<p><strong>ಕುರುಗೋಡು:</strong> ಇಲ್ಲಿನ ಪುರಸಭೆ ಸದಸ್ಯರಿಗೆ ಬೆಂಗಳೂರಿನ ಜನಗ್ರಹ ಸಂಸ್ಥೆ ವತಿಯಿಂದ ಸೋಮವಾರ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.</p>.<p>ಕಾರ್ಯಾಗಾರಕ್ಕೆ ಚಾಲನೆ ನೀಡಿದ ಪುರಸಭೆ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ಮಾತನಾಡಿ, ‘ದಿನನಿತ್ಯ ಮನೆಯಲ್ಲಿನ ಕಸವನ್ನು ನಾಲ್ಕು ವಿಧದಲ್ಲಿ ಬೇರ್ಪಡಿಸಿ ಪುರಸಭೆ ವಾಹನಕ್ಕೆ ಕೊಡುವ ಬಗ್ಗೆ ಸದಸ್ಯರು ತಮ್ಮ ವಾರ್ಡ್ಗಳಲ್ಲಿ ಮನವರಿಕೆ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಜನಸಂಗ್ರಾಮ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಎಲ್. ಮಂಜುನಾಥ ಮಾತನಾಡಿ, ‘ಸದಸ್ಯರು ತಮಗೆ ಬರುವ ಅನುದಾನವನ್ನು ಬಳಕೆ ಮಾಡಿಕೊಳ್ಳುವುದು ಮಾತ್ರವಲ್ಲ. ಅಭಿವೃದ್ಧಿಯ ಜತೆಗೆ ತ್ಯಾಜ್ಯ ವಿಲೇವಾರಿ ಮಾಡಲು ವಾರ್ಡ್ ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಸಲಹೆ ನೀಡಿದರು.</p>.<p>ತಾಂತ್ರಿಕ ಸಲಹೆಗಾರ ಲೋಕೇಶ್ ಅವರು ‘ಘನತ್ಯಾಜ್ಯ ವಿಲೇವಾರಿ ನಿಯಮ 2026’ ಕುರಿತು ಮಾಹಿತಿ ನೀಡಿದರು. ಪುರಸಭೆ ಅಧ್ಯಕ್ಷ ಜಿ. ಮಂಜುನಾಥ, ಉಪಾಧ್ಯಕ್ಷೆ ನಾಗವೇಣಿ ಅಂಜಿನಪ್ಪ, ಪುರಸಭೆ ಸದಸ್ಯರು ಮತ್ತು ಸಿಬ್ಬಂದಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-25-541143545</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುರುಗೋಡು:</strong> ಇಲ್ಲಿನ ಪುರಸಭೆ ಸದಸ್ಯರಿಗೆ ಬೆಂಗಳೂರಿನ ಜನಗ್ರಹ ಸಂಸ್ಥೆ ವತಿಯಿಂದ ಸೋಮವಾರ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.</p>.<p>ಕಾರ್ಯಾಗಾರಕ್ಕೆ ಚಾಲನೆ ನೀಡಿದ ಪುರಸಭೆ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ಮಾತನಾಡಿ, ‘ದಿನನಿತ್ಯ ಮನೆಯಲ್ಲಿನ ಕಸವನ್ನು ನಾಲ್ಕು ವಿಧದಲ್ಲಿ ಬೇರ್ಪಡಿಸಿ ಪುರಸಭೆ ವಾಹನಕ್ಕೆ ಕೊಡುವ ಬಗ್ಗೆ ಸದಸ್ಯರು ತಮ್ಮ ವಾರ್ಡ್ಗಳಲ್ಲಿ ಮನವರಿಕೆ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಜನಸಂಗ್ರಾಮ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಎಲ್. ಮಂಜುನಾಥ ಮಾತನಾಡಿ, ‘ಸದಸ್ಯರು ತಮಗೆ ಬರುವ ಅನುದಾನವನ್ನು ಬಳಕೆ ಮಾಡಿಕೊಳ್ಳುವುದು ಮಾತ್ರವಲ್ಲ. ಅಭಿವೃದ್ಧಿಯ ಜತೆಗೆ ತ್ಯಾಜ್ಯ ವಿಲೇವಾರಿ ಮಾಡಲು ವಾರ್ಡ್ ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಸಲಹೆ ನೀಡಿದರು.</p>.<p>ತಾಂತ್ರಿಕ ಸಲಹೆಗಾರ ಲೋಕೇಶ್ ಅವರು ‘ಘನತ್ಯಾಜ್ಯ ವಿಲೇವಾರಿ ನಿಯಮ 2026’ ಕುರಿತು ಮಾಹಿತಿ ನೀಡಿದರು. ಪುರಸಭೆ ಅಧ್ಯಕ್ಷ ಜಿ. ಮಂಜುನಾಥ, ಉಪಾಧ್ಯಕ್ಷೆ ನಾಗವೇಣಿ ಅಂಜಿನಪ್ಪ, ಪುರಸಭೆ ಸದಸ್ಯರು ಮತ್ತು ಸಿಬ್ಬಂದಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-25-541143545</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>