<p><strong>ಕೂಡ್ಲಿಗಿ</strong>: ಲೋಕಸಭಾ ಚುನಾವಣೆ ವೇಳೆ ವಾಲ್ಮೀಕಿ ನಿಗಮದ ಹಣ ಅಕ್ರಮವಾಗಿ ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ಮೇಲೆ ಶಾಸಕ ಡಾ.ಶ್ರೀನಿವಾಸ್.ಎನ್.ಟಿ ಅವರ ಮನೆಯ ಮೇಲೆ ಬುಧವಾರ ಬೆಳಿಗ್ಗೆ ಜಾರಿ ನಿರ್ದೇನಾಲಯದ (ಇಡಿ) ಅಧಿಕಾರಿಗಳು ದಾಳಿ ಮಾಡಿದ್ದಾರೆ.</p>.<p>ತಾಲ್ಲೂಕಿನ ನರಸಿಂಹಗಿರಿಯಲ್ಲಿರುವ ಶಾಸಕರ ಮನೆಯೊಳಗೆ ಇಡಿ ತನಿಖಾ ತಂಡವೊಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ ಪ್ರವೇಶ ಮಾಡಿದ್ದು, ದಾಖಲೆಗಳ ಪರಿಶೀಲನೆ ಕೈಗೊಂಡಿದ್ದಾರೆ. ಈ ವೇಳೆ ಮನೆಯಲ್ಲಿ ಶಾಸಕರ ತಾಯಿ ಮಾತ್ರ ಇದ್ದರು. ಒಳಗೆ ಯಾರನ್ನು ಬಿಡದೆ ಮನೆ ಸುತ್ತ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.</p>.<p>ಮಂಗಳವಾರ ಇಡೀ ದಿನ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಶಾಸಕರು ಸಂಜೆ ತುಮಕೂರು ಕಡೆ ಹೋಗಿದ್ದರು. ವಿಷಯ ತಿಳಿದ ಶಾಸಕ ಡಾ.ಶ್ರೀನಿವಾಸ್ ಎನ್.ಟಿ. ಅವರು ಬುಧವಾರ ಮಧ್ಯಾಹ್ನದ ವೇಳೆಗೆ ಮರಳಿ ನರಸಿಂಹಗಿರಿಯಲ್ಲಿನ ತಮ್ಮ ನಿವಾಸಕ್ಕೆ ಬಂದಿದ್ದಾರೆ. ಈ ವೇಳೆ ಇಡಿ ಅಧಿಕಾರಿಗಳು ಪ್ರಿಂಟರ್ವೊಂದನ್ನು ಮನೆಯೊಳಗೆ ತೆಗೆದುಕೊಂಡು ಹೋದರು ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.</p>.<p>ಶಾಸಕರು ಗ್ರಾಮಕ್ಕೆ ಬರುತ್ತಿದ್ದಾರೆ ಎಂದು ತಿಳಿದ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ಮತ್ತು ಹಿತೈಷಿಗಳು ಹಾಗೂ ಎಂದಿನಂತೆ ಶಾಸಕರ ಬಳಿ ಕಣ್ಣನ್ನು ಪರೀಕ್ಷೆ ಮಾಡಿಸಿಕೊಳ್ಳುವವರು ಸಹ ಶಾಸಕರ ಮನೆ ಬಳಿ ಬಂದಿದ್ದರು.</p>.<p>ಈ ವೇಳೆ ಶಾಸಕ ಡಾ.ಶ್ರೀನಿವಾಸ್ ಎನ್.ಟಿ. ಮಾತನಾಡಿ, ‘ನಾವು ಕಾನೂನು ಗೌರವಿಸೋಣ, ನಾನು ಯಾವುದೇ ಕಾನೂನು ಬಾಹೀರ ಚಟುವಟಿಕೆ ಮಾಡಿಲ್ಲ. ಅದ್ದರಿಂದ ಯಾರು ಆತಂಕಪಡುವ ಅಗತ್ಯವಿಲ್ಲ’ ಎಂದರು. ಸಂಜೆ 6 ಗಂಟೆಯ ನಂತರವೂ ಮನೆಯಲ್ಲಿ ತನಿಖೆ ನಡೆದಿತ್ತು. <br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೂಡ್ಲಿಗಿ</strong>: ಲೋಕಸಭಾ ಚುನಾವಣೆ ವೇಳೆ ವಾಲ್ಮೀಕಿ ನಿಗಮದ ಹಣ ಅಕ್ರಮವಾಗಿ ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ಮೇಲೆ ಶಾಸಕ ಡಾ.