<p><strong>ಕೊಟ್ಟೂರು:</strong> ಸಾರ್ವಜನಿಕರು ಕಚೇರಿ ಕೆಲಸ ಕಾರ್ಯಗಳಿಗೋಸ್ಕರ ಅನಗತ್ಯವಾಗಿ ಅಲೆದಾಡಬಾರದು ಎಂಬ ಸದುದ್ದೇಶದಿಂದ ಸರ್ಕಾರವನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ದು ಅವರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವುದು ನಮ್ಮ ಗುರಿಯಾಗಿದೆ ಎಂದು ಕೂಡ್ಲಿಗಿ ಕ್ಷೇತ್ರದ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು.</p>.<p>ತಾಲ್ಲೂಕಿನ ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರಕ್ಕೊಳಪಡುವ ನಿಂಬಳಗೆರೆ ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ‘ಮನೆ ಮನೆಗೆ ಶಾಸಕರು ಮನೆ ಬಾಗಿಲಿಗೆ ಸರ್ಕಾರ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ತಾಲ್ಲೂಕು ಆಡಳಿತಗಳು ಕೇವಲ ತಾಲ್ಲೂಕು ಕೇಂದ್ರಗಳಿಗೆ ಸೀಮಿತಗೊಳ್ಳದೇ ಗ್ರಾಮಾಂತರ ಪ್ರದೇಶಗಳಿಗೂ ವಿಸ್ತರಿಸಿದಾಗ ಮಾತ್ರ ಕ್ಷೇತ್ರದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಹಕಾರಿಯಾಗುತ್ತದೆ ಎಂಬ ಚಿಂತನೆ ನಮ್ಮದಾಗಿದೆ ಎಂದರು.</p>.<p>ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರವು ಅತ್ಯಂತ ಹಿಂದುಳಿದ ಪ್ರದೇಶ ಎಂಬ ಹಣೆಪಟ್ಟಿಯನ್ನು ಹೊಂದಿದ್ದು ಇದನ್ನು ಕಳಚಲು ಕ್ಷೇತ್ರದಾದ್ಯಂತ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಮಾದರಿ ಕ್ಷೇತ್ರವನ್ನಾಗಿಸಲು ಶ್ರಮಿಸುವೆ ಎಂಬ ಭರವಸೆ ಮಾತುಗಳನ್ನಾಡಿದರು.</p>.<p>ಕೂಡ್ಲಿಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಗುರುಸಿದ್ದನಗೌಡ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಎಸ್.ಶ್ರೀಕಾಂತ್,ಉಪಾಧ್ಯಕ್ಷೆ ಮಂಗಳಮ್ಮ , ಮುಖಂಡರಾದ ಕೆ.ಎಂ.ಶಶಿಧರ್, ಸಾವಜ್ಜಿ ರಾಜೇಂದ್ರ ಪ್ರಸಾದ್, ಎಚ್.ಕೆ.ಕಲ್ಲೇಶಣ್ಣ, ಜಿಲಾನ್ ಭಾಷಾ, ಮಹಾಂತೇಶ್, ವಿಜಯ, ಮಲ್ಲಿಕಾರ್ಜುನ್, ರಾಜಶೇಖರ್,ಶರಣಪ್ಪ, ತಹಶೀಲ್ದಾರ್ ಜಿ.ಕೆ.ಅಮರೀಶ್, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಬಿ.ಆನಂದಕುಮಾರ್, ವಿವಿಧ ಇಲಾಖಾಧಿಕಾರಿಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು.</p>.<p>ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಒಟ್ಟು 100 ಅರ್ಜಿಗಳು ಬಂದಿದ್ದು ಬಹುತೇಕ ಅರ್ಜಿಗಳಿಗೆ ಶಾಸಕರು ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿದರು. ಉಳಿದ ಅರ್ಜಿಗಳಿಗೆ ತಾಲ್ಲೂಕು ಆಡಳಿತ ಕೂಡಲೇ ಪರಿಹಾರ ಕಲ್ಪಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಟ್ಟೂರು:</strong> ಸಾರ್ವಜನಿಕರು