<p>ಕೂಡ್ಲಿಗಿ: ಪಟ್ಟಣದ ಬಸವೇಶ್ವರ ವೃತ್ತದ ಬಳಿ ಚಿಕನ್ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಟೋಟಗೊಂಡು ಅಂಗಡಿ ಮಾಲೀಕ ಸೇರಿದಂತೆ ಸಾರ್ವಜನಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಬುಧವಾರ ನಡೆದಿದೆ.</p>.<p>ಎಂದಿನಂತೆ ಕೋಳಿ ಮಾಂಸ ಬೇಯಿಸಲು ಅಂಗಡಿ ಮಾಲೀಕ ಗ್ಯಾಸ್ ಒಲೆ ಹಚ್ಚಿದಾಗ, ಸ್ಟವ್ನಿಂದ ಸಿಲಿಂಡರ್ ಗೆ ಹೋಗಿರುವ ಪೈಪ್ ಹಾಳಾಗಿತ್ತು. ಅದನ್ನು ಗಮನಿಸದ ಅಂಗಡಿ ಮಾಲೀಕ ಒಲೆಗೆ ಬೆಂಕಿ ಹಚ್ಚಿದ ತಕ್ಷಣವೇ ಪೈಪ್ ಮೂಲಕ ಬೆಂಕಿ ಆವರಿಸಿದೆ.</p>.<p>ಇದರಿಂದ ವಿಚಲಿತನಾದ ಮಾಲೀಕ ಅಂಗಡಿಯಿಂದ ಹೊರಗಡೆ ಓಡಿ ಬಂದಿದ್ದಾನೆ. ಇದೇ ರಸ್ತೆಯ ಮಾರ್ಗವಾಗಿ ಹೋಗುತ್ತಿದ್ದ ಪಟ್ಟಣದ ಪೊಲೀಸ್ ಠಾಣೆ ಪಿಎಸ್ಐ ಸಿ.ಪ್ರಕಾಶ್ ಹಾಗೂ ಸಿಬ್ಬಂದಿ ಮಂಜುನಾಥ ತಕ್ಷಣವೇ ಜಾಗೃತರಾಗಿ ಸಾರ್ವಜನಿಕರು ಯಾರು ಆ ಮಾರ್ಗದಲ್ಲಿ ಸಂಚಾರ ಮಾಡದಂತೆ ರಸ್ತೆ ನಿರ್ಭಂದ ಮಾಡಿ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ.</p>.<p>ನಂತರ ಬೆಂಕಿ ಅಂಗಡಿಯನ್ನು ಆವರಿಸಿ ಸಿಲಿಂಡರ್ ಸ್ಪೋಟವಾಗಿದ್ದು, ಯಾರಿಗೂ ಪ್ರಾಣಾಪಾಯವಾಗದಂತೆ ಮುನ್ನೆಚ್ಚರಿಕೆ ವಹಿಸಿದ್ದು ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-25-624746903</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೂಡ್ಲಿಗಿ: ಪಟ್ಟಣದ ಬಸವೇಶ್ವರ ವೃತ್ತದ ಬಳಿ ಚಿಕನ್ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಟೋಟಗೊಂಡು ಅಂಗಡಿ ಮಾಲೀಕ ಸೇರಿದಂತೆ ಸಾರ್ವಜನಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಬುಧವಾರ ನಡೆದಿದೆ.</p>.<p>ಎಂದಿನಂತೆ ಕೋಳಿ ಮಾಂಸ ಬೇಯಿಸಲು ಅಂಗಡಿ ಮಾಲೀಕ ಗ್ಯಾಸ್ ಒಲೆ ಹಚ್ಚಿದಾಗ, ಸ್ಟವ್ನಿಂದ ಸಿಲಿಂಡರ್ ಗೆ ಹೋಗಿರುವ ಪೈಪ್ ಹಾಳಾಗಿತ್ತು. ಅದನ್ನು ಗಮನಿಸದ ಅಂಗಡಿ ಮಾಲೀಕ ಒಲೆಗೆ ಬೆಂಕಿ ಹಚ್ಚಿದ ತಕ್ಷಣವೇ ಪೈಪ್ ಮೂಲಕ ಬೆಂಕಿ ಆವರಿಸಿದೆ.</p>.<p>ಇದರಿಂದ ವಿಚಲಿತನಾದ ಮಾಲೀಕ ಅಂಗಡಿಯಿಂದ ಹೊರಗಡೆ ಓಡಿ ಬಂದಿದ್ದಾನೆ. ಇದೇ ರಸ್ತೆಯ ಮಾರ್ಗವಾಗಿ ಹೋಗುತ್ತಿದ್ದ ಪಟ್ಟಣದ ಪೊಲೀಸ್ ಠಾಣೆ ಪಿಎಸ್ಐ ಸಿ.ಪ್ರಕಾಶ್ ಹಾಗೂ ಸಿಬ್ಬಂದಿ ಮಂಜುನಾಥ ತಕ್ಷಣವೇ ಜಾಗೃತರಾಗಿ ಸಾರ್ವಜನಿಕರು ಯಾರು ಆ ಮಾರ್ಗದಲ್ಲಿ ಸಂಚಾರ ಮಾಡದಂತೆ ರಸ್ತೆ ನಿರ್ಭಂದ ಮಾಡಿ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ.</p>.<p>ನಂತರ ಬೆಂಕಿ ಅಂಗಡಿಯನ್ನು ಆವರಿಸಿ ಸಿಲಿಂಡರ್ ಸ್ಪೋಟವಾಗಿದ್ದು, ಯಾರಿಗೂ ಪ್ರಾಣಾಪಾಯವಾಗದಂತೆ ಮುನ್ನೆಚ್ಚರಿಕೆ ವಹಿಸಿದ್ದು ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-25-624746903</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>