'ಮಹೇಶ್ ಅವರು ನಗರದ ಈಕ್ವಿಟಾಸ್ ಬ್ಯಾಂಕಿನಲ್ಲಿ ಕಾನೂನು ಸಲಹೆಗಾರರಾಗಿ ಕೆಲಸ ನಿರ್ವಹಿಸುತ್ತಿದ್ದರು. ಕಾನೂನುಬಾಹಿರವಾಗಿ ಸಾಲ ಮಂಜೂರಾತಿ ಮಾಡಿಸಿಕೊಡಲು ದಾಖಲೆಗಳನ್ನು ಸಿದ್ಧಪಡಿಸುವಂತೆ ಬ್ಯಾಂಕಿನ ವ್ಯವಸ್ಥಾಪಕರು ಅವರ ಮೇಲೆ ತೀವ್ರ ಒತ್ತಡ ಹಾಕಿದ್ದರು. ಇದರಿಂದಾಗಿ ಅವರು ಒತ್ತಡಕ್ಕೆ ಒಳಗಾಗಿದ್ದರು. ಬ್ಯಾಂಕಿನ ಚೇಂಬರ್ನಲ್ಲಿ ವಿಷಪ್ರಾಶನ ಮಾಡಿ ಕುಸಿದು ಬಿದ್ದಿದ್ದಾರೆ. ಬಳಿಕ ಅವರನ್ನು ಬಳ್ಳಾರಿಯ ವಿಮ್ಸ್ಗೆ ಕರೆದ್ಯೊಯುವ ಮಾರ್ಗ ಮಧ್ಯೆ ಜೀವ ಬಿಟ್ಟಿದ್ದಾರೆ. ಮೃತರ ಪತ್ನಿ ಸಂಧ್ಯಾ ಅವರು ಕೊಟ್ಟಿರುವ ದೂರಿನ ಮೇರೆಗೆ ಬ್ಯಾಂಕಿನ ವ್ಯವಸ್ಥಾಪಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪಟ್ಟಣ ಠಾಣೆ ಪೊಲೀಸರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.