಿ ಈಚೆಗೆ ಕಬ್ಬಿಣದ ಸ್ವಾಗತ ಕಮಾನು ಫಲಕ ಕ್ರೇನ್ ಮೂಲಕ ಅಳವಡಿಸುವಾಗ ನಡೆದ ಅವಘಡದಲ್ಲಿ ಬಿದ್ದು ಮೃತಪಟ್ಟ ಕಾರ್ಮಿಕನ ಕುಟುಂಬಕ್ಕೆ ₹50 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹25 ಲಕ್ಷ ಸರ್ಕಾರ ಪರಿಹಾರ ಘೋಷಿಸುವಂತೆ ಕಂಪ್ಲಿ ವಿಧಾನಸಭಾ ಕ್ಷೇತ್ರ ಬಿಜೆಪಿ ಮತಗಟ್ಟೆ ಮಟ್ಟದ ಏಜೆಂಟ್(ಬಿಎಲ್ಎ-1) ಜಿ. ಶ್ರೀನಿವಾಸುಲು ಒತ್ತಾಯಿಸಿದರು.</p>.<p>ಇಲ್ಲಿನ ಮಾಜಿ ಶಾಸಕ ಟಿ.ಎಚ್. ಸುರೇಶ್ಬಾಬು ಜನಸಂಪರ್ಕ ಕಚೇರಿಯಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ನಾಮಫಲಕ ಅಳವಡಿಕೆಗೆ ಸುರಕ್ಷಿತ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಪುರಸಭೆ ಪ್ರಭಾರ ಮುಖ್ಯಾಧಿಕಾರಿ, ಎಂಜಿನಿಯರ್ ಅವರನ್ನು ಅಮಾನತುಗೊಳಿಸುವುದರ ಜತೆಗೆ ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸಬೇಕು’ ಎಂದರು.</p>.<p>‘ನಾಮಫಲಕ ನವೀಕರಣದಲ್ಲಿ ಪುರಸಭೆ ಅನುದಾನ ದುರ್ಬಳಕೆಯಾಗಿದೆ ಎಂದು ಆರೋಪಿಸಿದ ಅವರು ಪುರಸಭೆಗೆ ಕೆಎಂಎಎಸ್ ದರ್ಜೆಯ ಮುಖ್ಯಾಧಿಕಾರಿಯನ್ನು ನೇಮಕ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಎನ್. ಮನೋಜಗೌಡ, ಮಂಡಲ ಪ್ರಧಾನ ಕಾರ್ಯದರ್ಶಿ ಕೆ. ಪ್ರಶಾಂತ, ನಗರ ಉಪಾಧ್ಯಕ್ಷ ಎಂ. ಭಾಸ್ಕರ, ನಗರ ಪ್ರಧಾನ ಕಾರ್ಯದರ್ಶಿಗಳಾದ ಕೆ. ಬಸವಪ್ರಭು, ಕಟ್ಟೆ ವಿಶ್ವನಾಥ, ಕಾರ್ಯಕರ್ತರಾದ ಸಿ.ಎ. ಚನ್ನಪ್ಪ, ಶಂಶುದ್ದೀನ್, ಎಚ್.ಎಂ. ವಿರುಪಾಕ್ಷಯ್ಯಸ್ವಾಮಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ:</strong> ಇಲ್ಲಿನ ಕೋಟೆ ಪ್ರದೇಶದ ಬಳಿಯ ತುಂಗಭದ್ರಾನದಿ ಸೇತುವೆ ಬಳಿ ಈಚೆಗೆ ಕಬ್ಬಿಣದ ಸ್ವಾಗತ ಕಮಾನು ಫಲಕ ಕ್ರೇನ್ ಮೂಲಕ ಅಳವಡಿಸುವಾಗ ನಡೆದ ಅವಘಡದಲ್ಲಿ ಬಿದ್ದು ಮೃತಪಟ್ಟ ಕಾರ್ಮಿಕನ ಕುಟುಂಬಕ್ಕೆ ₹50 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹25 ಲಕ್ಷ ಸರ್ಕಾರ ಪರಿಹಾರ ಘೋಷಿಸುವಂತೆ ಕಂಪ್ಲಿ ವಿಧಾನಸಭಾ ಕ್ಷೇತ್ರ ಬಿಜೆಪಿ ಮತಗಟ್ಟೆ ಮಟ್ಟದ ಏಜೆಂಟ್(ಬಿಎಲ್ಎ-1) ಜಿ. ಶ್ರೀನಿವಾಸುಲು ಒತ್ತಾಯಿಸಿದರು.</p>.<p>ಇಲ್ಲಿನ ಮಾಜಿ ಶಾಸಕ ಟಿ.ಎಚ್. ಸುರೇಶ್ಬಾಬು ಜನಸಂಪರ್ಕ ಕಚೇರಿಯಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ನಾಮಫಲಕ ಅಳವಡಿಕೆಗೆ ಸುರಕ್ಷಿತ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಪುರಸಭೆ ಪ್ರಭಾರ ಮುಖ್ಯಾಧಿಕಾರಿ, ಎಂಜಿನಿಯರ್ ಅವರನ್ನು ಅಮಾನತುಗೊಳಿಸುವುದರ ಜತೆಗೆ ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸಬೇಕು’ ಎಂದರು.</p>.<p>‘ನಾಮಫಲಕ ನವೀಕರಣದಲ್ಲಿ ಪುರಸಭೆ ಅನುದಾನ ದುರ್ಬಳಕೆಯಾಗಿದೆ ಎಂದು ಆರೋಪಿಸಿದ ಅವರು ಪುರಸಭೆಗೆ ಕೆಎಂಎಎಸ್ ದರ್ಜೆಯ ಮುಖ್ಯಾಧಿಕಾರಿಯನ್ನು ನೇಮಕ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಎನ್. ಮನೋಜಗೌಡ, ಮಂಡಲ ಪ್ರಧಾನ ಕಾರ್ಯದರ್ಶಿ ಕೆ. ಪ್ರಶಾಂತ, ನಗರ ಉಪಾಧ್ಯಕ್ಷ ಎಂ. ಭಾಸ್ಕರ, ನಗರ ಪ್ರಧಾನ ಕಾರ್ಯದರ್ಶಿಗಳಾದ ಕೆ. ಬಸವಪ್ರಭು, ಕಟ್ಟೆ ವಿಶ್ವನಾಥ, ಕಾರ್ಯಕರ್ತರಾದ ಸಿ.ಎ. ಚನ್ನಪ್ಪ, ಶಂಶುದ್ದೀನ್, ಎಚ್.ಎಂ. ವಿರುಪಾಕ್ಷಯ್ಯಸ್ವಾಮಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>