<p><strong>ಕೂಡ್ಲಿಗಿ:</strong> ತಾಲ್ಲೂಕಿನ ಮೊರಬದ ವೀರಭದ್ರೇಶ್ವರಸ್ವಾಮಿ ರಥೋತ್ಸವ ಗುರುವಾರ ಸಂಜೆ ವಿಜೃಂಭಣೆಯಿಂದ ಜರುಗಿತು. ಸಾವಿರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.</p>.<p>ನಾಡಿನಾದ್ಯಂತ ಭಕ್ತರನ್ನು ಹೊಂದಿರುವ ಹಾಗೂ ಮನೆದೇವರೆಂದು ಪೂಜಿಸಲ್ಪಡುವ ವೀರಭದ್ರೇಶ್ವರ ಸ್ವಾಮಿಯ ರಥೋತ್ಸದ ಅಂಗವಾಗಿ ಗುರುವಾರ ಸಮಾಳ, ನಂದಿಕೋಲು, ಉರಿಮೆ ಮುಂತಾದ ವಾದ್ಯಗಳೊಂದಿಗೆ ಸ್ವಾಮಿಯ ಉತ್ಸವ ಮೂರ್ತಿಯನ್ನು ದೇವಸ್ಥಾನದಿಂದ ಪಲ್ಲಕ್ಕಿಯಲ್ಲಿ ಮೆರವಣಿಗೆಯಲ್ಲಿ ತರಲಾಯಿತು. ನಂತರ ರಥಕ್ಕೆ 3 ಬಾರಿ ಪ್ರದಕ್ಷಿಣೆ ಹಾಕಿದ ಸ್ವಾಮಿಯನ್ನು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಇದೇ ಸಂದರ್ಭದಲ್ಲಿ ಹರಾಜು ಮಾಡಲಾದ ಸ್ವಾಮಿಯ ಪಟವನ್ನು ದಾವಣಗೆರೆ ಬಣಕಾರ ಕೊಟ್ರೇಶಪ್ಪ ₹2,60101ಕ್ಕೆ ಪಡೆದುಕೊಂಡರು.</p>.<p>ನಂತರ ನೆರೆದ ಭಕ್ತ ಸಮೂಹ ಸ್ವಾಮಿಗೆ ಜಯವಾಗಲಿ ಎಂದು ಜಯಘೋಷ ಕೂಗುತ್ತ ಅಲಂಕೃತ ರಥವನ್ನು ಎಳೆಯಿತು. ಭಕ್ತರು ರಥಕ್ಕೆ ಬಾಳೆಹಣ್ಣು, ಉತ್ತತ್ತಿಗಳನ್ನು ತೂರಿ ಭಕ್ತಿ ಮೆರೆದರು. ಪಾದಗಟ್ಟೆಯವರೆಗೆ ಸಾಗಿ, ನಂತರ ರಥವು ಮರಳಿ ಬಂದು ನೆಲೆ ನಿಲ್ಲುವ ಮೂಲಕ ರಥೋತ್ಸವ ಸಂಪನ್ನವಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೂಡ್ಲಿಗಿ:</strong> ತಾಲ್ಲೂಕಿನ ಮೊರಬದ ವೀರಭದ್ರೇಶ್ವರಸ್ವಾಮಿ ರಥೋತ್ಸವ ಗುರುವಾರ ಸಂಜೆ ವಿಜೃಂಭಣೆಯಿಂದ ಜರುಗಿತು. ಸಾವಿರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.</p>.<p>ನಾಡಿನಾದ್ಯಂತ ಭಕ್ತರನ್ನು ಹೊಂದಿರುವ ಹಾಗೂ ಮನೆದೇವರೆಂದು ಪೂಜಿಸಲ್ಪಡುವ ವೀರಭದ್ರೇಶ್ವರ ಸ್ವಾಮಿಯ ರಥೋತ್ಸದ ಅಂಗವಾಗಿ ಗುರುವಾರ ಸಮಾಳ, ನಂದಿಕೋಲು, ಉರಿಮೆ ಮುಂತಾದ ವಾದ್ಯಗಳೊಂದಿಗೆ ಸ್ವಾಮಿಯ ಉತ್ಸವ ಮೂರ್ತಿಯನ್ನು ದೇವಸ್ಥಾನದಿಂದ ಪಲ್ಲಕ್ಕಿಯಲ್ಲಿ ಮೆರವಣಿಗೆಯಲ್ಲಿ ತರಲಾಯಿತು. ನಂತರ ರಥಕ್ಕೆ 3 ಬಾರಿ ಪ್ರದಕ್ಷಿಣೆ ಹಾಕಿದ ಸ್ವಾಮಿಯನ್ನು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಇದೇ ಸಂದರ್ಭದಲ್ಲಿ ಹರಾಜು ಮಾಡಲಾದ ಸ್ವಾಮಿಯ ಪಟವನ್ನು ದಾವಣಗೆರೆ ಬಣಕಾರ ಕೊಟ್ರೇಶಪ್ಪ ₹2,60101ಕ್ಕೆ ಪಡೆದುಕೊಂಡರು.</p>.<p>ನಂತರ ನೆರೆದ ಭಕ್ತ ಸಮೂಹ ಸ್ವಾಮಿಗೆ ಜಯವಾಗಲಿ ಎಂದು ಜಯಘೋಷ ಕೂಗುತ್ತ ಅಲಂಕೃತ ರಥವನ್ನು ಎಳೆಯಿತು. ಭಕ್ತರು ರಥಕ್ಕೆ ಬಾಳೆಹಣ್ಣು, ಉತ್ತತ್ತಿಗಳನ್ನು ತೂರಿ ಭಕ್ತಿ ಮೆರೆದರು. ಪಾದಗಟ್ಟೆಯವರೆಗೆ ಸಾಗಿ, ನಂತರ ರಥವು ಮರಳಿ ಬಂದು ನೆಲೆ ನಿಲ್ಲುವ ಮೂಲಕ ರಥೋತ್ಸವ ಸಂಪನ್ನವಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>