<p><strong>ಕೊಟ್ಟೂರು:</strong> ‘ಸಮಾಜದಲ್ಲಿರುವ ನ್ಯೂನತೆಗಳನ್ನು ತಿದ್ದುವಲ್ಲಿ ನಾಟಕ ಪ್ರಮುಖ ಪಾತ್ರವಹಿಸುತ್ತದೆ’ ಎಂದು ಗುತ್ತಿಗೆದಾರ ಎನ್.ಹೇಮಣ್ಣ ಅಲಬೂರು ಹೇಳಿದರು.</p>.<p>ಪಟ್ಟಣದ ಎಪಿಎಂಸಿ ಆವರಣದಲ್ಲಿ ಕೊಟ್ಟೂರೇಶ್ವರಸ್ವಾಮಿ ರಥೋತ್ಸವದ ಪ್ರಯುಕ್ತ ಕುಡುತಿನಿಮೊಗ್ಗೆ ಗ್ರಾಮದ ವಿನಾಯಕ ಮಿತ್ರ ಬಳಗದ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಶನಿವಾರ ಆಯೋಜಿಸಿದ್ದ ‘ಪ್ರಚಂಡ ಪರಶುರಾಮ’ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಇತ್ತಿಚಿನ ದಿನಗಳಲ್ಲಿ ನಾಟಕ ನೋಡುವ ಹವ್ಯಾಸ ಕಡಿಮೆಯಾಗುತ್ತಿರುವುದು ಆತಂಕದ ವಿಷಯ. ನಾಟಕಗಳು ಸಮಾಜದಲ್ಲಿನ ಪ್ರಚಲಿತ ವಿದ್ಯಮಾನಗಳನ್ನು ಪ್ರತಿಬಿಂಬಿಸುವುದರಿಂದ ನೋಡುವ ಹವ್ಯಾಸವನ್ನು ಎಲ್ಲರೂ ಬೆಳೆಸಿಕೊಳ್ಳಬೇಕು’ ಎಂದರು.</p>.<p>ರೆಡ್ಡಿ ಸಂಘದ ತಾಲ್ಲೂಕು ಘಟಕದ ಗೌರವಾಧ್ಯಕ್ಷ ಪಿ.ದೇವೇಂದ್ರಗೌಡ ಮಾತನಾಡಿ, ‘ರಂಗಭೂಮಿ ಪ್ರಾಚೀನ ಕಾಲದಿಂದಲೂ ಮನರಂಜನಾ ಮಾಧ್ಯಮಗಳಲ್ಲಿ ಒಂದಾಗಿದ್ದು, ಜನರ ಮನಸ್ಸಿಗೆ ಮುದ ನೀಡುತ್ತದೆ’ ಎಂದರು.</p>.<p>ಗ್ರಾಮ ಪಂಚಾಯಿಂದ ಅಧ್ಯಕ್ಷೆ ಹೊಳಲಮ್ಮ ಹನುಮಂತಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೆಡ್ಡಿ ಸಂಘದ ತಾಲ್ಲೂಕು ಘಟಕದ ಉಪಾಧ್ಯಕ್ಷ ಗೂಳಿ ಸುರೇಶ್, ತಿಮ್ಮಲಾಪುರ ಕೊಟ್ರೇಶ್, ಬಿಡಿಸಿಸಿ ಬ್ಯಾಂಕ್ ಕ್ಷೇತ್ರಾಧಿಕಾರಿ ಎಂ.ಕೊಟ್ರೇಶ್, ದೂಪದಹಳ್ಳಿ ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಟ್ಟೂರು:</strong> ‘ಸಮಾಜದಲ್ಲಿರುವ ನ್ಯೂನತೆಗಳನ್ನು ತಿದ್ದುವಲ್ಲಿ ನಾಟಕ ಪ್ರಮುಖ ಪಾತ್ರವಹಿಸುತ್ತದೆ’ ಎಂದು ಗುತ್ತಿಗೆದಾರ ಎನ್.ಹೇಮಣ್ಣ ಅಲಬೂರು ಹೇಳಿದರು.</p>.<p>ಪಟ್ಟಣದ ಎಪಿಎಂಸಿ ಆವರಣದಲ್ಲಿ ಕೊಟ್ಟೂರೇಶ್ವರಸ್ವಾಮಿ ರಥೋತ್ಸವದ ಪ್ರಯುಕ್ತ ಕುಡುತಿನಿಮೊಗ್ಗೆ ಗ್ರಾಮದ ವಿನಾಯಕ ಮಿತ್ರ ಬಳಗದ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಶನಿವಾರ ಆಯೋಜಿಸಿದ್ದ ‘ಪ್ರಚಂಡ ಪರಶುರಾಮ’ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಇತ್ತಿಚಿನ ದಿನಗಳಲ್ಲಿ ನಾಟಕ ನೋಡುವ ಹವ್ಯಾಸ ಕಡಿಮೆಯಾಗುತ್ತಿರುವುದು ಆತಂಕದ ವಿಷಯ. ನಾಟಕಗಳು ಸಮಾಜದಲ್ಲಿನ ಪ್ರಚಲಿತ ವಿದ್ಯಮಾನಗಳನ್ನು ಪ್ರತಿಬಿಂಬಿಸುವುದರಿಂದ ನೋಡುವ ಹವ್ಯಾಸವನ್ನು ಎಲ್ಲರೂ ಬೆಳೆಸಿಕೊಳ್ಳಬೇಕು’ ಎಂದರು.</p>.<p>ರೆಡ್ಡಿ ಸಂಘದ ತಾಲ್ಲೂಕು ಘಟಕದ ಗೌರವಾಧ್ಯಕ್ಷ ಪಿ.ದೇವೇಂದ್ರಗೌಡ ಮಾತನಾಡಿ, ‘ರಂಗಭೂಮಿ ಪ್ರಾಚೀನ ಕಾಲದಿಂದಲೂ ಮನರಂಜನಾ ಮಾಧ್ಯಮಗಳಲ್ಲಿ ಒಂದಾಗಿದ್ದು, ಜನರ ಮನಸ್ಸಿಗೆ ಮುದ ನೀಡುತ್ತದೆ’ ಎಂದರು.</p>.<p>ಗ್ರಾಮ ಪಂಚಾಯಿಂದ ಅಧ್ಯಕ್ಷೆ ಹೊಳಲಮ್ಮ ಹನುಮಂತಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೆಡ್ಡಿ ಸಂಘದ ತಾಲ್ಲೂಕು ಘಟಕದ ಉಪಾಧ್ಯಕ್ಷ ಗೂಳಿ ಸುರೇಶ್, ತಿಮ್ಮಲಾಪುರ ಕೊಟ್ರೇಶ್, ಬಿಡಿಸಿಸಿ ಬ್ಯಾಂಕ್ ಕ್ಷೇತ್ರಾಧಿಕಾರಿ ಎಂ.ಕೊಟ್ರೇಶ್, ದೂಪದಹಳ್ಳಿ ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>