<p><strong>ಕುರುಗೋಡು:</strong> ‘ಮನುಷ್ಯರು ಸಂಸ್ಕಾರವಂತರಾಗಿ ಸಮಾಜದಲ್ಲಿ ಮೌಲ್ಯಯುತ ಜೀವನ ನಡೆಸಬೇಕು’ ಎಂದು ಸಿದ್ದರಾಮಾನಂದಪುರಿ ಶ್ರೀ ಹೇಳಿದರು.</p>.<p>ಇಲ್ಲಿಗೆ ಸಮೀಪದ ಸಿರಿಗೇರಿ ಗ್ರಾಮದಲ್ಲಿ ಗುರುವಾರ ಭಕ್ತ ಕನಕದಾಸ ಮತ್ತು ಸಂಗೊಳ್ಳಿ ರಾಯಣ್ಣ ಅವರ ಮೂರ್ತಿ ಅನಾವರಣಗೊಳಿಸಿ ಅವರು ಆಶೀರ್ವಚನ ನೀಡಿದರು.</p>.<p>‘ಜಯಂತಿಗಳ ಆಚರಣೆಗಿಂತ ಶರಣರ, ಸಂತರ, ದಾಸರ, ವಚನಕಾರರ ಜೀವನ ಶೈಲಿ ಅನುಕರಣೆ ಬಗ್ಗೆ ಹೆಚ್ಚು ಒತ್ತು ಕೊಡಬೇಕು’ ಎಂದು ಸಲಹೆ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಭೀಮಲಿಂಗಪ್ಪ ಮಾತನಾಡಿ, ‘ಭಕ್ತ ಕನಕದಾಸ ಮತ್ತು ವೀರ ಸಂಗೊಳ್ಳಿ ರಾಯಣ್ಣ ಅವರು ಎಲ್ಲ ಸಮಾಜದವರನ್ನು ಸಮಾನವಾಗಿ ಕಂಡವರು’ ಎಂದರು.</p>.<p>ಪ್ರಮುಖರಾದ ದಮ್ಮೂರು ಸೋಮಪ್ಪ, ದರಪ್ಪನಾಯಕ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಡಾ. ಪಿ.ಎಲ್.ಗಾದಿಲಿಂಗನಗೌಡ, ಎನ್.ಕರಿಬಸಪ್ಪ ಮತ್ತು ನಂದಕುಮಾರ್ ಮಾತನಾಡಿದರು.</p>.<p>ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಕನಕದಾಸ, ಸಂಗೊಳ್ಳಿ ರಾಯಣ್ಣ ಮತ್ತು ಶರಣ ಗೂಳ್ಯಂ ಗಾದಿಲಿಂಗಪ್ಪ ಅವರ ಚಿತ್ರಗಳ ಮೆರವಣಿಗೆ ನಡೆಯಿತು.</p>.<p>ಗ್ರಾಮದ ಸಿರಿಗೇರಮ್ಮ ದೇವಸ್ಥಾನದಿಂದ ಆರಂಭಗೊಂಡ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಾಗನಾಥೇಶ್ವರ ದೇವಸ್ಥಾನದ ಆವರಣದಲ್ಲಿ ಸಮಾವೇಶಗೊಂಡಿತು.</p>.<p>ಪೂರ್ಣಕುಂಭ, ಮಹಿಳೆಯರ ಕಳಸ, ಡೊಳ್ಳು, ಸಮಾಳ, ಮಂಗಳವಾಧ್ಯ ಭಾಗವಹಿಸಿ ಮೆರವಣಿಗೆಯ ಮೆರುಗು ಹೆಚ್ಚಿಸಿದ್ದರು.</p>.<p>ಭಕ್ತರು ಸಿದ್ದರಾಮಾನಂದಪುರಿ ಶ್ರೀಗಳಿಗೆ ತುಲಾಭಾರ ಸೇವೆ ನೆರವೇರಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿ ದ್ಯಾವಣ್ಣ, ಉಪಾಧ್ಯಕ್ಷೆ ರಾಜಮ್ಮ ಡ್ರೈವರ್ ಹುಲಗಪ್ಪ, ಪಿಎಸ್ಐ ವೈ.ಶಶಿಧರ ನಾಯಕ್, ಎಸ್.