<p><strong>ಕೊಟ್ಟೂರು</strong>: ಕ್ಷೇತ್ರದಾದ್ಯಂತ ಮೂಲಸೌಕರ್ಯಗಳಿಗೆ ಆದ್ಯತೆ ನೀಡುವ ಮೂಲಕ ಮಾದರಿ ಕ್ಷೇತ್ರವನ್ನಾಗಿಸಲು ಶ್ರಮಿಸುವೆ ಎಂದು ಶಾಸಕ ಕೆ.ನೇಮರಾಜನಾಯ್ಕ ಭರವಸೆ ನೀಡಿದರು.</p>.<p>ಪಟ್ಟಣದ ವಿವಿಧ ವಾರ್ಡ್ಗಳಿಗೆ ₹18 ಕೋಟಿ ವೆಚ್ಚದ ಸಿ.ಸಿ. ರಸ್ತೆ ಕಾಮಗಾರಿಗೆ ಬುಧವಾರ ಚಾಲನೆ ನೀಡಿ, ‘ನಗರಾಭಿವೃದ್ಧಿ ಇಲಾಖೆ ಅನುದಾನದಲ್ಲಿ ಕ್ಷೇತ್ರದಾದ್ಯಂತ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು’ ಎಂದರು.</p>.<p>‘ಕೊಟ್ಟೂರೇಶ್ವರ ರಥೋತ್ಸವದ ವೇಳೆಗೆ ಪಟ್ಟಣದ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು ಹಾಗೂ ಚಿರಬಿ, ಉಜ್ಜಯಿನಿ ರಸ್ತೆಗಳ ₹18 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುವುದು. ತಾಲ್ಲೂಕು ಕೇಂದ್ರಕ್ಕೆ ಅಗತ್ಯವಿರುವ ಪೂರ್ಣಪ್ರಮಾಣದ ಕಚೇರಿಗಳ ಆರಂಭಕ್ಕೆ ಸರ್ಕಾರದ ಮೇಲೆ ಒತ್ತಡ ಹಾಕುವೆ’ ಎಂದು ತಿಳಿಸಿದರು.</p>.<p>‘ಕ್ಷೇತ್ರದ ಎಲ್ಲ ಗ್ರಾಮಗಳಲ್ಲೂ ಸಮುದಾಯ ಭವನಗಳ ನಿರ್ಮಾಣ ಮಾಡಲಾಗುವುದು’ ಎಂದೂ ತಿಳಿಸಿದರು.</p>.<p>ಮುಖಂಡರಾದ ಎಂ.ಎಂ.ಜೆ. ಹರ್ಷವರ್ಧನ್, ಜೆಡಿಎಸ್ ಕ್ಷೇತ್ರಾಧ್ಯಕ್ಷ ವೈ.ಮಲ್ಲಿಕಾರ್ಜುನ್, ಎಂ.ಎಂ.ಜೆ. ಶೋಭಿತ್, ಬೂದಿ ಶಿವಕುಮಾರ್, ಪಿ.ಸುಧಾಕರಗೌಡ ಪಾಟೀಲ್, ಎನ್.ಅಪ್ಪಾಜಿ, ಶಿವಾನಂದ ಬಾವಿಕಟ್ಟೆ, ಎಚ್.ಗುರುಬಸವರಾಜ್, ಡಿಶ್ ಮಂಜುನಾಥ್, ಟಿ.ಸಿದ್ದಲಿಂಗಪ್ಪ, ಕೆಂಗನವರ ಸುರೇಶ್ ಕುಮಾರ, ಜವಳಿ ಗಂಗಾಧರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಟ್ಟೂರು</strong>: ಕ್ಷೇತ್ರದಾದ್ಯಂತ ಮೂಲಸೌಕರ್ಯಗಳಿಗೆ ಆದ್ಯತೆ ನೀಡುವ ಮೂಲಕ ಮಾದರಿ ಕ್ಷೇತ್ರವನ್ನಾಗಿಸಲು ಶ್ರಮಿಸುವೆ ಎಂದು ಶಾಸಕ ಕೆ.ನೇಮರಾಜನಾಯ್ಕ ಭರವಸೆ ನೀಡಿದರು.</p>.<p>ಪಟ್ಟಣದ ವಿವಿಧ ವಾರ್ಡ್ಗಳಿಗೆ ₹18 ಕೋಟಿ ವೆಚ್ಚದ ಸಿ.ಸಿ. ರಸ್ತೆ ಕಾಮಗಾರಿಗೆ ಬುಧವಾರ ಚಾಲನೆ ನೀಡಿ, ‘ನಗರಾಭಿವೃದ್ಧಿ ಇಲಾಖೆ ಅನುದಾನದಲ್ಲಿ ಕ್ಷೇತ್ರದಾದ್ಯಂತ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು’ ಎಂದರು.</p>.<p>‘ಕೊಟ್ಟೂರೇಶ್ವರ ರಥೋತ್ಸವದ ವೇಳೆಗೆ ಪಟ್ಟಣದ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು ಹಾಗೂ ಚಿರಬಿ, ಉಜ್ಜಯಿನಿ ರಸ್ತೆಗಳ ₹18 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುವುದು. ತಾಲ್ಲೂಕು ಕೇಂದ್ರಕ್ಕೆ ಅಗತ್ಯವಿರುವ ಪೂರ್ಣಪ್ರಮಾಣದ ಕಚೇರಿಗಳ ಆರಂಭಕ್ಕೆ ಸರ್ಕಾರದ ಮೇಲೆ ಒತ್ತಡ ಹಾಕುವೆ’ ಎಂದು ತಿಳಿಸಿದರು.</p>.<p>‘ಕ್ಷೇತ್ರದ ಎಲ್ಲ ಗ್ರಾಮಗಳಲ್ಲೂ ಸಮುದಾಯ ಭವನಗಳ ನಿರ್ಮಾಣ ಮಾಡಲಾಗುವುದು’ ಎಂದೂ ತಿಳಿಸಿದರು.</p>.<p>ಮುಖಂಡರಾದ ಎಂ.ಎಂ.ಜೆ. ಹರ್ಷವರ್ಧನ್, ಜೆಡಿಎಸ್ ಕ್ಷೇತ್ರಾಧ್ಯಕ್ಷ ವೈ.ಮಲ್ಲಿಕಾರ್ಜುನ್, ಎಂ.ಎಂ.ಜೆ. ಶೋಭಿತ್, ಬೂದಿ ಶಿವಕುಮಾರ್, ಪಿ.ಸುಧಾಕರಗೌಡ ಪಾಟೀಲ್, ಎನ್.ಅಪ್ಪಾಜಿ, ಶಿವಾನಂದ ಬಾವಿಕಟ್ಟೆ, ಎಚ್.ಗುರುಬಸವರಾಜ್, ಡಿಶ್ ಮಂಜುನಾಥ್, ಟಿ.ಸಿದ್ದಲಿಂಗಪ್ಪ, ಕೆಂಗನವರ ಸುರೇಶ್ ಕುಮಾರ, ಜವಳಿ ಗಂಗಾಧರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>