‘ಪಾಲಿಕೆ ಚುನಾವಣೆಯಲ್ಲೂ ನಾವು ಸೋತಿದ್ದೇವೆ, ಬಳ್ಳಾರಿ ಇಬ್ಭಾಗ ಮಾಡಿದ ಸಿಟ್ಟು ಜನರಲ್ಲಿದೆ. ರಾಮುಲುಗೆ ಡಿಸಿಎಂ ಹುದ್ದೆ ನೀಡಿದರೆ ಅದು ಬಳ್ಳಾರಿ ಜಿಲ್ಲೆಯ ಕೋಟಾದಲ್ಲಿ ಬರುವುದಿಲ್ಲ. ಈಗ ಜಿಲ್ಲೆಯಲ್ಲಿ ಇರುವುದು ಕೇವಲ ಇಬ್ಬರು ಬಿಜೆಪಿ ಶಾಸಕರು. ನನಗೆ ಸಚಿವ ಸ್ಥಾನ ನೀಡಿ ಜಿಲ್ಲೆಯಲ್ಲಿ ಬಿಜೆಪಿ ಮತ್ತೆ ನೆಲೆಗೊಳ್ಳುವಂತೆ ಮಾಡಿ’ ಎಂದು ದೆಹಲಿ ನಾಯಕರಿಗೆ ರೆಡ್ಡಿ ಮನವಿ ಮಾಡಿದ್ದಾರೆ.