ಶ್ರೀನಿವಾಸ್.ಎನ್.ಟಿ ಅವರ ಮನೆಯ ಮೇಲೆ ಬುಧವಾರ ಬೆಳಿಗ್ಗೆ ಜಾರಿ ನಿರ್ದೇನಾಲಯದ (ಇಡಿ) ಅಧಿಕಾರಿಗಳು ದಾಳಿ ಮಾಡಿದ್ದಾರೆ.</p>.<p>ತಾಲ್ಲೂಕಿನ ನರಸಿಂಹಗಿರಿಯಲ್ಲಿರುವ ಶಾಸಕರ ಮನೆಯೊಳಗೆ ಇಡಿ ತನಿಖಾ ತಂಡವೊಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ ಪ್ರವೇಶ ಮಾಡಿದ್ದು, ದಾಖಲೆಗಳ ಪರಿಶೀಲನೆ ಕೈಗೊಂಡಿದ್ದಾರೆ. ಈ ವೇಳೆ ಮನೆಯಲ್ಲಿ ಶಾಸಕರ ತಾಯಿ ಮಾತ್ರ ಇದ್ದರು. ಒಳಗೆ ಯಾರನ್ನು ಬಿಡದೆ ಮನೆ ಸುತ್ತ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.</p>.<p>ಮಂಗಳವಾರ ಇಡೀ ದಿನ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಶಾಸಕರು ಸಂಜೆ ತುಮಕೂರು ಕಡೆ ಹೋಗಿದ್ದರು. ವಿಷಯ ತಿಳಿದ ಶಾಸಕ ಡಾ.ಶ್ರೀನಿವಾಸ್ ಎನ್.ಟಿ. ಅವರು ಬುಧವಾರ ಮಧ್ಯಾಹ್ನದ ವೇಳೆಗೆ ಮರಳಿ ನರಸಿಂಹಗಿರಿಯಲ್ಲಿನ ತಮ್ಮ ನಿವಾಸಕ್ಕೆ ಬಂದಿದ್ದಾರೆ. ಈ ವೇಳೆ ಇಡಿ ಅಧಿಕಾರಿಗಳು ಪ್ರಿಂಟರ್ವೊಂದನ್ನು ಮನೆಯೊಳಗೆ ತೆಗೆದುಕೊಂಡು ಹೋದರು ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.</p>.<p>ಶಾಸಕರು ಗ್ರಾಮಕ್ಕೆ ಬರುತ್ತಿದ್ದಾರೆ ಎಂದು ತಿಳಿದ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ಮತ್ತು ಹಿತೈಷಿಗಳು ಹಾಗೂ ಎಂದಿನಂತೆ ಶಾಸಕರ ಬಳಿ ಕಣ್ಣನ್ನು ಪರೀಕ್ಷೆ ಮಾಡಿಸಿಕೊಳ್ಳುವವರು ಸಹ ಶಾಸಕರ ಮನೆ ಬಳಿ ಬಂದಿದ್ದರು.</p>.<p>ಈ ವೇಳೆ ಶಾಸಕ ಡಾ.ಶ್ರೀನಿವಾಸ್ ಎನ್.ಟಿ. ಮಾತನಾಡಿ, ‘ನಾವು ಕಾನೂನು ಗೌರವಿಸೋಣ, ನಾನು ಯಾವುದೇ ಕಾನೂನು ಬಾಹೀರ ಚಟುವಟಿಕೆ ಮಾಡಿಲ್ಲ. ಅದ್ದರಿಂದ ಯಾರು ಆತಂಕಪಡುವ ಅಗತ್ಯವಿಲ್ಲ’ ಎಂದರು. ಸಂಜೆ 6 ಗಂಟೆಯ ನಂತರವೂ ಮನೆಯಲ್ಲಿ ತನಿಖೆ ನಡೆದಿತ್ತು. <br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>