

ನಿವಾಸಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಅಧಿಕಾರಿಗಳು ಮತ್ತು ಶಾಸಕರ ಗಮನಕ್ಕೆ ತರಲಾಗಿದೆ. ಸಮಸ್ಯೆಗೆ ಸ್ಪಂದಿಸುವ ಭರವಸೆ ನೀಡಿದ್ದಾರೆಜೋಗಿ ಸುಂಕಪ್ಪ ಪುರಸಭೆ ಮಾಜಿ ಸದಸ್ಯ
ಕಾಲೊನಿಗೆ ವಿದ್ಯುತ್ ಸಂಪರ್ಕವಿಲ್ಲ. ಕತ್ತಲೆಯಲ್ಲಿ ಕಾಲಕಳೆಯಬೇಕಾದ ಪರಿಸ್ಥಿತಿ ಇದೆ. ವಿದ್ಯುತ್ ಸಂಪರ್ಕ ಕಲ್ಪಿಸಿದರೆ ಅನುಕೂಲವಾಗುತ್ತದೆಬಸವರಾಜ ಕಾಲೊನಿ ನಿವಾಸಿ
ಪುರಸಭೆ ಆಡಳಿತ ಮಂಡಳಿ ಜತೆ ಚರ್ಚಿಸಿ ಅಲೆಮಾರಿಗಳು ವಾಸವಿರುವ ಕಾಲೊನಿಗೆ ಮೂಲಸೌಕರ್ಯ ಕಲ್ಪಿಸಲು ಕ್ರಮಕೈಗೊಳ್ಳಲಾಗುವುದುದತ್ತಾತ್ರೇಯ ಹೆಗಡೆ ಪುರಸಭೆ ಮುಖ್ಯಾಧಿಕಾರಿ
ಶೌಚಾಲಯವಿಲ್ಲದ ಕಾರಣ ಮಹಿಳೆಯರು ಬೆಳಿಗ್ಗೆ ಅಥವಾ ರಾತ್ರಿ ಬಯಲು ಬಹಿರ್ದೆಸೆಗೆ ಹೋಗಬೇಕು. ಘನತೆಯಿಂದ ಬದುಕಲು ಅವಕಾಶ ಕಲ್ಪಿಸಿಕೊಡಿಚಿನ್ನದಾಸರ ಮಲ್ಲಮ್ಮ ಕಾಲೊನಿ ನಿವಾಸಿ
ಇವರು ಏನಂತಾರೆ?
ಕಾಲೊನಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅನುದಾನದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಕಟ್ಟಡ ಮತ್ತು ಅಂಗನವಾಡಿ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ.ಹಂಡಿಜೋಗಿ ಸಂಗೀತಾ ಪುರಸಭೆ ಸದಸ್ಯೆ
ಪುರಸಭೆ ನಿವೇಶನ ನೀಡಿದೆ. ಇಲ್ಲಿ ವಾಸಿಸುವ ಬಹುತೇಕರು ಕೂಲಿ ಕೆಲಸ ಮತ್ತು ಭಿಕ್ಷಾಟನೆಯಿಂದ ಜೀವನ ನಡೆಸುತ್ತಾರೆ. ತಾತ್ಕಾಲಿಕ ಗುಡಿಸಲುಗಳಲ್ಲಿ ವಾಸವಿದ್ದೇವೆ. ಮನೆ ನಿರ್ಮಿಸಿಕೊಳ್ಳಲು ಹಣವಿಲ್ಲ. ಸರ್ಕಾರದಿಂದ ಮನೆ ನಿರ್ಮಿಸಿಕೊಡಬೇಕು.ಮಾರೆಕ್ಕ ಕಾಲೋನಿ ನಿವಾಸಿ
ಮಳೆಗಾಲದಲ್ಲಿ ಸುತ್ತಲಿನ ಬೆಟ್ಟಗಳಿಂದ ಮಳೆಯ ನೀರು ರಭಸವಾಗಿ ಗುಡಿಸಲುಗಳಿಗೆ ನುಗ್ಗುತ್ತದೆ. ಆ ಸಂದರ್ಭದಲ್ಲಿ ಇಲ್ಲಿ ಜೀವಿಸುವುದು ಕಷ್ಟವಾಗುತ್ತದೆ. ಚರಂಡಿ ರಸ್ತೆಗಳಿಲ್ಲ. ಇಡೀ ಪ್ರದೇಶ ಜಲಾವೃತವಾಗುತ್ತದೆ. ಕಳೆದ ಬಾರಿ ಸುರಿದ ಭಾರಿ ಮಳೆಗೆ ಸಾಕಿದ ಜವಾರಿ ಕೋಳಿ ಮೃತಪಟ್ಟು ನಷ್ಟ ಉಂಟಾಗಿತ್ತುಚಿನ್ನದಾಸರ ಬಸವರಾಜ ಕಾಲೊನಿ ನಿವಾಸಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.