<p><strong>ಬಳ್ಳಾರಿ</strong>: ಇಲ್ಲಿನ ಕಾರಾಗೃಹದಲ್ಲಿ ಇರುವ ಕೊಲೆ ಆರೋಪಿ, ನಟ ದರ್ಶನ್ಗೆ ವಕೀಲರ ತಂಡವು ಪತ್ರ ಬರೆದು ‘ಜೈಲಿನಲ್ಲಿ ಹೇಗಿರಬೇಕು’ ಎಂಬ ಬಗ್ಗೆ ಸಲಹೆ, ಸೂಚನೆ ನೀಡಿದೆ. ಕೈದಿಗಳಿಗೆ ಕುಟುಂಬಸ್ಥರು, ವಕೀಲರು ಪತ್ರ ಬರೆಯಲು ಅವಕಾಶವಿದೆ. ಕಾರಾಗೃಹದ ಅಧಿಕಾರಿಗಳು ಪತ್ರವನ್ನು ಪರಿಶೀಲಿಸಿ, ದರ್ಶನ್ಗೆ ನೀಡಿದ್ದಾರೆ.</p>.<p>‘ವಕೀಲರಿಂದ ಬಂದಿರುವ ಪತ್ರದಲ್ಲಿ ಕೆಲವಷ್ಟು ವೈಯಕ್ತಿಕ ವಿಚಾರಗಳಿವೆ. ಪತ್ರದ ಜೊತೆ ಭಗವದ್ಗೀತೆ ಕಳುಹಿಸಿರುವ ಬಗ್ಗೆ ಉಲ್ಲೇಖವಿದೆ. ಆದರೆ, ಅದು ಪತ್ತೆಯಾಗಿಲ್ಲ’ ಎಂದು ಕಾರಾಗೃಹದ ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ದರ್ಶನ್ಗೆ ಟಿವಿ ಕೊಡಲು ನಿರ್ಧರಿಸಲಾಗಿದೆ. ಆದರೆ, ಬೆರಳು ತೋರಿಸಿದ ಘಟನೆಯಿಂದ ಟಿ.ವಿ ನೀಡುವುದು ವಿಳಂಬ ಮಾಡಲಾಗಿದೆ. ಇದು ಶಿಕ್ಷೆಯ ಕ್ರಮವೇನಲ್ಲ. ಆದರೆ, ಅವರಿಗೆ ಟಿವಿ ಅಗತ್ಯವಿದೆಯೇ ಎಂಬುದನ್ನು ಪರಿಶೀಲಿಸಬೇಕಿದೆ. ಭೇಟಿಗೆ ಇಂಥವರೇ ಬರಬೇಕೆಂದು ದರ್ಶನ್ ಕೇಳಿಲ್ಲ. ಈ ವಾರ ಜೈಲಿಗೆ ಅವರ ಕುಟುಂಬದಿಂದ ಯಾರು ಬರುತ್ತಿದ್ದಾರೆ ಎಂಬ ಬಗ್ಗೆ ಸದ್ಯ ಮಾಹಿತಿ ಇಲ್ಲ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ಇಲ್ಲಿನ ಕಾರಾಗೃಹದಲ್ಲಿ ಇರುವ ಕೊಲೆ ಆರೋಪಿ, ನಟ ದರ್ಶನ್ಗೆ ವಕೀಲರ ತಂಡವು ಪತ್ರ ಬರೆದು ‘ಜೈಲಿನಲ್ಲಿ ಹೇಗಿರಬೇಕು’ ಎಂಬ ಬಗ್ಗೆ ಸಲಹೆ, ಸೂಚನೆ ನೀಡಿದೆ. ಕೈದಿಗಳಿಗೆ ಕುಟುಂಬಸ್ಥರು, ವಕೀಲರು ಪತ್ರ ಬರೆಯಲು ಅವಕಾಶವಿದೆ. ಕಾರಾಗೃಹದ ಅಧಿಕಾರಿಗಳು ಪತ್ರವನ್ನು ಪರಿಶೀಲಿಸಿ, ದರ್ಶನ್ಗೆ ನೀಡಿದ್ದಾರೆ.</p>.<p>‘ವಕೀಲರಿಂದ ಬಂದಿರುವ ಪತ್ರದಲ್ಲಿ ಕೆಲವಷ್ಟು ವೈಯಕ್ತಿಕ ವಿಚಾರಗಳಿವೆ. ಪತ್ರದ ಜೊತೆ ಭಗವದ್ಗೀತೆ ಕಳುಹಿಸಿರುವ ಬಗ್ಗೆ ಉಲ್ಲೇಖವಿದೆ. ಆದರೆ, ಅದು ಪತ್ತೆಯಾಗಿಲ್ಲ’ ಎಂದು ಕಾರಾಗೃಹದ ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ದರ್ಶನ್ಗೆ ಟಿವಿ ಕೊಡಲು ನಿರ್ಧರಿಸಲಾಗಿದೆ. ಆದರೆ, ಬೆರಳು ತೋರಿಸಿದ ಘಟನೆಯಿಂದ ಟಿ.ವಿ ನೀಡುವುದು ವಿಳಂಬ ಮಾಡಲಾಗಿದೆ. ಇದು ಶಿಕ್ಷೆಯ ಕ್ರಮವೇನಲ್ಲ. ಆದರೆ, ಅವರಿಗೆ ಟಿವಿ ಅಗತ್ಯವಿದೆಯೇ ಎಂಬುದನ್ನು ಪರಿಶೀಲಿಸಬೇಕಿದೆ. ಭೇಟಿಗೆ ಇಂಥವರೇ ಬರಬೇಕೆಂದು ದರ್ಶನ್ ಕೇಳಿಲ್ಲ. ಈ ವಾರ ಜೈಲಿಗೆ ಅವರ ಕುಟುಂಬದಿಂದ ಯಾರು ಬರುತ್ತಿದ್ದಾರೆ ಎಂಬ ಬಗ್ಗೆ ಸದ್ಯ ಮಾಹಿತಿ ಇಲ್ಲ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>