ಕಚೇರಿ ಕೆಲಸ ಕಾರ್ಯಗಳಿಗೋಸ್ಕರ ಅನಗತ್ಯವಾಗಿ ಅಲೆದಾಡಬಾರದು ಎಂಬ ಸದುದ್ದೇಶದಿಂದ ಸರ್ಕಾರವನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ದು ಅವರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವುದು ನಮ್ಮ ಗುರಿಯಾಗಿದೆ ಎಂದು ಕೂಡ್ಲಿಗಿ ಕ್ಷೇತ್ರದ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು.</p>.<p>ತಾಲ್ಲೂಕಿನ ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರಕ್ಕೊಳಪಡುವ ನಿಂಬಳಗೆರೆ ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ‘ಮನೆ ಮನೆಗೆ ಶಾಸಕರು ಮನೆ ಬಾಗಿಲಿಗೆ ಸರ್ಕಾರ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ತಾಲ್ಲೂಕು ಆಡಳಿತಗಳು ಕೇವಲ ತಾಲ್ಲೂಕು ಕೇಂದ್ರಗಳಿಗೆ ಸೀಮಿತಗೊಳ್ಳದೇ ಗ್ರಾಮಾಂತರ ಪ್ರದೇಶಗಳಿಗೂ ವಿಸ್ತರಿಸಿದಾಗ ಮಾತ್ರ ಕ್ಷೇತ್ರದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಹಕಾರಿಯಾಗುತ್ತದೆ ಎಂಬ ಚಿಂತನೆ ನಮ್ಮದಾಗಿದೆ ಎಂದರು.</p>.<p>ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರವು ಅತ್ಯಂತ ಹಿಂದುಳಿದ ಪ್ರದೇಶ ಎಂಬ ಹಣೆಪಟ್ಟಿಯನ್ನು ಹೊಂದಿದ್ದು ಇದನ್ನು ಕಳಚಲು ಕ್ಷೇತ್ರದಾದ್ಯಂತ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಮಾದರಿ ಕ್ಷೇತ್ರವನ್ನಾಗಿಸಲು ಶ್ರಮಿಸುವೆ ಎಂಬ ಭರವಸೆ ಮಾತುಗಳನ್ನಾಡಿದರು.</p>.<p>ಕೂಡ್ಲಿಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಗುರುಸಿದ್ದನಗೌಡ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಎಸ್.ಶ್ರೀಕಾಂತ್,ಉಪಾಧ್ಯಕ್ಷೆ ಮಂಗಳಮ್ಮ , ಮುಖಂಡರಾದ ಕೆ.ಎಂ.ಶಶಿಧರ್, ಸಾವಜ್ಜಿ ರಾಜೇಂದ್ರ ಪ್ರಸಾದ್, ಎಚ್.ಕೆ.ಕಲ್ಲೇಶಣ್ಣ, ಜಿಲಾನ್ ಭಾಷಾ, ಮಹಾಂತೇಶ್, ವಿಜಯ, ಮಲ್ಲಿಕಾರ್ಜುನ್, ರಾಜಶೇಖರ್,ಶರಣಪ್ಪ, ತಹಶೀಲ್ದಾರ್ ಜಿ.ಕೆ.ಅಮರೀಶ್, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಬಿ.ಆನಂದಕುಮಾರ್, ವಿವಿಧ ಇಲಾಖಾಧಿಕಾರಿಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು.</p>.<p>ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಒಟ್ಟು 100 ಅರ್ಜಿಗಳು ಬಂದಿದ್ದು ಬಹುತೇಕ ಅರ್ಜಿಗಳಿಗೆ ಶಾಸಕರು ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿದರು. ಉಳಿದ ಅರ್ಜಿಗಳಿಗೆ ತಾಲ್ಲೂಕು ಆಡಳಿತ ಕೂಡಲೇ ಪರಿಹಾರ ಕಲ್ಪಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>