<p>ಕುರುಗೋಡು: ಇಲ್ಲಿನ ಪುರಸಭೆಗೆ 1ನೇ ವಾರ್ಡಿನ ಸದಸ್ಯ ಮಂಜುನಾಥ ಮತ್ತು 19ನೇ ವಾರ್ಡಿನ ಸದಸ್ಯೆ ನಾಗವೇಣಿ ಇವರು ಕ್ರಮವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದರು.</p>.<p>ಟಿ.ಶೇಖಣ್ಣ ಮತ್ತು ಕೆ. ಮಲ್ಲಿಕಾರ್ಜುನ ಇವರು ವೈಯಕ್ತಿಕ ಕಾರಣದಿಂದ ಕ್ರಮವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.</p>.<p>ತೆರವಾದ ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಿಗದಿಯಾಗಿತ್ತು.</p>.<p>ನಿಗದಿತ ಅವಧಿಯೊಳಗೆ ಪರಿಶಿಷ್ಟ ಜಾತಿ ವರ್ಗಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಮಂಜುನಾಥ ಮತ್ತು ಸಾಮಾನ್ಯ ವರ್ಗಕ್ಕೆ ಮೀಸಲಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ನಾಗವೇಣಿ ಇವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ನರಸಪ್ಪ ತಹಶೀಲ್ದಾರ್ ಅವಿರೋಧ ಆಯ್ಕೆಘೋಷಣೆ ಮಾಡಿದರು.</p>.<p>15 ಕಾಂಗ್ರೆಸ್, 7 ಬಿಜೆಪಿ ಮತ್ತು ಒಬ್ಬರು ಪಕ್ಷೇತರ ಸೇರಿ ಒಟ್ಟು 23 ಜನ ಸದಸ್ಯರಿದ್ದಾರೆ.</p>.<p>ಎಲ್ಲ ಸದಸ್ಯರು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.</p>.<p>ಅವಿರೋಧ ಆಯ್ಕೆಯಾದ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಮೆರವಣಿಗೆ ಮಾಡಿ ಅಭಿಮಾನ ಮೆರೆದರು.</p>.<p>ಶಾಸಕ ಜೆ.ಎನ್.ಗಣೇಶ್ ಮತ್ತು ಪುರಸಭೆ ಮುಖಾಧಿಕಾರಿ ದತ್ತಾತ್ರೇಯ ಹೆಗಡೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-25-1299077507</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುರುಗೋಡು: ಇಲ್ಲಿನ ಪುರಸಭೆಗೆ 1ನೇ ವಾರ್ಡಿನ ಸದಸ್ಯ ಮಂಜುನಾಥ ಮತ್ತು 19ನೇ ವಾರ್ಡಿನ ಸದಸ್ಯೆ ನಾಗವೇಣಿ ಇವರು ಕ್ರಮವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದರು.</p>.<p>ಟಿ.ಶೇಖಣ್ಣ ಮತ್ತು ಕೆ. ಮಲ್ಲಿಕಾರ್ಜುನ ಇವರು ವೈಯಕ್ತಿಕ ಕಾರಣದಿಂದ ಕ್ರಮವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.</p>.<p>ತೆರವಾದ ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಿಗದಿಯಾಗಿತ್ತು.</p>.<p>ನಿಗದಿತ ಅವಧಿಯೊಳಗೆ ಪರಿಶಿಷ್ಟ ಜಾತಿ ವರ್ಗಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಮಂಜುನಾಥ ಮತ್ತು ಸಾಮಾನ್ಯ ವರ್ಗಕ್ಕೆ ಮೀಸಲಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ನಾಗವೇಣಿ ಇವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ನರಸಪ್ಪ ತಹಶೀಲ್ದಾರ್ ಅವಿರೋಧ ಆಯ್ಕೆಘೋಷಣೆ ಮಾಡಿದರು.</p>.<p>15 ಕಾಂಗ್ರೆಸ್, 7 ಬಿಜೆಪಿ ಮತ್ತು ಒಬ್ಬರು ಪಕ್ಷೇತರ ಸೇರಿ ಒಟ್ಟು 23 ಜನ ಸದಸ್ಯರಿದ್ದಾರೆ.</p>.<p>ಎಲ್ಲ ಸದಸ್ಯರು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.</p>.<p>ಅವಿರೋಧ ಆಯ್ಕೆಯಾದ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಮೆರವಣಿಗೆ ಮಾಡಿ ಅಭಿಮಾನ ಮೆರೆದರು.</p>.<p>ಶಾಸಕ ಜೆ.ಎನ್.ಗಣೇಶ್ ಮತ್ತು ಪುರಸಭೆ ಮುಖಾಧಿಕಾರಿ ದತ್ತಾತ್ರೇಯ ಹೆಗಡೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-25-1299077507</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>