<p><strong>ಕುರುಗೋಡು</strong>: ‘ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸರ್ಕಾರ ನೇಮಿಸಿಕೊಳ್ಳುವ ಅತಿಥಿ ಶಿಕ್ಷಕ ಆಯ್ಕೆ ಪ್ರಕ್ರಿಯೆಯಲ್ಲಿ ಮೆರಿಟ್ ಆಧಾರದಲ್ಲಿ ನಡೆಯುತ್ತಿದ್ದು, ಜತೆಗೆ ಅನುಭವವನ್ನು ಪರಿಗಣಿಸಬೇಕು’ ಎಂದು ಅತಿಥಿ ಶಿಕ್ಷಕದ ಸಂಘದ ತಾಲ್ಲೂಕು ಘಟಕದ ಸದಸ್ಯರು ಬಿಇಒ ಕಚೇರಿಗೆ ಬುಧವಾರ ಮನವಿ ಸಲ್ಲಿಸಿದರು.</p>.<p>ಅತಿಥಿ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಮಲ್ಲೇಶ್ ಹಾಗೂ ತಾಲ್ಲೂಕು ಅಧ್ಯಕ್ಷ ಎಸ್.ರಾಮಪ್ಪ ಮಾತನಾಡಿ, ‘ಅತಿಥಿ ಶಿಕ್ಷಕರ ಸೇವಾ ಜೇಷ್ಠತೆ ಪರಿಗಣಿಸಿ ನೇಮಕ ಮಾಡಿಕೊಳ್ಳಬೇಕು. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಶಿಕ್ಷಣ ಇಲಾಖೆ ಆಯುಕ್ತರ ಗಮನಕ್ಕೆ ತರಬೇಕು’ ಎಂದು ಒತ್ತಾಯಿಸಿದರು. ಬಿಇಒ ಕಚೇರಿ ಪತ್ರಾಂಕಿತ ವ್ಯವಸ್ಥಾಪಕ ವೈಎಸ್. ಭುಜಂಗ ಮಠ ಅವರು ಮನವಿ ಸ್ವೀಕರಿಸಿದರು. ಮಾರೆಣ್ಣ, ಹೊನ್ನೂರ ಸ್ವಾಮಿ, ಪಂಡುರಂಗ, ವಿರೂಪಾಕ್ಷಯ್ಯ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-25-850076107</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುರುಗೋಡು</strong>: ‘ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸರ್ಕಾರ ನೇಮಿಸಿಕೊಳ್ಳುವ ಅತಿಥಿ ಶಿಕ್ಷಕ ಆಯ್ಕೆ ಪ್ರಕ್ರಿಯೆಯಲ್ಲಿ ಮೆರಿಟ್ ಆಧಾರದಲ್ಲಿ ನಡೆಯುತ್ತಿದ್ದು, ಜತೆಗೆ ಅನುಭವವನ್ನು ಪರಿಗಣಿಸಬೇಕು’ ಎಂದು ಅತಿಥಿ ಶಿಕ್ಷಕದ ಸಂಘದ ತಾಲ್ಲೂಕು ಘಟಕದ ಸದಸ್ಯರು ಬಿಇಒ ಕಚೇರಿಗೆ ಬುಧವಾರ ಮನವಿ ಸಲ್ಲಿಸಿದರು.</p>.<p>ಅತಿಥಿ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಮಲ್ಲೇಶ್ ಹಾಗೂ ತಾಲ್ಲೂಕು ಅಧ್ಯಕ್ಷ ಎಸ್.ರಾಮಪ್ಪ ಮಾತನಾಡಿ, ‘ಅತಿಥಿ ಶಿಕ್ಷಕರ ಸೇವಾ ಜೇಷ್ಠತೆ ಪರಿಗಣಿಸಿ ನೇಮಕ ಮಾಡಿಕೊಳ್ಳಬೇಕು. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಶಿಕ್ಷಣ ಇಲಾಖೆ ಆಯುಕ್ತರ ಗಮನಕ್ಕೆ ತರಬೇಕು’ ಎಂದು ಒತ್ತಾಯಿಸಿದರು. ಬಿಇಒ ಕಚೇರಿ ಪತ್ರಾಂಕಿತ ವ್ಯವಸ್ಥಾಪಕ ವೈಎಸ್. ಭುಜಂಗ ಮಠ ಅವರು ಮನವಿ ಸ್ವೀಕರಿಸಿದರು. ಮಾರೆಣ್ಣ, ಹೊನ್ನೂರ ಸ್ವಾಮಿ, ಪಂಡುರಂಗ, ವಿರೂಪಾಕ್ಷಯ್ಯ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-25-850076107</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>