ಎಂ. ಅಡಿವೆಯ್ಯ ಸ್ವಾಮಿ, ನಿಟ್ಟೂರು ಹನುಮಂತ, ಈರನಾಗಪ್ಪ ಮತ್ತು ಶೇಕ್ಷಾವಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುರುಗೋಡು:</strong> ‘ಮನುಷ್ಯರು ಸಂಸ್ಕಾರವಂತರಾಗಿ ಸಮಾಜದಲ್ಲಿ ಮೌಲ್ಯಯುತ ಜೀವನ ನಡೆಸಬೇಕು’ ಎಂದು ಸಿದ್ದರಾಮಾನಂದಪುರಿ ಶ್ರೀ ಹೇಳಿದರು.</p>.<p>ಇಲ್ಲಿಗೆ ಸಮೀಪದ ಸಿರಿಗೇರಿ ಗ್ರಾಮದಲ್ಲಿ ಗುರುವಾರ ಭಕ್ತ ಕನಕದಾಸ ಮತ್ತು ಸಂಗೊಳ್ಳಿ ರಾಯಣ್ಣ ಅವರ ಮೂರ್ತಿ ಅನಾವರಣಗೊಳಿಸಿ ಅವರು ಆಶೀರ್ವಚನ ನೀಡಿದರು.</p>.<p>‘ಜಯಂತಿಗಳ ಆಚರಣೆಗಿಂತ ಶರಣರ, ಸಂತರ, ದಾಸರ, ವಚನಕಾರರ ಜೀವನ ಶೈಲಿ ಅನುಕರಣೆ ಬಗ್ಗೆ ಹೆಚ್ಚು ಒತ್ತು ಕೊಡಬೇಕು’ ಎಂದು ಸಲಹೆ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಭೀಮಲಿಂಗಪ್ಪ ಮಾತನಾಡಿ, ‘ಭಕ್ತ ಕನಕದಾಸ ಮತ್ತು ವೀರ ಸಂಗೊಳ್ಳಿ ರಾಯಣ್ಣ ಅವರು ಎಲ್ಲ ಸಮಾಜದವರನ್ನು ಸಮಾನವಾಗಿ ಕಂಡವರು’ ಎಂದರು.</p>.<p>ಪ್ರಮುಖರಾದ ದಮ್ಮೂರು ಸೋಮಪ್ಪ, ದರಪ್ಪನಾಯಕ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಡಾ. ಪಿ.ಎಲ್.ಗಾದಿಲಿಂಗನಗೌಡ, ಎನ್.ಕರಿಬಸಪ್ಪ ಮತ್ತು ನಂದಕುಮಾರ್ ಮಾತನಾಡಿದರು.</p>.<p>ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಕನಕದಾಸ, ಸಂಗೊಳ್ಳಿ ರಾಯಣ್ಣ ಮತ್ತು ಶರಣ ಗೂಳ್ಯಂ ಗಾದಿಲಿಂಗಪ್ಪ ಅವರ ಚಿತ್ರಗಳ ಮೆರವಣಿಗೆ ನಡೆಯಿತು.</p>.<p>ಗ್ರಾಮದ ಸಿರಿಗೇರಮ್ಮ ದೇವಸ್ಥಾನದಿಂದ ಆರಂಭಗೊಂಡ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಾಗನಾಥೇಶ್ವರ ದೇವಸ್ಥಾನದ ಆವರಣದಲ್ಲಿ ಸಮಾವೇಶಗೊಂಡಿತು.</p>.<p>ಪೂರ್ಣಕುಂಭ, ಮಹಿಳೆಯರ ಕಳಸ, ಡೊಳ್ಳು, ಸಮಾಳ, ಮಂಗಳವಾಧ್ಯ ಭಾಗವಹಿಸಿ ಮೆರವಣಿಗೆಯ ಮೆರುಗು ಹೆಚ್ಚಿಸಿದ್ದರು.</p>.<p>ಭಕ್ತರು ಸಿದ್ದರಾಮಾನಂದಪುರಿ ಶ್ರೀಗಳಿಗೆ ತುಲಾಭಾರ ಸೇವೆ ನೆರವೇರಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿ ದ್ಯಾವಣ್ಣ, ಉಪಾಧ್ಯಕ್ಷೆ ರಾಜಮ್ಮ ಡ್ರೈವರ್ ಹುಲಗಪ್ಪ, ಪಿಎಸ್ಐ ವೈ.ಶಶಿಧರ ನಾಯಕ್, ಎಸ್.ಎಂ. ಅಡಿವೆಯ್ಯ ಸ್ವಾಮಿ, ನಿಟ್ಟೂರು ಹನುಮಂತ, ಈರನಾಗಪ್ಪ ಮತ್ತು ಶೇಕ್ಷಾವಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>