<p><strong>ಕೊಟ್ಟೂರು</strong>: ಪಟ್ಟಣದ ವೈದ್ಯ ಡಾ.ಜಿ.ಸಂತೋಷಕುಮಾರ್ ಇತ್ತೀಚಿಗೆ ಅರ್ಜೆಂಟೆನಾ ದೇಶದ ಅತಿ ಎತ್ತರದ ಪರ್ವತವಾಗಿರುವ ಮೌಂಟ್ ಅಕಾಂಕಾಗುವಾ ಶಿಖರವನ್ನು 8 ತಾಸಿನೊಳಗೆ ಏರುವ ಮೂಲಕ ಸಾಧನೆಗೈದಿದ್ದು, ಇವರ ತಂಡದವರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಭ ಕೋರಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.</p>.<p>ಮೂಲತಃ ಕೊಟ್ಟೂರಿನವರಾದ ಯುವ ವೈದ್ಯ ಡಾ.ಸಂತೋಷಕುಮಾರ್ ಚಿಕ್ಕಜೋಗಿಹಳ್ಳಿಯ ನವೋದಯ ವಿದ್ಯಾಲಯದಲ್ಲಿ ವಿದ್ಯಾಬ್ಯಾಸ ಮಾಡಿ ರಷ್ಯಾ ದೇಶದಲ್ಲಿ ವೈದ್ಯಕೀಯ ಪದವಿಯನ್ನು ಪಡೆದು ಕೊಟ್ಟೂರಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿರುವಾಗ ದೇಶ ಸೇವೆ ಮಾಡಬೇಕೆಂಬ ಮಹದಾಸೆಯಿಂದ ಭಾರತೀಯ ಸೇನೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.</p>.<p>2024ರಲ್ಲಿ ಪರ್ವತಾರೋಹಿಗಳೊಂದಿಗೆ ಉತ್ತರಾಖಂಡ ರಾಜ್ಯದ ಗಡ್ವಾಲ್ ಹಿಮಾಲಯ ಪರ್ವತ ಶಿಖರವನ್ನು ಏರಿದ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆಯಾಗಿದೆ. ವೃತ್ತಿಯ ಜೊತೆ ಹಲವು ಪ್ರವೃತ್ತಿಗಳನ್ನು ರೂಢಿಸಿಕೊಂಡು ಸಾಧನೆಗೈಯುತ್ತಿರುವ ಡಾ.ಜಿ.ಸಂತೋಷಕುಮಾರ್ ಯುವ ಸಮೂಹಕ್ಕೆ ಸ್ಪೂರ್ತಿಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಟ್ಟೂರು</strong>: ಪಟ್ಟಣದ ವೈದ್ಯ ಡಾ.ಜಿ.ಸಂತೋಷಕುಮಾರ್ ಇತ್ತೀಚಿಗೆ ಅರ್ಜೆಂಟೆನಾ ದೇಶದ ಅತಿ ಎತ್ತರದ ಪರ್ವತವಾಗಿರುವ ಮೌಂಟ್ ಅಕಾಂಕಾಗುವಾ ಶಿಖರವನ್ನು 8 ತಾಸಿನೊಳಗೆ ಏರುವ ಮೂಲಕ ಸಾಧನೆಗೈದಿದ್ದು, ಇವರ ತಂಡದವರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಭ ಕೋರಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.</p>.<p>ಮೂಲತಃ ಕೊಟ್ಟೂರಿನವರಾದ ಯುವ ವೈದ್ಯ ಡಾ.ಸಂತೋಷಕುಮಾರ್ ಚಿಕ್ಕಜೋಗಿಹಳ್ಳಿಯ ನವೋದಯ ವಿದ್ಯಾಲಯದಲ್ಲಿ ವಿದ್ಯಾಬ್ಯಾಸ ಮಾಡಿ ರಷ್ಯಾ ದೇಶದಲ್ಲಿ ವೈದ್ಯಕೀಯ ಪದವಿಯನ್ನು ಪಡೆದು ಕೊಟ್ಟೂರಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿರುವಾಗ ದೇಶ ಸೇವೆ ಮಾಡಬೇಕೆಂಬ ಮಹದಾಸೆಯಿಂದ ಭಾರತೀಯ ಸೇನೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.</p>.<p>2024ರಲ್ಲಿ ಪರ್ವತಾರೋಹಿಗಳೊಂದಿಗೆ ಉತ್ತರಾಖಂಡ ರಾಜ್ಯದ ಗಡ್ವಾಲ್ ಹಿಮಾಲಯ ಪರ್ವತ ಶಿಖರವನ್ನು ಏರಿದ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆಯಾಗಿದೆ. ವೃತ್ತಿಯ ಜೊತೆ ಹಲವು ಪ್ರವೃತ್ತಿಗಳನ್ನು ರೂಢಿಸಿಕೊಂಡು ಸಾಧನೆಗೈಯುತ್ತಿರುವ ಡಾ.ಜಿ.ಸಂತೋಷಕುಮಾರ್ ಯುವ ಸಮೂಹಕ್ಕೆ ಸ್ಪೂರ್ತಿಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>