<p><strong>ತೆಕ್ಕಲಕೋಟೆ</strong>: ಸಮೀಪದ ಕರೂರು ಗ್ರಾಮದ ಕೊಟ್ಟೂರು ಬಸವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವವು ಗುರುವಾರ ಅದ್ಧೂರಿಯಾಗಿ ಸಂಪನ್ನಗೊಂಡಿತು.</p>.<p>ಗುರುವಾರ ಬೆಳಿಗ್ಗೆ ವೀರಗಾಸೆ, ರಾಂಡೋಲ್ ಸೇರಿದಂತೆ ಸಕಲ ವಾದ್ಯ ಮೇಳದೊಂದಿಗೆ ಕುಂಭ ಹೊತ್ತ ಮಹಿಳೆಯರಿಂದ ಎತ್ತಿನ ಬಂಡಿಯಲ್ಲಿ ಶಿವಕುಮಾರ ಸ್ವಾಮಿಗಳ ಭಾವಚಿತ್ರ ಮೆರವಣಿಗೆ ನಡೆಯಿತು. ನಂತರ ಗದುಗಿನ ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜ ಅವರಿಗೆ ತುಲಾಭಾರ ನಡೆಸಲಾಯಿತು. ಆ ಬಳಿಕ ಕೊಟ್ಟೂರು ಬಸವೇಶ್ವರ ಮೂರ್ತಿಗೆ ಗಂಗಾಭಿಷೇಕ, ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ನಾಮಾವಳಿ ಬಳಿಕ ಮಹಾಮಂಗಳಾರತಿ ನಡೆಯಿತು. ಜಂಗಮ ಗಣಾರಾಧನೆಯ ನಂತರ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು.</p>.<p>ಸಂಜೆ ಕೊಪ್ಪಳ ಗವಿಸಿದ್ದೇಶ್ವರ ಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಭಕ್ತರಿಗೆ ಸಂದೇಶವಾಣಿ ನೀಡಿದರು. ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಚರಣಗಿರಿ ಸಂಸ್ಥಾನ ಮಠದ ಅಭಿನವ ಮಹಂತ ಸ್ವಾಮೀಜಿ, ಹಾಲ್ವಿ ಕರ್ಚಿಗನೂರು ಅವರಿಂದ ಪುರಾಣ ಮಹಾ ಮಂಗಳ ಮಾಡಲಾಯಿತು.</p>.<p>ನಂತರ ವಿವಿಧ ಹೂಗಳು ಮತ್ತು ಹಸಿರು ತೋರಣಗಳಿಂದ ಅಲಂಕರಿಸಿದ ಭವ್ಯ ರಥಕ್ಕೆ ಶ್ರೀಗಳು, ಈಡುಗಾಯಿ ಒಡೆದು ರಥೋತ್ಸವಕ್ಕೆ ಚಾಲನೆ ನೀಡಿದರು.</p>.<p>ಬಸವೇಶ್ವರರ ಜಯಘೋಷ ಕೂಗುತ್ತ ಭಕ್ತರು ಹಗ್ಗ ಹಿಡಿದು ರಥವನ್ನು ಎಳೆಯುತ್ತಿದ್ದಂತೆ ನೆರೆದ ಭಕ್ತಸಾಗರ ಹೂಹಣ್ಣು-ಉತ್ತತ್ತಿಯನ್ನು ರಥಕ್ಕೆ ಎಸೆದು ಭಕ್ತಿ ಮೆರೆದರು. ಚಲಿಸಿದ ರಥ ಪಾದಗಟ್ಟೆಗೆ ಸಾಗಿ ಎದುರು ಬಸವಣ್ಣನಿಗೆ ಪೂಜೆ ಸಲ್ಲಿಸಿದ ನಂತರ ಮರಳಿ ರಥವನ್ನು ಯಥಾಸ್ಥಾನಕ್ಕೆ ತಂದು ಮುಕ್ತಾಯಗೊಳಿಸಲಾಯಿತು. ಜಾತ್ರೆಗೆ ಸುತ್ತಲಿನ ಹಲವು ಗ್ರಾಮಗಳ ಸಾವಿರಾರು ಭಕ್ತರು ಭಾಗವಹಿಸಿ ಹರಕೆ ತೀರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೆಕ್ಕಲಕೋಟೆ</strong>: ಸಮೀಪದ ಕರೂರು ಗ್ರಾಮದ ಕೊಟ್ಟೂರು ಬಸವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವವು ಗುರುವಾರ ಅದ್ಧೂರಿಯಾಗಿ ಸಂಪನ್ನಗೊಂಡಿತು.