<p><strong>ಕೊಟ್ಟೂರು</strong>: ಗ್ರಾಮಸ್ಧರ ಸಹಕಾರ ಹಾಗೂ ಶಿಕ್ಷಕರ ಪರಿಶ್ರಮದಿಂದ ವಿವಿಧ ಪ್ರಶಸ್ತಿಗಳನ್ನು ಮುಡಿಗೇರಿಸಕೊಂಡು ಅಸಂಖ್ಯಾತ ವಿದ್ಯಾರ್ಥಿಗಳಿಗೆ ಬದುಕನ್ನು ಕಟ್ಟಿಕೊಟ್ಟ ಕನ್ನನಾಯಕನಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾದರಿಯಾಗಿದೆ ಎಂದು ಶಿಕ್ಷಕ ಕೆ.ವೀರಭದ್ರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ಕನ್ನನಾಯಕನಕಟ್ಟೆ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಅನೇಕ ಸೌಕರ್ಯಗಳನ್ನು ಹೊಂದಿ ರಾಜ್ಯಮಟ್ಟದ ಪ್ರಶಸ್ತಿಗಳನ್ನು ಪಡೆದು ನಾಡಿನ ಗಮನ ಸೆಳೆಯುವಲ್ಲಿ ಈ ಶಾಲೆ ಯಶಸ್ವಿಯಾಗಿದೆ.</p>.<p>ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಪ್ರವೇಶಾತಿ ಇಳಿಮುಖವಾಗುತ್ತಿರುವುದು ಖೇದಕರ ಸಂಗತಿಯಾಗಿದೆ. ಹಾಗಾಗಿ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿ ಸರ್ಕಾರ ನೀಡುವ ಅನೇಕ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವತ್ತ ಮುಂದಾಗಬೇಕೆಂದು ಸಲಹೆ ನೀಡಿದರು.</p>.<p>ಶಿಕ್ಷಕರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪಿ.ನಾಗೇಶ್, ಮುಖ್ಯ ಶಿಕ್ಷಕ ಯು.ಮೂಗಪ್ಪ, ಎಸ್ ಡಿಎಂಸಿ ಅಧ್ಯಕ್ಷೆ ಜಿ.ಶೃತಿ, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಕೆ.ಶಶಿಕಲಾ , ಎಸ್.ಚನ್ನೇಶ್, ಬಿ.ಮುತ್ತೇಶ್, ಎಂ.ಶಿವಕುಮಾರ್, ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಜಿ ಸಿದ್ದಪ್ಪ, ಸಿಆರ್ ಪಿ ರವಿಕುಮಾರ್, ಬಿಆರ್ ಪಿ ರವೀಂದ್ರ, ಶಿಕ್ಷಕರಾದ ಎಚ್.ಎನ್.ಬಸವರಾಜ್, ಟಿ.ಕೊಟ್ರಪ್ಪ, ಎನ್.ದುರುಗಪ್ಪ ಹಾಗೂ ಗ್ರಾಮಸ್ಧರು ಪಾಲ್ಗೊಂಡಿದ್ದರು.</p>.<p>ಈ ಸಂದರ್ಭದಲ್ಲಿ ಶಾಲೆಯಲ್ಲಿ ಸೇವೆ ಸಲ್ಲಿಸಿದ ಮುಖ್ಯಶಿಕ್ಷಕರು ಹಾಗೂ ಶಿಕ್ಷಕರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಟ್ಟೂರು</strong>: ಗ್ರಾಮಸ್ಧರ ಸಹಕಾರ ಹಾಗೂ ಶಿಕ್ಷಕರ ಪರಿಶ್ರಮದಿಂದ ವಿವಿಧ ಪ್ರಶಸ್ತಿಗಳನ್ನು ಮುಡಿಗೇರಿಸಕೊಂಡು ಅಸಂಖ್ಯಾತ ವಿದ್ಯಾರ್ಥಿಗಳಿಗೆ ಬದುಕನ್ನು ಕಟ್ಟಿಕೊಟ್ಟ ಕನ್ನನಾಯಕನಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾದರಿಯಾಗಿದೆ ಎಂದು ಶಿಕ್ಷಕ ಕೆ.ವೀರಭದ್ರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ಕನ್ನನಾಯಕನಕಟ್ಟೆ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಅನೇಕ ಸೌಕರ್ಯಗಳನ್ನು ಹೊಂದಿ ರಾಜ್ಯಮಟ್ಟದ ಪ್ರಶಸ್ತಿಗಳನ್ನು ಪಡೆದು ನಾಡಿನ ಗಮನ ಸೆಳೆಯುವಲ್ಲಿ ಈ ಶಾಲೆ ಯಶಸ್ವಿಯಾಗಿದೆ.</p>.<p>ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಪ್ರವೇಶಾತಿ ಇಳಿಮುಖವಾಗುತ್ತಿರುವುದು ಖೇದಕರ ಸಂಗತಿಯಾಗಿದೆ. ಹಾಗಾಗಿ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿ ಸರ್ಕಾರ ನೀಡುವ ಅನೇಕ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವತ್ತ ಮುಂದಾಗಬೇಕೆಂದು ಸಲಹೆ ನೀಡಿದರು.</p>.<p>ಶಿಕ್ಷಕರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪಿ.ನಾಗೇಶ್, ಮುಖ್ಯ ಶಿಕ್ಷಕ ಯು.ಮೂಗಪ್ಪ, ಎಸ್ ಡಿಎಂಸಿ ಅಧ್ಯಕ್ಷೆ ಜಿ.ಶೃತಿ, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಕೆ.ಶಶಿಕಲಾ , ಎಸ್.ಚನ್ನೇಶ್, ಬಿ.ಮುತ್ತೇಶ್, ಎಂ.ಶಿವಕುಮಾರ್, ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಜಿ ಸಿದ್ದಪ್ಪ, ಸಿಆರ್ ಪಿ ರವಿಕುಮಾರ್, ಬಿಆರ್ ಪಿ ರವೀಂದ್ರ, ಶಿಕ್ಷಕರಾದ ಎಚ್.ಎನ್.ಬಸವರಾಜ್, ಟಿ.ಕೊಟ್ರಪ್ಪ, ಎನ್.ದುರುಗಪ್ಪ ಹಾಗೂ ಗ್ರಾಮಸ್ಧರು ಪಾಲ್ಗೊಂಡಿದ್ದರು.</p>.<p>ಈ ಸಂದರ್ಭದಲ್ಲಿ ಶಾಲೆಯಲ್ಲಿ ಸೇವೆ ಸಲ್ಲಿಸಿದ ಮುಖ್ಯಶಿಕ್ಷಕರು ಹಾಗೂ ಶಿಕ್ಷಕರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>