ನಿರ್ವಹಣೆ ಮಾಡುವವರಿಗೆ ಸ್ವಾಗತ
ಸರ್ಕಾರಿ ಖಾಸಗಿ ಶಿಕ್ಷಣ ಸಂಸ್ಥೆಗಳು ಆಸ್ಪತ್ರೆ ಕ್ರೀಡಾ ಸಂಕೀರ್ಣ ಬಸ್ ನಿಲ್ದಾಣಗಳಲ್ಲಿ ಬೀದಿನಾಯಿಗಳಿರುವ ಬಗ್ಗೆ ಮಾಹಿತಿ ನೀಡುವಂತೆ ಮುಖ್ಯಸ್ಥರಿಗೆ ಸೂಚಿಸಲಾಗಿದೆ. ಸಂತಾನ ನಿಯಂತ್ರಣ ಶಸ್ತ್ರಚಿಕಿತ್ಸೆ ನಡೆಸಲು ಟೆಂಡರ್ ಕರೆಯಲಾಗಿದೆ. ಪ್ರಕ್ರಿಯೆ ಪೂರ್ಣಗೊಂಡ ನಂತರ ಶಸ್ತ್ರಚಿಕಿತ್ಸೆ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ. ಸ್ವಯಂ ಪ್ರೇರಣೆಯಿಂದ ಬೀದಿನಾಯಿಗಳನ್ನು ದತ್ತುಪಡೆಯಲು ಇಚ್ಚಿಸುವವರು ಕಚೇರಿಯಲ್ಲಿ ಸಂಪರ್ಕಿಸಬಹುದು ಎಂದು ಪುರಸಭೆ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ತಿಳಿಸಿದರು.