ನದಿ ತಟದಲ್ಲಿಯೇ ಕುಟುಂಬ ಸದಸ್ಯರೊಂದಿಗೆ ಬುತ್ತಿ ಬಿಚ್ಚಿಕೊಂಡು ಮಧ್ಯಾಹ್ನದ ಊಟ ಮಾಡುತ್ತಿರುವ ದೃಶ್ಯ ಕಂಡು ಬಂತು. ಬಳಿಕ ಹಂಪಿಯ ಪರಿಸರದಲ್ಲಿ ಓಡಾಡಿ, ಎದುರು ಬಸವಣ್ಣ ಮಂಟಪ, ಚಕ್ರತೀರ್ಥ, ರಾಮ–ಲಕ್ಷ್ಮಣ, ಯಂತ್ರೋದ್ಧಾರಕ, ಬಡವಿಲಿಂಗ, ಉಗ್ರನರಸಿಂಹ, ಸಾಸಿವೆಕಾಳು, ಕಡಲೆಕಾಳು, ಗಜಶಾಲೆ, ಮಹಾನವಮಿ ದಿಬ್ಬ, ರಾಣಿಸ್ನಾನ ಗೃಹ, ವಿಜಯ ವಿಠಲ ದೇವಸ್ಥಾನಕ್ಕೆ ಹೋಗಿ ಕಲ್ಲಿನ ರಥ ಸೇರಿದಂತೆ ಇತರೆ ಸ್ಮಾರಕಗಳನ್ನು ಕಣ್ತುಂಬಿಕೊಂಡರು.