</p>.<p>ಗುರುವಾರ ಬೆಳಿಗ್ಗೆ ವೀರಗಾಸೆ, ರಾಂಡೋಲ್ ಸೇರಿದಂತೆ ಸಕಲ ವಾದ್ಯ ಮೇಳದೊಂದಿಗೆ ಕುಂಭ ಹೊತ್ತ ಮಹಿಳೆಯರಿಂದ ಎತ್ತಿನ ಬಂಡಿಯಲ್ಲಿ ಶಿವಕುಮಾರ ಸ್ವಾಮಿಗಳ ಭಾವಚಿತ್ರ ಮೆರವಣಿಗೆ ನಡೆಯಿತು. ನಂತರ ಗದುಗಿನ ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜ ಅವರಿಗೆ ತುಲಾಭಾರ ನಡೆಸಲಾಯಿತು. ಆ ಬಳಿಕ ಕೊಟ್ಟೂರು ಬಸವೇಶ್ವರ ಮೂರ್ತಿಗೆ ಗಂಗಾಭಿಷೇಕ, ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ನಾಮಾವಳಿ ಬಳಿಕ ಮಹಾಮಂಗಳಾರತಿ ನಡೆಯಿತು. ಜಂಗಮ ಗಣಾರಾಧನೆಯ ನಂತರ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು.</p>.<p>ಸಂಜೆ ಕೊಪ್ಪಳ ಗವಿಸಿದ್ದೇಶ್ವರ ಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಭಕ್ತರಿಗೆ ಸಂದೇಶವಾಣಿ ನೀಡಿದರು. ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಚರಣಗಿರಿ ಸಂಸ್ಥಾನ ಮಠದ ಅಭಿನವ ಮಹಂತ ಸ್ವಾಮೀಜಿ, ಹಾಲ್ವಿ ಕರ್ಚಿಗನೂರು ಅವರಿಂದ ಪುರಾಣ ಮಹಾ ಮಂಗಳ ಮಾಡಲಾಯಿತು.</p>.<p>ನಂತರ ವಿವಿಧ ಹೂಗಳು ಮತ್ತು ಹಸಿರು ತೋರಣಗಳಿಂದ ಅಲಂಕರಿಸಿದ ಭವ್ಯ ರಥಕ್ಕೆ ಶ್ರೀಗಳು, ಈಡುಗಾಯಿ ಒಡೆದು ರಥೋತ್ಸವಕ್ಕೆ ಚಾಲನೆ ನೀಡಿದರು.</p>.<p>ಬಸವೇಶ್ವರರ ಜಯಘೋಷ ಕೂಗುತ್ತ ಭಕ್ತರು ಹಗ್ಗ ಹಿಡಿದು ರಥವನ್ನು ಎಳೆಯುತ್ತಿದ್ದಂತೆ ನೆರೆದ ಭಕ್ತಸಾಗರ ಹೂಹಣ್ಣು-ಉತ್ತತ್ತಿಯನ್ನು ರಥಕ್ಕೆ ಎಸೆದು ಭಕ್ತಿ ಮೆರೆದರು. ಚಲಿಸಿದ ರಥ ಪಾದಗಟ್ಟೆಗೆ ಸಾಗಿ ಎದುರು ಬಸವಣ್ಣನಿಗೆ ಪೂಜೆ ಸಲ್ಲಿಸಿದ ನಂತರ ಮರಳಿ ರಥವನ್ನು ಯಥಾಸ್ಥಾನಕ್ಕೆ ತಂದು ಮುಕ್ತಾಯಗೊಳಿಸಲಾಯಿತು. ಜಾತ್ರೆಗೆ ಸುತ್ತಲಿನ ಹಲವು ಗ್ರಾಮಗಳ ಸಾವಿರಾರು ಭಕ್ತರು ಭಾಗವಹಿಸಿ ಹರಕೆ ತೀರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>