<p><strong>ಹೊಸಪೇಟೆ (ವಿಜಯನಗರ):</strong> ಮುಸ್ಲಿಂ ಸಮಾಜಕ್ಕೆ ನೀಡಿದ್ದ ಪ್ರವರ್ಗ–2ಬಿ ಮೀಸಲಾತಿ ರದ್ದುಗೊಳಿಸಿರುವ ರಾಜ್ಯ ಸರ್ಕಾರದ ಕ್ರಮ ಸರಿಯಲ್ಲ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್ಎಸ್) ತಿಳಿಸಿದೆ.</p>.<p>ಪಕ್ಷದ ಮುಖಂಡರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಸಾಂಕೇತಿಕ ಧರಣಿ ನಡೆಸಿ, ರಾಷ್ಟ್ರಪತಿಯವರ ಹೆಸರಿಗೆ ಬರೆದ ಮನವಿ ಪತ್ರ ಸಲ್ಲಿಸಿ ಹಕ್ಕೊತ್ತಾಯ ಮಾಡಿದರು.</p>.<p>ದೇಶದಲ್ಲಿ ಶೇ 15ರಷ್ಟು ಮುಸ್ಲಿಮರಿದ್ದಾರೆ. ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದ್ದಾರೆ. ಹೀಗಿರುವಾಗ 2ಬಿ ಮೀಸಲು ರದ್ದುಪಡಿಸಿದ ಕ್ರಮ ಸರಿಯಲ್ಲ. ಇದರಿಂದ ಸಮಾಜದವರು ಮತ್ತಷ್ಟು ಹಿಂದುಳಿಯಬಹುದು. ಅನ್ಯಾಯ ಮಾಡಿದಂತಾಗುತ್ತದೆ. ಕೂಡಲೇ ಸರ್ಕಾರ ತನ್ನ ಆದೇಶ ಹಿಂಪಡೆಯಬೇಕೆಂದು ಆಗ್ರಹಿಸಿದರು.</p>.<p>ಬಡ ಮುಸ್ಲಿಮರ ಸಮಗ್ರ ಕಲ್ಯಾಣಕ್ಕಾಗಿ ಸರ್ಕಾರ ಯೋಜನೆ ರೂಪಿಸಬೇಕು. ಅದರಲ್ಲೂ ಮಹಿಳಾ ಸ್ವಸಹಾಯ ಗುಂಪುಗಳ ರಚನೆಗೆ ಪ್ರೋತ್ಸಾಹಿಸಬೇಕು. ಕೌಶಲ ತರಬೇತಿ ನೀಡಬೇಕು. ರಕ್ಷಣಾ ಪಡೆಗಳಲ್ಲಿ ಮುಸ್ಲಿಮರಿಗೆ ಆದ್ಯತೆ ನೀಡಬೇಕೆಂದು ಒತ್ತಾಯಿಸಿದರು. ಪಕ್ಷದ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಟಿ. ನಜೀರ್ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಮುಸ್ಲಿಂ ಸಮಾಜಕ್ಕೆ ನೀಡಿದ್ದ ಪ್ರವರ್ಗ–2ಬಿ ಮೀಸಲಾತಿ ರದ್ದುಗೊಳಿಸಿರುವ ರಾಜ್ಯ ಸರ್ಕಾರದ ಕ್ರಮ ಸರಿಯಲ್ಲ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್ಎಸ್) ತಿಳಿಸಿದೆ.</p>.<p>ಪಕ್ಷದ ಮುಖಂಡರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಸಾಂಕೇತಿಕ ಧರಣಿ ನಡೆಸಿ, ರಾಷ್ಟ್ರಪತಿಯವರ ಹೆಸರಿಗೆ ಬರೆದ ಮನವಿ ಪತ್ರ ಸಲ್ಲಿಸಿ ಹಕ್ಕೊತ್ತಾಯ ಮಾಡಿದರು.</p>.<p>ದೇಶದಲ್ಲಿ ಶೇ 15ರಷ್ಟು ಮುಸ್ಲಿಮರಿದ್ದಾರೆ. ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದ್ದಾರೆ. ಹೀಗಿರುವಾಗ 2ಬಿ ಮೀಸಲು ರದ್ದುಪಡಿಸಿದ ಕ್ರಮ ಸರಿಯಲ್ಲ. ಇದರಿಂದ ಸಮಾಜದವರು ಮತ್ತಷ್ಟು ಹಿಂದುಳಿಯಬಹುದು. ಅನ್ಯಾಯ ಮಾಡಿದಂತಾಗುತ್ತದೆ. ಕೂಡಲೇ ಸರ್ಕಾರ ತನ್ನ ಆದೇಶ ಹಿಂಪಡೆಯಬೇಕೆಂದು ಆಗ್ರಹಿಸಿದರು.</p>.<p>ಬಡ ಮುಸ್ಲಿಮರ ಸಮಗ್ರ ಕಲ್ಯಾಣಕ್ಕಾಗಿ ಸರ್ಕಾರ ಯೋಜನೆ ರೂಪಿಸಬೇಕು. ಅದರಲ್ಲೂ ಮಹಿಳಾ ಸ್ವಸಹಾಯ ಗುಂಪುಗಳ ರಚನೆಗೆ ಪ್ರೋತ್ಸಾಹಿಸಬೇಕು. ಕೌಶಲ ತರಬೇತಿ ನೀಡಬೇಕು. ರಕ್ಷಣಾ ಪಡೆಗಳಲ್ಲಿ ಮುಸ್ಲಿಮರಿಗೆ ಆದ್ಯತೆ ನೀಡಬೇಕೆಂದು ಒತ್ತಾಯಿಸಿದರು. ಪಕ್ಷದ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಟಿ. ನಜೀರ್ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>