<p>ಕಂಪ್ಲಿ: ಇಲ್ಲಿನ ಕೋಟೆ ಪ್ರದೇಶದ ಪಟ್ಟಾಭಿರಾಮಚಂದ್ರ ದೇವಸ್ಥಾನದಲ್ಲಿ ಲಕ್ಷ್ಮಿ ನರಸಿಂಹ ಜಯಂತ್ಯುತ್ಸವ ಅಂಗವಾಗಿ ಲಕ್ಷ್ಮಿ ನರಸಿಂಹ, ಪಟ್ಟಾಭಿರಾಮಚಂದ್ರ ದೇವರಿಗೆ ವಿಶೇಷ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ಗುರುವಾರ ಭಕ್ತಿಭಾವದಿಂದ ಜರುಗಿದವು.</p>.<p>ಧೀರಣ್ಣ ವೈದ್ಯರು ಲಕ್ಷ್ಮಿ ನರಸಿಂಹ ಮಹಿಮೆ ಕುರಿತು ಉಪನ್ಯಾಸ ನೀಡಿದರು. ಅರ್ಚಕ ರಾಘವೇಂದ್ರಾಚಾರಿ ಗುಡಿ, ಶ್ರೀನಿವಾಸಾಚಾರ್ ರಾಮಾಯಣ ಅವರು ಪೂಜಾ ಕಾರ್ಯಕ್ರಮ ನೇತೃತ್ವ ವಹಿಸಿದ್ದರು.</p>.<p>ವೆಂಕಟರಮಣ ದೇವಸ್ಥಾನ: ಪಟ್ಟಣದ ಸತ್ಯನಾರಾಯಣಪೇಟೆಯ ವೆಂಕಟರಮಣ ದೇವಸ್ಥಾನದಲ್ಲಿ ನರಸಿಂಹ ಜಯಂತ್ಯುತ್ಸವ ಅಂಗವಾಗಿ ಗುರುವಾರ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದವು. ಪರಮಹಂಸ ನಾರಾಯಣ ವಿದ್ಯಾಭಾರತಿ ಸ್ವಾಮೀಜಿ ಪ್ರವಚನ ನೀಡಿದರು.</p>.<p>ಆಂಜನೇಯ ದೇವಸ್ಥಾನ: ಪಟ್ಟಣದ ಶ್ರೀಪೇಟೆ ಆಂಜನೇಯ ದೇವಸ್ಥಾನದಲ್ಲಿ ನರಸಿಂಹ ಜಯಂತ್ಯುತ್ಸವ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿದವು. ಶಿಲಾಮೂರ್ತಿಯನ್ನು ರಜತ ಕವಚದಿಂದ ಅಲಂಕರಿಸಲಾಗಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-25-1436837271</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಂಪ್ಲಿ: ಇಲ್ಲಿನ ಕೋಟೆ ಪ್ರದೇಶದ ಪಟ್ಟಾಭಿರಾಮಚಂದ್ರ ದೇವಸ್ಥಾನದಲ್ಲಿ ಲಕ್ಷ್ಮಿ ನರಸಿಂಹ ಜಯಂತ್ಯುತ್ಸವ ಅಂಗವಾಗಿ ಲಕ್ಷ್ಮಿ ನರಸಿಂಹ, ಪಟ್ಟಾಭಿರಾಮಚಂದ್ರ ದೇವರಿಗೆ ವಿಶೇಷ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ಗುರುವಾರ ಭಕ್ತಿಭಾವದಿಂದ ಜರುಗಿದವು.</p>.<p>ಧೀರಣ್ಣ ವೈದ್ಯರು ಲಕ್ಷ್ಮಿ ನರಸಿಂಹ ಮಹಿಮೆ ಕುರಿತು ಉಪನ್ಯಾಸ ನೀಡಿದರು. ಅರ್ಚಕ ರಾಘವೇಂದ್ರಾಚಾರಿ ಗುಡಿ, ಶ್ರೀನಿವಾಸಾಚಾರ್ ರಾಮಾಯಣ ಅವರು ಪೂಜಾ ಕಾರ್ಯಕ್ರಮ ನೇತೃತ್ವ ವಹಿಸಿದ್ದರು.</p>.<p>ವೆಂಕಟರಮಣ ದೇವಸ್ಥಾನ: ಪಟ್ಟಣದ ಸತ್ಯನಾರಾಯಣಪೇಟೆಯ ವೆಂಕಟರಮಣ ದೇವಸ್ಥಾನದಲ್ಲಿ ನರಸಿಂಹ ಜಯಂತ್ಯುತ್ಸವ ಅಂಗವಾಗಿ ಗುರುವಾರ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದವು. ಪರಮಹಂಸ ನಾರಾಯಣ ವಿದ್ಯಾಭಾರತಿ ಸ್ವಾಮೀಜಿ ಪ್ರವಚನ ನೀಡಿದರು.</p>.<p>ಆಂಜನೇಯ ದೇವಸ್ಥಾನ: ಪಟ್ಟಣದ ಶ್ರೀಪೇಟೆ ಆಂಜನೇಯ ದೇವಸ್ಥಾನದಲ್ಲಿ ನರಸಿಂಹ ಜಯಂತ್ಯುತ್ಸವ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿದವು. ಶಿಲಾಮೂರ್ತಿಯನ್ನು ರಜತ ಕವಚದಿಂದ ಅಲಂಕರಿಸಲಾಗಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-25-1436837271</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>