ನಗರದಲ್ಲಿ ಭಾನುವಾರ ಸಿರಿಗೇರಿ ಅನ್ನಪೂರ್ಣ ಪ್ರಕಾಶನ ಏರ್ಪಡಿಸಿದ್ದ `ಕನ್ನಡ ಕಾವಲಿಗೆ ಸಾಕ್ಷಿಕಲ್ಲು' ಕೃತಿಯ ಬಿಡುಗಡೆ ಕಾರ್ಯಕ್ರಮ
ದಲ್ಲಿ ಮಾತನಾಡಿದ ಅವರು, ‘ಇದು ಸರ್ಕಾರವೇ ನೀಡಿರುವ ಅಂಕಿ ಅಂಶ. ಕರ್ನಾಟಕ ಬಿಟ್ಟರೆ ದೇಶದಲ್ಲಿ ಎಲ್ಲಿಯೂ ರಾಜ್ಯಭಾಷೆಯ ಅಭಿವೃದ್ಧಿಗಾಗಿ ಮಂಡಳಿ, ಪ್ರಾಧಿಕಾರಗಳಿಲ್ಲ. ಆದಾಗ್ಯೂ, ಕನ್ನಡಕ್ಕೆ, ಕನ್ನಡ ಶಾಲೆಗಳಿಗೆ ದುಸ್ಥಿತಿ ಒದಗಿದೆ. ನಮ್ಮ ಭಾಷೆಯನ್ನು ನಾವೇ ಅಭಿವೃದ್ಧಿ ಮಾಡಬೇಕಾಗಿ ಬಂದಿರುವುದು ವಿಪರ್ಯಾಸ’ ಎಂದರು.