<p><strong>ಕಂಪ್ಲಿ:</strong> ತುಂಗಭದ್ರಾ ಜಲಾಶಯದಿಂದ ಇಲ್ಲಿಯ ಕೋಟೆ ಪ್ರದೇಶದ ಬಳಿ ಹರಿಯುವ ನದಿಗೆ 60,000ದಿಂದ 85,000 ಕ್ಯೂಸೆಕ್ ನೀರು ಶುಕ್ರವಾರ ಹರಿದು ಬರುತ್ತಿದೆ.</p>.<p>ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್, ಮುಖ್ಯಾಧಿಕಾರಿ ಬಿ. ಮಲ್ಲಿಕಾರ್ಜುನ, ಪಿಐ ಕೆ.ಬಿ. ವಾಸುಕುಮಾರ ಭೇಟಿ ನೀಡಿ, ನದಿಪಾತ್ರದ ಜನವಸತಿ ಪ್ರದೇಶದ ಬಳಿ ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಕುರಿತು ಪರಿಶೀಲಿಸಿದರು.</p>.<p>ನದಿಗೆ 1 ಲಕ್ಷ ಕ್ಯೂಸೆಕ್ಗೂ ಅಧಿಕ ನೀರು ಹರಿದು ಬಂದಲ್ಲಿ ಕಂಪ್ಲಿ–ಗಂಗಾವತಿ ಸಂಪರ್ಕ ಸೇತುವೆ ಮುಳುಗಡೆ ಸಾಧ್ಯತೆ, ಕೋಟೆ ಪ್ರದೇಶದ ನಾಗಮ್ಮಕಟ್ಟೆ, ಹೊಳೆ ಆಂಜನೇಯ ದೇವಸ್ಥಾನ ಇನ್ನಿತರ ಸ್ಥಳಗಳು ಜಲಾವೃತವಾಗುವುದರಿಂದ ಪುರಸಭೆ ವತಿಯಿಂದ ಬೆಳಕಿನ ವ್ಯವಸ್ಥೆ ಕಲ್ಪಿಸಲು ಪುರಸಭೆ ಅಧ್ಯಕ್ಷರು ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಕೋಟೆ ಪ್ರದೇಶದ ಜನವಸತಿ ಪ್ರದೇಶದ ಸುತ್ತಮುತ್ತ ಸ್ವಚ್ಛತೆ ಕೈಗೊಂಡು ಬ್ಲೀಚಿಂಗ್ ಪೌಡರ್ ಎರಚಲಾಗುವುದು. ಕುಡಿಯುವ ನೀರಿನ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗುವುದು’ ಎಂದು ಪುರಸಭೆ ಮುಖ್ಯಾಧಿಕಾರಿ ತಿಳಿಸಿದರು.</p>.<p>ನದಿ ಬಳಿ ಮುನ್ನೆಚ್ಚರಿಕೆಯಾಗಿ ಪೊಲೀಸ್ ಕಾವಲು ಹಾಕಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ. ಷಣ್ಮುಖಪ್ಪ, ಪುರಸಭೆ ನೈರ್ಮಲ್ಯ ನಿರೀಕ್ಷಕ ಪ್ರಕಾಶಬಾಬು, ಎಂಜಿನಿಯರ್ ರಾಮಚಂದ್ರ ಗೊಲ್ಲರ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ:</strong> ತುಂಗಭದ್ರಾ ಜಲಾಶಯದಿಂದ ಇಲ್ಲಿಯ ಕೋಟೆ ಪ್ರದೇಶದ ಬಳಿ ಹರಿಯುವ ನದಿಗೆ 60,000ದಿಂದ 85,000 ಕ್ಯೂಸೆಕ್ ನೀರು ಶುಕ್ರವಾರ ಹರಿದು ಬರುತ್ತಿದೆ.</p>.<p>ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್, ಮುಖ್ಯಾಧಿಕಾರಿ ಬಿ. ಮಲ್ಲಿಕಾರ್ಜುನ, ಪಿಐ ಕೆ.ಬಿ. ವಾಸುಕುಮಾರ ಭೇಟಿ ನೀಡಿ, ನದಿಪಾತ್ರದ ಜನವಸತಿ ಪ್ರದೇಶದ ಬಳಿ ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಕುರಿತು ಪರಿಶೀಲಿಸಿದರು.</p>.<p>ನದಿಗೆ 1 ಲಕ್ಷ ಕ್ಯೂಸೆಕ್ಗೂ ಅಧಿಕ ನೀರು ಹರಿದು ಬಂದಲ್ಲಿ ಕಂಪ್ಲಿ–ಗಂಗಾವತಿ ಸಂಪರ್ಕ ಸೇತುವೆ ಮುಳುಗಡೆ ಸಾಧ್ಯತೆ, ಕೋಟೆ ಪ್ರದೇಶದ ನಾಗಮ್ಮಕಟ್ಟೆ, ಹೊಳೆ ಆಂಜನೇಯ ದೇವಸ್ಥಾನ ಇನ್ನಿತರ ಸ್ಥಳಗಳು ಜಲಾವೃತವಾಗುವುದರಿಂದ ಪುರಸಭೆ ವತಿಯಿಂದ ಬೆಳಕಿನ ವ್ಯವಸ್ಥೆ ಕಲ್ಪಿಸಲು ಪುರಸಭೆ ಅಧ್ಯಕ್ಷರು ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಕೋಟೆ ಪ್ರದೇಶದ ಜನವಸತಿ ಪ್ರದೇಶದ ಸುತ್ತಮುತ್ತ ಸ್ವಚ್ಛತೆ ಕೈಗೊಂಡು ಬ್ಲೀಚಿಂಗ್ ಪೌಡರ್ ಎರಚಲಾಗುವುದು. ಕುಡಿಯುವ ನೀರಿನ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗುವುದು’ ಎಂದು ಪುರಸಭೆ ಮುಖ್ಯಾಧಿಕಾರಿ ತಿಳಿಸಿದರು.</p>.<p>ನದಿ ಬಳಿ ಮುನ್ನೆಚ್ಚರಿಕೆಯಾಗಿ ಪೊಲೀಸ್ ಕಾವಲು ಹಾಕಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ. ಷಣ್ಮುಖಪ್ಪ, ಪುರಸಭೆ ನೈರ್ಮಲ್ಯ ನಿರೀಕ್ಷಕ ಪ್ರಕಾಶಬಾಬು, ಎಂಜಿನಿಯರ್ ರಾಮಚಂದ್ರ ಗೊಲ್ಲರ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>