<p><strong>ಕೂಡ್ಲಿಗಿ:</strong> ಸೀಮಂತ ಮಹಿಳೆಯ ಜೀವನದ ಅತ್ಯಂತ ಮಹತ್ತರ ಘಟ್ಟ ಎಂದು ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಅಭಿಪ್ರಾಯಪಟ್ಟರು.</p>.<p>ತಮ್ಮ ಸ್ವಗ್ರಾಮ ತಾಲ್ಲೂಕಿನ ನರಸಿಂಹಗಿರಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಶಾಸಕರ ಕುಟುಂಬದಿಂದ ಗುರುವಾರ ಹಮ್ಮಿಕೊಂಡಿದ್ದ ಗರ್ಭಿಣಿಯರಿಗೆ ಸೀಮಂತ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಗರ್ಭಿಣಿಯರು ಪೌಷ್ಟಿಕ, ಸಮತೋಲಿತ ಆಹಾರ ಸೇವನೆ ಮಾಡಿ ಆರೋಗ್ಯ ಕಾಪಾಡಿಕೊಳ್ಳಬೇಕು. ಗರ್ಭಿಣಿ ಹಾಗೂ ಮಕ್ಕಳು ದೇಶದ ಸಂಪತ್ತು’ ಎಂದರು.</p>.<p>ಗುಡೇಕೋಟೆ ಹೋಬಳಿಯ 350ಕ್ಕೂ ಹೆಚ್ಚು ಗರ್ಭಿಣಿಯರಿಗೆ ಸೀಮಂತ ನೆರವೇರಿಸಿ, ತಾಲ್ಲೂಕಿನ 160ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಮಾಡಲಾಯಿತು.</p>.<p>ಶಾಸಕರ ತಾಯಿ ಎನ್.ಟಿ. ಓಬಮ್ಮ, ಕಾಂಗ್ರೆಸ್ ಮುಖಂಡ ಎನ್.ಟಿ. ತಮ್ಮಣ್ಣ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಸ್.ಪಿ. ಪ್ರದೀಪ್ ಕುಮಾರ್, ಉಪಾನ್ಯಾಸಕಿ ಗಂಗಮ್ಮ, ಎಸ್. ವೆಂಕಟೇಶ್, ಮಂಜುನಾಥ, ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೂಡ್ಲಿಗಿ:</strong> ಸೀಮಂತ ಮಹಿಳೆಯ ಜೀವನದ ಅತ್ಯಂತ ಮಹತ್ತರ ಘಟ್ಟ ಎಂದು ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಅಭಿಪ್ರಾಯಪಟ್ಟರು.</p>.<p>ತಮ್ಮ ಸ್ವಗ್ರಾಮ ತಾಲ್ಲೂಕಿನ ನರಸಿಂಹಗಿರಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಶಾಸಕರ ಕುಟುಂಬದಿಂದ ಗುರುವಾರ ಹಮ್ಮಿಕೊಂಡಿದ್ದ ಗರ್ಭಿಣಿಯರಿಗೆ ಸೀಮಂತ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಗರ್ಭಿಣಿಯರು ಪೌಷ್ಟಿಕ, ಸಮತೋಲಿತ ಆಹಾರ ಸೇವನೆ ಮಾಡಿ ಆರೋಗ್ಯ ಕಾಪಾಡಿಕೊಳ್ಳಬೇಕು. ಗರ್ಭಿಣಿ ಹಾಗೂ ಮಕ್ಕಳು ದೇಶದ ಸಂಪತ್ತು’ ಎಂದರು.</p>.<p>ಗುಡೇಕೋಟೆ ಹೋಬಳಿಯ 350ಕ್ಕೂ ಹೆಚ್ಚು ಗರ್ಭಿಣಿಯರಿಗೆ ಸೀಮಂತ ನೆರವೇರಿಸಿ, ತಾಲ್ಲೂಕಿನ 160ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಮಾಡಲಾಯಿತು.</p>.<p>ಶಾಸಕರ ತಾಯಿ ಎನ್.ಟಿ. ಓಬಮ್ಮ, ಕಾಂಗ್ರೆಸ್ ಮುಖಂಡ ಎನ್.ಟಿ. ತಮ್ಮಣ್ಣ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಸ್.ಪಿ. ಪ್ರದೀಪ್ ಕುಮಾರ್, ಉಪಾನ್ಯಾಸಕಿ ಗಂಗಮ್ಮ, ಎಸ್. ವೆಂಕಟೇಶ್, ಮಂಜುನಾಥ, ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>