<p><strong>ಬಳ್ಳಾರಿ:</strong> ‘ಸರ್ಕಾರ ನಾಲ್ಕೈದು ವರ್ಷಗಳಿಂದ ಪುಸ್ತಕ ಖರೀದಿಸಿಲ್ಲ. ಬಂಡವಾಳ ವಾಪಸ್ ಆಗದೇ ಪ್ರಕಾಶಕರು ಕಂಗಾಲು ಆಗಿದ್ದಾರೆ. ಸರ್ಕಾರ ಈ ಬಜೆಟ್ನಲ್ಲಾದರೂ ಪುಸ್ತಕ ಖರೀದಿಗೆ ₹20 ಕೋಟಿ ಮೀಸಲಿಡಬೇಕು’ ಎಂದು ಕರ್ನಾಟಕ ಪ್ರಕಾಶಕರ ಸಂಘದ ಅಧ್ಯಕ್ಷ ಡಾ. ವಸುಂಧರಾ ಭೂಪತಿ ಇಲ್ಲಿ ಆಗ್ರಹಿಸಿದರು.</p>.<p>ಕರ್ನಾಟಕ ಪ್ರಕಾಶಕರ ಸಂಘ ಮತ್ತು ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯ ಸಹಯೋಗದಲ್ಲಿ ಬುಧವಾರ ಆರಂಭಗೊಂಡ ಎರಡು ದಿನಗಳ ‘ಪ್ರಕಾಶಕರ ಕಮ್ಮಟ’ದಲ್ಲಿ ಅವರು ಮಾತನಾಡಿದರು. </p>.<p>‘ಸಮಸ್ಯೆ ಬಗೆಹರಿಸುವುದಾಗಿ ಸರ್ಕಾರ ಇದೇ ಡಿ. 20ರವರೆಗೆ ಸಮಯ ಕೇಳಿದೆ. ಸ್ಪಂದಿಸದಿದ್ದರೆ ಹೋರಾಟ ನಡೆಸಲಾಗುವುದು’ ಎಂದು ಒತ್ತಾಯಿಸಿದರು.</p>.<p>‘ಸ್ಥಳೀಯ ಸಂಸ್ಥೆಗಳ ಮೂಲಕ ಸಂಗ್ರಹಿಸಿರುವ ಗ್ರಂಥಾಲಯ ಕರ (ಸೆಸ್) ₹703 ಕೋಟಿ ಬಾಕಿ ಇದೆ. ಇದರ ಸದ್ವಿನಿಯೋಗ ಆಗಬೇಕು. ನಮ್ಮ ಹಣವನ್ನು ನಮಗೇ ಕೊಡಲು ಏನು ತೊಂದರೆ. ಕೇರಳದಲ್ಲಿ ಇರುವುಂತೆ ಸರ್ಕಾರವು ಲೇಖಕರ ಕೃತಿಗಳ 2000 ಪ್ರತಿಗಳನ್ನು ಖರೀದಿಸಬೇಕು’ ಎಂದು ಒತ್ತಾಯಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ‘ಸರ್ಕಾರ ನಾಲ್ಕೈದು ವರ್ಷಗಳಿಂದ ಪುಸ್ತಕ ಖರೀದಿಸಿಲ್ಲ. ಬಂಡವಾಳ ವಾಪಸ್ ಆಗದೇ ಪ್ರಕಾಶಕರು ