<p><strong>ಬಳ್ಳಾರಿ</strong>: ‘ಕೆಐಒಸಿಎಲ್ ವಿಚಾರದಲ್ಲಿ ರಾಜ್ಯ ಸರ್ಕಾರವು ಸ್ಥಳೀಯ ಜನಪ್ರತಿನಿಧಿಗಳನ್ನು ಎತ್ತಿಕಟ್ಟುತ್ತಿದೆ. ಎನ್ಎಂಡಿಸಿಯ ಕಾರ್ಯಚಟುವಟಿಕೆಯ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ’ ಎಂದು ದೆಹಲಿಯಲ್ಲಿ ಇತ್ತೀಚೆಗೆ ಆರೋಪಿಸಿದ್ದ ಕೇಂದ್ರ ಉಕ್ಕು ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಬಳ್ಳಾರಿ–ವಿಜಯನಗರ ಸಂಸದ ಇ. ತುಕಾರಾಂ ಬುಧವಾರ ತೀಕ್ಷ್ಣ ತಿರುಗೇಟು ನೀಡಿದ್ದಾರೆ. </p>.<p>ಈ ಕುರಿತು ಎಚ್ಡಿಕೆಗೆ ಪತ್ರ ಬರೆದಿರುವ ತುಕಾರಾಂ, ಎಚ್ಡಿಕೆ ಹೇಳಿಕೆಯನ್ನು ಆಕ್ಷೇಪಿಸಿದ್ದಾರೆ. ‘4 ಭಾರಿ ಶಾಸಕನಾಗಿ, 2018ರ ಸರ್ಕಾರದಲ್ಲಿ ತಮ್ಮದೇ ಸಂಪುಟದಲ್ಲಿ ಸಚಿವನಾಗಿ, ಸಂಸದನಾಗಿ ಸಾಂವಿಧಾನಿಕ ಮೌಲ್ಯಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತಿರುವುದಾಗಿಯೂ, ನಿಷ್ಕಳಂಕ ರಾಜಕಾರಣ ಮಾಡಿಕೊಂಡು ಬರುತ್ತಿರುವುದಾಗಿ’ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. </p>.<p>ಸಂಡೂರಿನಲ್ಲಿ ಎನ್ಎಂಡಿಸಿ ಕಂಪನಿಯು ಅವೈಜ್ಞಾನಿಕವಾಗಿ ಗಣಿಗಾರಿಕೆಯಲ್ಲಿ ತೊಡಗಿರುವುದಾಗಿಯೂ, ಕನ್ನಡಿಗರಿಗೆ ಉದ್ಯೋಗ ವಂಚಿಸಿರುವುದಾಗಿಯೂ, ಕಾರ್ಖಾನೆ ಸ್ಥಾಪಿಸುವುದಾಗಿ ಹೇಳಿ ಸಾವಿರಾರು ಎಕರೆ ಜಾಗ ಪಡೆದುಕೊಂಡರೂ ಈ ವರೆಗೆ ಕಾರ್ಖಾನೆ ಸ್ಥಾಪನೆ ಮಾಡದೇ ಇರುವುದನ್ನು ಅವರು ತಮ್ಮ ಪತ್ರದಲ್ಲಿ ನೆನಪಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ‘ಕೆಐಒಸಿಎಲ್ ವಿಚಾರದಲ್ಲಿ ರಾಜ್ಯ ಸರ್ಕಾರವು ಸ್ಥಳೀಯ ಜನಪ್ರತಿನಿಧಿಗಳನ್ನು ಎತ್ತಿಕಟ್ಟುತ್ತಿದೆ. ಎನ್ಎಂಡಿಸಿಯ ಕಾರ್ಯಚಟುವಟಿಕೆಯ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ’ ಎಂದು ದೆಹಲಿಯಲ್ಲಿ ಇತ್ತೀಚೆಗೆ ಆರೋಪಿಸಿದ್ದ ಕೇಂದ್ರ ಉಕ್ಕು ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಬಳ್ಳಾರಿ–ವಿಜಯನಗರ ಸಂಸದ ಇ. ತುಕಾರಾಂ ಬುಧವಾರ ತೀಕ್ಷ್ಣ ತಿರುಗೇಟು ನೀಡಿದ್ದಾರೆ. </p>.<p>ಈ ಕುರಿತು ಎಚ್ಡಿಕೆಗೆ ಪತ್ರ ಬರೆದಿರುವ ತುಕಾರಾಂ, ಎಚ್ಡಿಕೆ ಹೇಳಿಕೆಯನ್ನು ಆಕ್ಷೇಪಿಸಿದ್ದಾರೆ. ‘4 ಭಾರಿ ಶಾಸಕನಾಗಿ, 2018ರ ಸರ್ಕಾರದಲ್ಲಿ ತಮ್ಮದೇ ಸಂಪುಟದಲ್ಲಿ ಸಚಿವನಾಗಿ, ಸಂಸದನಾಗಿ ಸಾಂವಿಧಾನಿಕ ಮೌಲ್ಯಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತಿರುವುದಾಗಿಯೂ, ನಿಷ್ಕಳಂಕ ರಾಜಕಾರಣ ಮಾಡಿಕೊಂಡು ಬರುತ್ತಿರುವುದಾಗಿ’ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. </p>.<p>ಸಂಡೂರಿನಲ್ಲಿ ಎನ್ಎಂಡಿಸಿ ಕಂಪನಿಯು ಅವೈಜ್ಞಾನಿಕವಾಗಿ ಗಣಿಗಾರಿಕೆಯಲ್ಲಿ ತೊಡಗಿರುವುದಾಗಿಯೂ, ಕನ್ನಡಿಗರಿಗೆ ಉದ್ಯೋಗ ವಂಚಿಸಿರುವುದಾಗಿಯೂ, ಕಾರ್ಖಾನೆ ಸ್ಥಾಪಿಸುವುದಾಗಿ ಹೇಳಿ ಸಾವಿರಾರು ಎಕರೆ ಜಾಗ ಪಡೆದುಕೊಂಡರೂ ಈ ವರೆಗೆ ಕಾರ್ಖಾನೆ ಸ್ಥಾಪನೆ ಮಾಡದೇ ಇರುವುದನ್ನು ಅವರು ತಮ್ಮ ಪತ್ರದಲ್ಲಿ ನೆನಪಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>