<p><strong>ಬಳ್ಳಾರಿ:</strong> ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಜಕತ್ವದ ಕಾರ್ಯಕ್ರಮಗಳಿಗೆ ಲಂಚ ಕೊಡುವಂತೆ ಕೇಳಿದ ಆರೋಪದ ಮೇಲೆ ಇಲಾಖೆಯ ಬಳ್ಳಾರಿ ಜಿಲ್ಲೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣವರ ಅವರನ್ನು ಶುಕ್ರವಾರ ಅಮಾನತು ಮಾಡಲಾಗಿದೆ.</p>.<p>ಪ್ರಾಯೋಜಕತ್ವದ ಯೋಜನೆಯಡಿ ಎರಡೆರಡು ಕಾರ್ಯಕ್ರಮಗಳನ್ನು ಪಡೆದ ಕಲಾವಿದರಿಂದ ಸಿದ್ದಲಿಂಗೇಶ್ ರಂಗಣ್ಣವರ ₹ 10 ಸಾವಿರ ಲಂಚಕ್ಕೆ ಬೇಡಿಕೆ ಇಡುತ್ತಾರೆ. ಇಲಾಖೆಯ ಜಂಟಿ ನಿರ್ದೇಶಕರಿಗೆ ಹಣ ತಲುಪಿಸಬೇಕು. ಹೀಗಾಗಿ, ಎರಡೆರಡು ಕಾರ್ಯಕ್ರಮ ಪಡೆದವರಿಂದ ಹಣ ಕೊಡಿಸುವಂತೆ ಕಲಾವಿದರೊಬ್ಬರನ್ನು ಮೊಬೈಲ್ನಲ್ಲಿ ಕೇಳಿದ್ದಾರೆ ಎನ್ನಲಾದ ಸಂಭಾಷಣೆ ಶುಕ್ರವಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.</p>.<p>ಇಲಾಖೆಯ ಮಹಿಳಾ ಉದ್ಯೋಗಿಯೊಬ್ಬರು, ಕಡೇ ಪಕ್ಷ ₹ 8 ಸಾವಿರವನ್ನಾದರೂ ತಲುಪಿಸುವಂತೆ ಈ ಕಲಾವಿದನಿಗೆ ದುಂಬಾಲು ಬೀಳುತ್ತಾರೆ. ಅವರ ಸಂಭಾಷಣೆಯೂ ಇದೇ ಆಡಿಯೋದಲ್ಲಿದೆ ಎಂದು ಹೇಳಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಪ್ರಕಾಶ ಜಿ.ಟಿ. ನಿಟ್ಟಾಲಿ ಈ ಅಮಾನತು ಆದೇಶ ಹೊರಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಜಕತ್ವದ ಕಾರ್ಯಕ್ರಮಗಳಿಗೆ ಲಂಚ ಕೊಡುವಂತೆ ಕೇಳಿದ ಆರೋಪದ ಮೇಲೆ ಇಲಾಖೆಯ ಬಳ್ಳಾರಿ ಜಿಲ್ಲೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣವರ ಅವರನ್ನು ಶುಕ್ರವಾರ ಅಮಾನತು ಮಾಡಲಾಗಿದೆ.</p>.<p>ಪ್ರಾಯೋಜಕತ್ವದ ಯೋಜನೆಯಡಿ ಎರಡೆರಡು ಕಾರ್ಯಕ್ರಮಗಳನ್ನು ಪಡೆದ ಕಲಾವಿದರಿಂದ ಸಿದ್ದಲಿಂಗೇಶ್ ರಂಗಣ್ಣವರ ₹ 10 ಸಾವಿರ ಲಂಚಕ್ಕೆ ಬೇಡಿಕೆ ಇಡುತ್ತಾರೆ. ಇಲಾಖೆಯ ಜಂಟಿ ನಿರ್ದೇಶಕರಿಗೆ ಹಣ ತಲುಪಿಸಬೇಕು. ಹೀಗಾಗಿ, ಎರಡೆರಡು ಕಾರ್ಯಕ್ರಮ ಪಡೆದವರಿಂದ ಹಣ ಕೊಡಿಸುವಂತೆ ಕಲಾವಿದರೊಬ್ಬರನ್ನು ಮೊಬೈಲ್ನಲ್ಲಿ ಕೇಳಿದ್ದಾರೆ ಎನ್ನಲಾದ ಸಂಭಾಷಣೆ ಶುಕ್ರವಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.</p>.<p>ಇಲಾಖೆಯ ಮಹಿಳಾ ಉದ್ಯೋಗಿಯೊಬ್ಬರು, ಕಡೇ ಪಕ್ಷ ₹ 8 ಸಾವಿರವನ್ನಾದರೂ ತಲುಪಿಸುವಂತೆ ಈ ಕಲಾವಿದನಿಗೆ ದುಂಬಾಲು ಬೀಳುತ್ತಾರೆ. ಅವರ ಸಂಭಾಷಣೆಯೂ ಇದೇ ಆಡಿಯೋದಲ್ಲಿದೆ ಎಂದು ಹೇಳಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಪ್ರಕಾಶ ಜಿ.ಟಿ. ನಿಟ್ಟಾಲಿ ಈ ಅಮಾನತು ಆದೇಶ ಹೊರಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>