<p><strong>ಸಂಡೂರು:</strong> ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ವತಿಯಿಂದ ಮಂಗಳವಾರ ನಡೆದ ಮುಷ್ಕರದಿಂದ ಸಾರಿಗೆ ಬಸ್ಗಳ ಸಂಚಾರವು ಬಹಳ ವಿರಳವಾಗಿದ್ದರಿಂದ ವಿವಿಧ ಗ್ರಾಮ, ದೂರದ ಪಟ್ಟಣಗಳಿಗೆ ತೆರಳುವ ಪ್ರಯಾಣಿಕರು ಬಸ್ಗಳಿಗಾಗಿ ದಿನವಿಡೀ ಪರದಾಡಿದರು.</p><p>ಸಂಡೂರು ಪಟ್ಟಣ, ಸುತ್ತಲಿನ ಗ್ರಾಮಗಳಲ್ಲಿನ ಶಾಲಾ ಕಾಲೇಜು ವಿದ್ಯಾರ್ಥಿಗಳ, ಸಾರ್ವಜನಿಕರ ಸಂಚಾರದ ಅನುಕೂಲಕ್ಕಾಗಿ ಸಾರಿಗೆ ಬಸ್ ಡಿಪೋ ದಿಂದ ಸುಮಾರು 40 ಬಸ್ಗಳ ಸಂಚಾರ ಆರಂಭಿಸಲಾಗಿತ್ತು.</p><p>ಬೆಳಿಗ್ಗೆ ಪುರಸಭೆಯ ಬಸ್ ನಿಲ್ದಾಣದಲ್ಲಿ ಎಲ್ಲ ಸಾರಿಗೆ ಬಸ್ಗಳನ್ನು ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು, ನಂತರ ಜನರ, ವಿದ್ಯಾರ್ಥಿಗಳ ಸಂಚಾರದ ಅನುಕೂಲಕ್ಕಾಗಿ ಸಾರಿಗೆ ಅಧಿಕಾರಿಗಳು ಬಸ್ಗಳ ಸೇವೆಯನ್ನು ಹಂತ ಹಂತವಾಗಿ ಆರಂಭಿಸಲಾಯಿತು.</p><p>‘ಸಂಡೂರು ಪಟ್ಟಣದಿಂದ ಕುಡತಿನಿ, ಹೊಸಪೇಟೆ, ಕೂಡ್ಲಿಗಿಯವರೆಗೂ ಸಾರಿಗೆ ಬಸ್ಗಳನ್ನು ಓಡಿಲಾಗಿದ್ದು, ಗ್ರಾಮೀಣ ಪ್ರದೇಶಗಳಿಗೆ ಬಸ್ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗಿಲ್ಲ. ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಬಾರದು ಎನ್ನುವ ದೃಷ್ಠಿಯಿಂದ ಸಾರಿಗೆ ನೌಕರರು ಕೆಲಸಕ್ಕೆ ಹಾಜರಿಯಾಗಿದ್ದರು’ ಎಂದು ಸಂಡೂರಿನ ಸಾರಿಗೆ ಇಲಾಖೆಯ ವ್ಯವಸ್ಥಾಪಕ ಲಕ್ಷ್ಮಣ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಡೂರು:</strong> ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ವತಿಯಿಂದ ಮಂಗಳವಾರ ನಡೆದ ಮುಷ್ಕರದಿಂದ ಸಾರಿಗೆ ಬಸ್ಗಳ ಸಂಚಾರವು ಬಹಳ ವಿರಳವಾಗಿದ್ದರಿಂದ ವಿವಿಧ ಗ್ರಾಮ, ದೂರದ ಪಟ್ಟಣಗಳಿಗೆ ತೆರಳುವ ಪ್ರಯಾಣಿಕರು ಬಸ್ಗಳಿಗಾಗಿ ದಿನವಿಡೀ ಪರದಾಡಿದರು.</p><p>ಸಂಡೂರು ಪಟ್ಟಣ, ಸುತ್ತಲಿನ ಗ್ರಾಮಗಳಲ್ಲಿನ ಶಾಲಾ ಕಾಲೇಜು ವಿದ್ಯಾರ್ಥಿಗಳ, ಸಾರ್ವಜನಿಕರ ಸಂಚಾರದ ಅನುಕೂಲಕ್ಕಾಗಿ ಸಾರಿಗೆ ಬಸ್ ಡಿಪೋ ದಿಂದ ಸುಮಾರು 40 ಬಸ್ಗಳ ಸಂಚಾರ ಆರಂಭಿಸಲಾಗಿತ್ತು.</p><p>ಬೆಳಿಗ್ಗೆ ಪುರಸಭೆಯ ಬಸ್ ನಿಲ್ದಾಣದಲ್ಲಿ ಎಲ್ಲ ಸಾರಿಗೆ ಬಸ್ಗಳನ್ನು ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು, ನಂತರ ಜನರ, ವಿದ್ಯಾರ್ಥಿಗಳ ಸಂಚಾರದ ಅನುಕೂಲಕ್ಕಾಗಿ ಸಾರಿಗೆ ಅಧಿಕಾರಿಗಳು ಬಸ್ಗಳ ಸೇವೆಯನ್ನು ಹಂತ ಹಂತವಾಗಿ ಆರಂಭಿಸಲಾಯಿತು.</p><p>‘ಸಂಡೂರು ಪಟ್ಟಣದಿಂದ ಕುಡತಿನಿ, ಹೊಸಪೇಟೆ, ಕೂಡ್ಲಿಗಿಯವರೆಗೂ ಸಾರಿಗೆ ಬಸ್ಗಳನ್ನು ಓಡಿಲಾಗಿದ್ದು, ಗ್ರಾಮೀಣ ಪ್ರದೇಶಗಳಿಗೆ ಬಸ್ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗಿಲ್ಲ. ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಬಾರದು ಎನ್ನುವ ದೃಷ್ಠಿಯಿಂದ ಸಾರಿಗೆ ನೌಕರರು ಕೆಲಸಕ್ಕೆ ಹಾಜರಿಯಾಗಿದ್ದರು’ ಎಂದು ಸಂಡೂರಿನ ಸಾರಿಗೆ ಇಲಾಖೆಯ ವ್ಯವಸ್ಥಾಪಕ ಲಕ್ಷ್ಮಣ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>