<p><strong>ಸಂಡೂರು (ಬಳ್ಳಾರಿ):</strong> ಚಲನಚಿತ್ರ ನಟ ಕಿಚ್ಚ ಸುದೀಪ್ ಅವರ ಅಭಿಮಾನಿ ಬಳಗದ ಸದಸ್ಯರು ತಾಲ್ಲೂಕಿನ ಬಂಡ್ರಿ ಗ್ರಾಮದಲ್ಲಿ ಗುರುವಾರ ಕೋಣದ ಮರಿಯನ್ನು ಸಾರ್ವಜನಿಕವಾಗಿ ಕಡಿದು, ಅದರ ರಕ್ತವನ್ನು ಕಿಚ್ಚ ಸುದೀಪ್ ಅವರ ಭಾವಚಿತ್ರಕ್ಕೆ ಎರಚುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.</p>.<p>ಸದಾ ಜನನಿಬಿಡ ಸ್ಥಳವಾಗಿರುವ ಗ್ರಾಮದ ಮಧ್ಯದ ವೃತ್ತದಲ್ಲಿ ಈ ರೀತಿ ಕೋಣದ ಮರಿಯನ್ನು ಕಡಿದು ಕೇಕೆ ಹಾಕುತ್ತಿರುವ ದೃಶ್ಯಗಳು ವಿಡಿಯೋದಲ್ಲಿವೆ.</p>.<p>ಕೆಲವು ಕಡೆಗಳಲ್ಲಿ ಸುದೀಪ್ ಅವರ ಹುಟ್ಟು ಹಬ್ಬದ ಅಂಗವಾಗಿ ರಕ್ತ ದಾನದಂತಹ ಉತ್ತಮ ಕಾರ್ಯಗಳನ್ನು ನಡೆಸಲಾಗಿದೆ. ಆದರೆ, ಇಲ್ಲಿ ಪ್ರಾಣಿಯೊಂದನ್ನು ಬಲಿ ನೀಡಿ, ಭಾವಚಿತ್ರಕ್ಕೆ ರಕ್ತವನ್ನು ಎರಚಿದ್ದರ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.</p>.<p>‘ಘಟನೆ ಕುರಿತು ಕೂಡ್ಲಿಗಿ ಪೊಲೀಸರಿಗೆ ತಿಳಿಸಲಾಗಿದೆ. ಪೊಲೀಸರು ಗ್ರಾಮಕ್ಕೆ ತೆರಳಿ, ವಿಡಿಯೊ ಆಧಾರದ ಮೇಲೆ ಪ್ರಕರಣದಲ್ಲಿ ಭಾಗಿಯಾದವರನ್ನು ಪತ್ತೆ ಹಚ್ಚುವ ಕಾರ್ಯ ನಡೆಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಎಫ್.ಐ. ಆರ್ ದಾಖಲಿಸಲಾಗುವುದು’ ಎಂದು ತಹಶೀಲ್ದಾರ್ ಎಚ್.ಜೆ. ರಶ್ಮಿ ತಿಳಿಸಿದರು.</p>.<p>ಈ ಘಟನೆಗೆ ಸಂಬಂಧಪಟ್ಟಂತೆ 25 ಆರೋಪಿಗಳ ವಿರುದ್ಧ ಕೂಡ್ಲಿಗಿ ಠಾಣೆಯ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಡೂರು (ಬಳ್ಳಾರಿ):</strong> ಚಲನಚಿತ್ರ ನಟ ಕಿಚ್ಚ ಸುದೀಪ್ ಅವರ ಅಭಿಮಾನಿ ಬಳಗದ ಸದಸ್ಯರು ತಾಲ್ಲೂಕಿನ ಬಂಡ್ರಿ ಗ್ರಾಮದಲ್ಲಿ ಗುರುವಾರ ಕೋಣದ ಮರಿಯನ್ನು ಸಾರ್ವಜನಿಕವಾಗಿ ಕಡಿದು, ಅದರ ರಕ್ತವನ್ನು ಕಿಚ್ಚ ಸುದೀಪ್ ಅವರ ಭಾವಚಿತ್ರಕ್ಕೆ ಎರಚುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.</p>.<p>ಸದಾ ಜನನಿಬಿಡ ಸ್ಥಳವಾಗಿರುವ ಗ್ರಾಮದ ಮಧ್ಯದ ವೃತ್ತದಲ್ಲಿ ಈ ರೀತಿ ಕೋಣದ ಮರಿಯನ್ನು ಕಡಿದು ಕೇಕೆ ಹಾಕುತ್ತಿರುವ ದೃಶ್ಯಗಳು ವಿಡಿಯೋದಲ್ಲಿವೆ.</p>.<p>ಕೆಲವು ಕಡೆಗಳಲ್ಲಿ ಸುದೀಪ್ ಅವರ ಹುಟ್ಟು ಹಬ್ಬದ ಅಂಗವಾಗಿ ರಕ್ತ ದಾನದಂತಹ ಉತ್ತಮ ಕಾರ್ಯಗಳನ್ನು ನಡೆಸಲಾಗಿದೆ. ಆದರೆ, ಇಲ್ಲಿ ಪ್ರಾಣಿಯೊಂದನ್ನು ಬಲಿ ನೀಡಿ, ಭಾವಚಿತ್ರಕ್ಕೆ ರಕ್ತವನ್ನು ಎರಚಿದ್ದರ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.</p>.<p>‘ಘಟನೆ ಕುರಿತು ಕೂಡ್ಲಿಗಿ ಪೊಲೀಸರಿಗೆ ತಿಳಿಸಲಾಗಿದೆ. ಪೊಲೀಸರು ಗ್ರಾಮಕ್ಕೆ ತೆರಳಿ, ವಿಡಿಯೊ ಆಧಾರದ ಮೇಲೆ ಪ್ರಕರಣದಲ್ಲಿ ಭಾಗಿಯಾದವರನ್ನು ಪತ್ತೆ ಹಚ್ಚುವ ಕಾರ್ಯ ನಡೆಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಎಫ್.ಐ. ಆರ್ ದಾಖಲಿಸಲಾಗುವುದು’ ಎಂದು ತಹಶೀಲ್ದಾರ್ ಎಚ್.ಜೆ. ರಶ್ಮಿ ತಿಳಿಸಿದರು.</p>.<p>ಈ ಘಟನೆಗೆ ಸಂಬಂಧಪಟ್ಟಂತೆ 25 ಆರೋಪಿಗಳ ವಿರುದ್ಧ ಕೂಡ್ಲಿಗಿ ಠಾಣೆಯ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>