‘ಸಮರ್ಪಕ ಅನುಷ್ಠಾನಕ್ಕೆ ಶ್ರಮಿಸೋಣ’
‘ಸ್ಥಳೀಯ ಸಂಸ್ಥೆಗಳು ಸಲ್ಲಿಸುವ ಬಜೆಟ್ ಆಧಾರದಲ್ಲಿ ರಾಜ್ಯ ಸರ್ಕಾರ ಬಜೆಟ್ ತಯಾರಿಸುತ್ತದೆ. ಸರ್ಕಾರದಿಂದ ದೊರೆಯುವ ಅನುದಾನ ಮತ್ತು ಪುರಸಭೆಯ ವಿವಿಧ ಮೂಲಗಳಿಂದ ಬರುವ ಆದಾಯದ ಆಧಾರದ ಮೇಲೆ ಪ್ರತಿ ವರ್ಷ ಬಜೆಟ್ ತಯಾರಿಸಬೇಂಬ ನಿಯಮವಿದೆ. ಸಾರ್ವಜನಿಕರಿಗೆ ಅಗತ್ಯವಿರುವ ಕಾಮಗಾರಿಗಳ ಮಾಹಿತಿಯನ್ನು ಈ ವರ್ಷದ ಬಜೆಟ್ನಲ್ಲಿ ಅಳವಡಿಸಿ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಎಲ್ಲರೂ ಶ್ರಮಿಸೋಣ’ ಎಂದು ಪುರಸಭೆ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ಹೇಳಿದರು.