<p><strong>ಕೊಟ್ಟೂರು</strong>: ಮುಂಗಾರು ಹಂಗಾಮಿನಲ್ಲಿ ಮೆಕ್ಕೆಜೋಳ ಇಳುವರಿ ಸಮೃದ್ಧವಾಗಿ ಬಂದಿರುವುದರಿಂದ ಕೂಡಲೇ ಖರೀದಿ ಕೇಂದ್ರ ತೆರೆದು ರೈತರಿಗೆ ನ್ಯಾಯಯುತ ಬೆಲೆ ದೊರಕಿಸಿಕೊಡಲು ಸರ್ಕಾರ ಮುಂದಾಗಬೇಕೆಂದು ರೈತ ಸಂಘದ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಗುಡಿಯಾರ ಮಲ್ಲಿಕಾರ್ಜುನ್ ಆಗ್ರಹಿಸಿದರು.</p>.<p>ಪಟ್ಟಣದ ತಾಲ್ಲೂಕು ಕಛೇರಿಯಲ್ಲಿ ಗ್ರೇಡ್ 2 ತಹಶೀಲ್ದಾರ್ ಎಂ.ಪ್ರತಿಭಾ ಅವರಿಗೆ ಸೋಮವಾರ ಮನವಿ ಸಲ್ಲಿಸಿ ಮಾತನಾಡಿ, ದಲ್ಲಾಲಿ ಅಂಗಡಿಗಳಲ್ಲಿ ಮಾರಾಟ ಮಾಡಿದರೆ ಕಡಿಮೆ ದರ ನಿಗದಿಪಡಿಸುವುದಲ್ಲದೇ ಬಿಳಿ ಚೀಟಿ ನೀಡುತ್ತಿರುವುದರಿಂದ ರೈತರಿಗೆ ಅನ್ಯಾಯವಾಗುತ್ತಿದ್ದು ಎಪಿಎಂಸಿ ಆಡಳಿತ ಮಂಡಳಿ ಕ್ರಮ ಕೈಗೊಳ್ಳಬೇಕೆಂದರು.</p>.<p>ಗ್ರಾಮಾಂತರ ಪ್ರದೇಶದಲ್ಲಿ ರಾತ್ರಿ ವಿದ್ಯುತ್ ಪೂರೈಸುವುದರಿಂದ ರೈತರು ಜಮೀನುಗಳಿಗೆ ನೀರು ಹಾಯಿಸಲು ಅನಾಕೂಲವಾಗುತ್ತದೆ. ಜೆಸ್ಕಾಂ ಇಲಾಖೆ ಹಗಲಿನಲ್ಲಿ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ರಾಂಪುರ ಸುಧಾಕರ್, ಚಿರಿಬಿ ಸುರೇಶ್, ಸಿದ್ಧೇಶ, ಕರಿಯಪ್ಪ, ಕೆ.ಬಸವರಾಜ್, ಕೆ.ಕೆಂಚಪ್ಪ, ಪಿ.ಚಂದ್ರಶೇಖರ್, ಎಚ್.ಪರಸಪ್ಪ, ಶೇಖರ್ ನಾಯ್ಕ, ನಾಗಪ್ಪ, ವೀರಭದ್ರಪ್ಪ ರೈತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಟ್ಟೂರು</strong>: ಮುಂಗಾರು ಹಂಗಾಮಿನಲ್ಲಿ ಮೆಕ್ಕೆಜೋಳ ಇಳುವರಿ ಸಮೃದ್ಧವಾಗಿ ಬಂದಿರುವುದರಿಂದ ಕೂಡಲೇ ಖರೀದಿ ಕೇಂದ್ರ ತೆರೆದು ರೈತರಿಗೆ ನ್ಯಾಯಯುತ ಬೆಲೆ ದೊರಕಿಸಿಕೊಡಲು ಸರ್ಕಾರ ಮುಂದಾಗಬೇಕೆಂದು ರೈತ ಸಂಘದ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಗುಡಿಯಾರ ಮಲ್ಲಿಕಾರ್ಜುನ್ ಆಗ್ರಹಿಸಿದರು.</p>.<p>ಪಟ್ಟಣದ ತಾಲ್ಲೂಕು ಕಛೇರಿಯಲ್ಲಿ ಗ್ರೇಡ್ 2 ತಹಶೀಲ್ದಾರ್ ಎಂ.ಪ್ರತಿಭಾ ಅವರಿಗೆ ಸೋಮವಾರ ಮನವಿ ಸಲ್ಲಿಸಿ ಮಾತನಾಡಿ, ದಲ್ಲಾಲಿ ಅಂಗಡಿಗಳಲ್ಲಿ ಮಾರಾಟ ಮಾಡಿದರೆ ಕಡಿಮೆ ದರ ನಿಗದಿಪಡಿಸುವುದಲ್ಲದೇ ಬಿಳಿ ಚೀಟಿ ನೀಡುತ್ತಿರುವುದರಿಂದ ರೈತರಿಗೆ ಅನ್ಯಾಯವಾಗುತ್ತಿದ್ದು ಎಪಿಎಂಸಿ ಆಡಳಿತ ಮಂಡಳಿ ಕ್ರಮ ಕೈಗೊಳ್ಳಬೇಕೆಂದರು.</p>.<p>ಗ್ರಾಮಾಂತರ ಪ್ರದೇಶದಲ್ಲಿ ರಾತ್ರಿ ವಿದ್ಯುತ್ ಪೂರೈಸುವುದರಿಂದ ರೈತರು ಜಮೀನುಗಳಿಗೆ ನೀರು ಹಾಯಿಸಲು ಅನಾಕೂಲವಾಗುತ್ತದೆ. ಜೆಸ್ಕಾಂ ಇಲಾಖೆ ಹಗಲಿನಲ್ಲಿ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ರಾಂಪುರ ಸುಧಾಕರ್, ಚಿರಿಬಿ ಸುರೇಶ್, ಸಿದ್ಧೇಶ, ಕರಿಯಪ್ಪ, ಕೆ.ಬಸವರಾಜ್, ಕೆ.ಕೆಂಚಪ್ಪ, ಪಿ.ಚಂದ್ರಶೇಖರ್, ಎಚ್.ಪರಸಪ್ಪ, ಶೇಖರ್ ನಾಯ್ಕ, ನಾಗಪ್ಪ, ವೀರಭದ್ರಪ್ಪ ರೈತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>