<p><strong>ಸಂಡೂರು(ಬಳ್ಳಾರಿ):</strong> ‘ವಾಲ್ಮೀಕಿ ನಿಗಮದ ಹಣ ಲೋಕಸಭೆ ಚುನಾವಣೆಯಲ್ಲಿ ದುರ್ಬಳಕೆಯಾಗಿದೆ. ಬಳ್ಳಾರಿ ಕ್ಷೇತ್ರದ ಸಂಸದ ಇ.ತುಕರಾಂ ಸದಸ್ಯತ್ವ ರದ್ದತಿಗೆ ಕೋರಿ ಪರಾಜಿತ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಕೋರ್ಟ್ ಮೊರೆ ಹೋಗುವರು’ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ದಾಸ್ ಅಗರವಾಲ್ ತಿಳಿಸಿದರು.</p>.<p>ಸಂಡೂರಿನಲ್ಲಿ ಬುಧವಾರ ನಡೆದ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಮತ್ತು ಸದಸ್ಯತಾ ಅಭಿಯಾನ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ನಿಗಮದ ಹಗರಣ ಕುರಿತು ಜಾರಿ ನಿರ್ದೇಶನಾಲಯ ಕೋರ್ಟ್ಗೆ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ನಿಗಮದ ₹20.19 ಕೋಟಿ ಹಣ ಆಂಧ್ರಪ್ರದೇಶ ಮತ್ತು ತೆಲಂಗಾಣದ ಮೂಲಕ ಬಳ್ಳಾರಿಗೆ ಬಂದಿದ್ದು ಚುನಾವಣೆಯಲ್ಲಿ ಬಳಕೆಯಾಗಿದೆ ಎಂದು ಉಲ್ಲೇಖಿಸಲಾಗಿದೆ. ಇದು ಅಕ್ರಮವಾಗಿದೆ’ ಎಂದರು.</p>.<p>‘ಹಿಂದೆ ಇಂದಿರಾಗಾಂಧಿ ಅವರು ಅಧಿಕಾರ ದುರ್ಬಳಕೆ ಮಾಡಿ, ಗೆದ್ದಿದ್ದರು. ನಂತರ ಅವರ ಸದಸ್ಯತ್ವವನ್ನು ಹೈಕೋರ್ಟ್ ರದ್ದುಪಡಿಸಿತ್ತು. 1977ರ ಮನಸ್ಥಿತಿ ಕಾಂಗ್ರೆಸ್ನಲ್ಲಿ ಇಂದಿಗೂ ಇದೆ’ ಎಂದೂ ಹೇಳಿದರು. </p>.<p>‘ಶ್ರೀರಾಮುಲು ಅವರು ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಆಕಾಂಕ್ಷಿ ಅಲ್ಲ. ಅವರು ಮುಂದಿನ ಎರಡು ತಿಂಗಳಲ್ಲಿ ಸಂಸದರಾಗುವರು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಡೂರು(ಬಳ್ಳಾರಿ):</strong> ‘ವಾಲ್ಮೀಕಿ ನಿಗಮದ ಹಣ ಲೋಕಸಭೆ ಚುನಾವಣೆಯಲ್ಲಿ ದುರ್ಬಳಕೆಯಾಗಿದೆ. ಬಳ್ಳಾರಿ ಕ್ಷೇತ್ರದ ಸಂಸದ ಇ.ತುಕರಾಂ ಸದಸ್ಯತ್ವ ರದ್ದತಿಗೆ ಕೋರಿ ಪರಾಜಿತ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಕೋರ್ಟ್ ಮೊರೆ ಹೋಗುವರು’ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ದಾಸ್ ಅಗರವಾಲ್ ತಿಳಿಸಿದರು.</p>.<p>ಸಂಡೂರಿನಲ್ಲಿ ಬುಧವಾರ ನಡೆದ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಮತ್ತು ಸದಸ್ಯತಾ ಅಭಿಯಾನ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ನಿಗಮದ ಹಗರಣ ಕುರಿತು ಜಾರಿ ನಿರ್ದೇಶನಾಲಯ ಕೋರ್ಟ್ಗೆ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ನಿಗಮದ ₹20.19 ಕೋಟಿ ಹಣ ಆಂಧ್ರಪ್ರದೇಶ ಮತ್ತು ತೆಲಂಗಾಣದ ಮೂಲಕ ಬಳ್ಳಾರಿಗೆ ಬಂದಿದ್ದು ಚುನಾವಣೆಯಲ್ಲಿ ಬಳಕೆಯಾಗಿದೆ ಎಂದು ಉಲ್ಲೇಖಿಸಲಾಗಿದೆ. ಇದು ಅಕ್ರಮವಾಗಿದೆ’ ಎಂದರು.</p>.<p>‘ಹಿಂದೆ ಇಂದಿರಾಗಾಂಧಿ ಅವರು ಅಧಿಕಾರ ದುರ್ಬಳಕೆ ಮಾಡಿ, ಗೆದ್ದಿದ್ದರು. ನಂತರ ಅವರ ಸದಸ್ಯತ್ವವನ್ನು ಹೈಕೋರ್ಟ್ ರದ್ದುಪಡಿಸಿತ್ತು. 1977ರ ಮನಸ್ಥಿತಿ ಕಾಂಗ್ರೆಸ್ನಲ್ಲಿ ಇಂದಿಗೂ ಇದೆ’ ಎಂದೂ ಹೇಳಿದರು. </p>.<p>‘ಶ್ರೀರಾಮುಲು ಅವರು ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಆಕಾಂಕ್ಷಿ ಅಲ್ಲ. ಅವರು ಮುಂದಿನ ಎರಡು ತಿಂಗಳಲ್ಲಿ ಸಂಸದರಾಗುವರು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>