<p><strong>ಬಳ್ಳಾರಿ:</strong> ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಹೆಸರಲ್ಲಿ ರಾಜ್ಯ ಸರ್ಕಾರವು 40 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ’ ಎಂದು ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಗ್ರಾಮ ಪಂಚಾಯಿತಿಗೆ ಒಂದರಂತೆ ರಾಜ್ಯದಲ್ಲಿ 6000 ಕೆಪಿಎಸ್ ಮ್ಯಾಗ್ನೆಟ್ ಶಾಲೆಯನ್ನು ಸ್ಥಾಪಿಸುವ ಗುರಿಯನ್ನು ಸರ್ಕಾರವು ಹೊಂದಿದೆ. ಮೊದಲ ಹಂತದಲ್ಲಿ ರಾಜ್ಯದ 800 ಸರಕಾರಿ ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳೆಂದು ಗುರುತಿಸಲಾಗಿದೆ. ಆ.15 ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ಈ ಕುರಿತು ಆದೇಶಿಸಲಾಗಿದೆ’ ಎಂದು ತಿಳಿಸಿದರು.</p>.<p>‘ರಾಜ್ಯದಲ್ಲಿ ಒಂದೇ ಒಂದು ಶಾಲೆಯನ್ನು ಮುಚ್ಚುವುದಿಲ್ಲ ಎಂಬ ಸರ್ಕಾರದ ಸ್ಪಷ್ಟನೆ ಸತ್ಯಕ್ಕೆ ದೂರವಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಯಾವ ಶಾಲೆಯನ್ನು ಮ್ಯಾಗ್ನೆಟ್ ಶಾಲೆಯನ್ನಾಗಿ ಮಾಡಬೇಕು. ಆ ಶಾಲೆಗೆ ಯಾವ ಯಾವ ಶಾಲೆಗಳನ್ನು ಸೇರಿಸಬೇಕು ಎಂಬುದರ ಪೂರ್ಣ ಪಟ್ಟಿಯನ್ನು ಈಗಾಗಲೇ ಸಿದ್ಧಗೊಳಿಸಲಾಗಿದೆ. ಶಾಲೆಗಳ ಅಭಿವೃದ್ಧಿಯ ಹೆಸರಲ್ಲಿ ರಾಜ್ಯದ ಜನತೆಯನ್ನು ವಂಚಿಸಿ ಬಡ ಮಕ್ಕಳಿಂದ ಶಾಶ್ವತವಾಗಿ ಶಿಕ್ಷಣವನ್ನು ಕಸಿದುಕೊಳ್ಳುವ ಸರ್ಕಾರದ ಘೋರ ಹುನ್ನಾರ ಇದಾಗಿದೆ’ ಎಂದು ದೂರಿದರು.</p>.<p>ಎಐಡಿಎಸ್ಒ ಜಿಲ್ಲಾಧ್ಯಕ್ಷ ಈರಣ್ಣ, ಖಜಾಂಚಿ ಅನುಪಮಾ ಮತ್ತು ಸದಸ್ಯರಾದ ತಿಪ್ಪೇಸ್ವಾಮಿ, ಎ.ಕೆ ಮಂಜುನಾಥ, ಸೋಮಶೇಖರ್ ಸೇರಿದಂತೆ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಹೆಸರಲ್ಲಿ ರಾಜ್ಯ ಸರ್ಕಾರವು 40 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ’ ಎಂದು ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಗ್ರಾಮ ಪಂಚಾಯಿತಿಗೆ ಒಂದರಂತೆ ರಾಜ್ಯದಲ್ಲಿ 6000 ಕೆಪಿಎಸ್ ಮ್ಯಾಗ್ನೆಟ್ ಶಾಲೆಯನ್ನು ಸ್ಥಾಪಿಸುವ ಗುರಿಯನ್ನು ಸರ್ಕಾರವು ಹೊಂದಿದೆ. ಮೊದಲ ಹಂತದಲ್ಲಿ ರಾಜ್ಯದ 800 ಸರಕಾರಿ ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳೆಂದು ಗುರುತಿಸಲಾಗಿದೆ. ಆ.15 ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ಈ ಕುರಿತು ಆದೇಶಿಸಲಾಗಿದೆ’ ಎಂದು ತಿಳಿಸಿದರು.</p>.<p>‘ರಾಜ್ಯದಲ್ಲಿ ಒಂದೇ ಒಂದು ಶಾಲೆಯನ್ನು ಮುಚ್ಚುವುದಿಲ್ಲ ಎಂಬ ಸರ್ಕಾರದ ಸ್ಪಷ್ಟನೆ ಸತ್ಯಕ್ಕೆ ದೂರವಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಯಾವ ಶಾಲೆಯನ್ನು ಮ್ಯಾಗ್ನೆಟ್ ಶಾಲೆಯನ್ನಾಗಿ ಮಾಡಬೇಕು. ಆ ಶಾಲೆಗೆ ಯಾವ ಯಾವ ಶಾಲೆಗಳನ್ನು ಸೇರಿಸಬೇಕು ಎಂಬುದರ ಪೂರ್ಣ ಪಟ್ಟಿಯನ್ನು ಈಗಾಗಲೇ ಸಿದ್ಧಗೊಳಿಸಲಾಗಿದೆ. ಶಾಲೆಗಳ ಅಭಿವೃದ್ಧಿಯ ಹೆಸರಲ್ಲಿ ರಾಜ್ಯದ ಜನತೆಯನ್ನು ವಂಚಿಸಿ ಬಡ ಮಕ್ಕಳಿಂದ ಶಾಶ್ವತವಾಗಿ ಶಿಕ್ಷಣವನ್ನು ಕಸಿದುಕೊಳ್ಳುವ ಸರ್ಕಾರದ ಘೋರ ಹುನ್ನಾರ ಇದಾಗಿದೆ’ ಎಂದು ದೂರಿದರು.</p>.<p>ಎಐಡಿಎಸ್ಒ ಜಿಲ್ಲಾಧ್ಯಕ್ಷ ಈರಣ್ಣ, ಖಜಾಂಚಿ ಅನುಪಮಾ ಮತ್ತು ಸದಸ್ಯರಾದ ತಿಪ್ಪೇಸ್ವಾಮಿ, ಎ.ಕೆ ಮಂಜುನಾಥ, ಸೋಮಶೇಖರ್ ಸೇರಿದಂತೆ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>