<p>ಕುರುಗೋಡು: ತಾಲ್ಲೂಕಿನ ಬಾದನಹಟ್ಟಿ ಗ್ರಾಮದಲ್ಲಿ ಶುಕ್ರವಾರ ಸಂಜೆ ಬಾವಿ ಆಂಜನೇಯಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.</p>.<p>ರಥೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಬೆಳಿಗ್ಗೆ ಹೋಮ, ಹವನ, ವಿಶೇಷ ಪೂಜೆ ಧಾರ್ಮಿಕ ವಿಧಿವಿಧಾನ ಜರುಗಿದವು. ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ಹೂ, ಹಣ್ಣು, ಕಾಯಿ ಸಮರ್ಪಿಸಿ ಭಕ್ತಿ ಮೆರೆದರು.</p>.<p>ಇಟಗಿ ಹಿರೇಮಠ ಸಂಸ್ಥಾನದ ಗುರುಶಾಂತವೀರ ಶ್ರೀ, ಕಲ್ಲುಕಂಭ ರುದ್ರಮುನಿ ತಾತ ಮತ್ತು ಸದ್ಗುರು ಕರಿಬಸವ ಶರಣರು ಪೂಜೆಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.</p>.<p>ಸಂಜೆ ಅಲಂಕೃತ ರಥವನ್ನು ದೇವಸ್ಥಾನದ ಆವರಣದಿಂದ ಪಾದಗಟ್ಟೆವರೆಗೆ ಎಳೆದು ನಂತ ಸ್ವಸ್ಥಳಕ್ಕೆ ಭಕ್ತರು ಎಳೆದುತಂದರು. ರಥ ಎಳೆಯುವ ಸಂದರ್ಭದಲ್ಲಿ ಭಕ್ತರು ಆಂಜನೇಯಸ್ವಾಮಿಗೆ ಜಯಕಾರ ಕೂಗಿದರು.</p>.<p>ಬಾದನಹಟ್ಟಿ ಸೇರಿದಂತೆ ಸಿದ್ದಮ್ಮನಹಳ್ಳಿ, ಯರಿಂಗಳಿಗಿ, ಕುರುಗೋಡು, ಯಲ್ಲಾಪುರ, ವದ್ದಟ್ಟಿ ಗ್ರಾಮಗಳ ಜನರು ರಥೋತ್ಸವ ವೀಕ್ಷಣೆಗೆ ಆಗಮಿಸಿದ್ದರು. ರಥಕ್ಕೆ ಹೂ–ಹಣ್ಣು ಎಸೆದು ಭಕ್ತಿ ಮೆರೆದರು. ರಥೋತ್ಸವದ ಅಂಗವಾಗಿ ಕಳೆದ ಒಂಬತ್ತು ದಿನಗಳ ಕಾಲ ಜರುಗಿದ ಸಪ್ತ ಭಜನೆ ಶುಕ್ರವಾರ ಕೊನೆಗೊಂಡಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-25-1756535132</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುರುಗೋಡು: ತಾಲ್ಲೂಕಿನ ಬಾದನಹಟ್ಟಿ ಗ್ರಾಮದಲ್ಲಿ ಶುಕ್ರವಾರ ಸಂಜೆ ಬಾವಿ ಆಂಜನೇಯಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.</p>.<p>ರಥೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಬೆಳಿಗ್ಗೆ ಹೋಮ, ಹವನ, ವಿಶೇಷ ಪೂಜೆ ಧಾರ್ಮಿಕ ವಿಧಿವಿಧಾನ ಜರುಗಿದವು. ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ಹೂ, ಹಣ್ಣು, ಕಾಯಿ ಸಮರ್ಪಿಸಿ ಭಕ್ತಿ ಮೆರೆದರು.</p>.<p>ಇಟಗಿ ಹಿರೇಮಠ ಸಂಸ್ಥಾನದ ಗುರುಶಾಂತವೀರ ಶ್ರೀ, ಕಲ್ಲುಕಂಭ ರುದ್ರಮುನಿ ತಾತ ಮತ್ತು ಸದ್ಗುರು ಕರಿಬಸವ ಶರಣರು ಪೂಜೆಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.</p>.<p>ಸಂಜೆ ಅಲಂಕೃತ ರಥವನ್ನು ದೇವಸ್ಥಾನದ ಆವರಣದಿಂದ ಪಾದಗಟ್ಟೆವರೆಗೆ ಎಳೆದು ನಂತ ಸ್ವಸ್ಥಳಕ್ಕೆ ಭಕ್ತರು ಎಳೆದುತಂದರು. ರಥ ಎಳೆಯುವ ಸಂದರ್ಭದಲ್ಲಿ ಭಕ್ತರು ಆಂಜನೇಯಸ್ವಾಮಿಗೆ ಜಯಕಾರ ಕೂಗಿದರು.</p>.<p>ಬಾದನಹಟ್ಟಿ ಸೇರಿದಂತೆ ಸಿದ್ದಮ್ಮನಹಳ್ಳಿ, ಯರಿಂಗಳಿಗಿ, ಕುರುಗೋಡು, ಯಲ್ಲಾಪುರ, ವದ್ದಟ್ಟಿ ಗ್ರಾಮಗಳ ಜನರು ರಥೋತ್ಸವ ವೀಕ್ಷಣೆಗೆ ಆಗಮಿಸಿದ್ದರು. ರಥಕ್ಕೆ ಹೂ–ಹಣ್ಣು ಎಸೆದು ಭಕ್ತಿ ಮೆರೆದರು. ರಥೋತ್ಸವದ ಅಂಗವಾಗಿ ಕಳೆದ ಒಂಬತ್ತು ದಿನಗಳ ಕಾಲ ಜರುಗಿದ ಸಪ್ತ ಭಜನೆ ಶುಕ್ರವಾರ ಕೊನೆಗೊಂಡಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-25-1756535132</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>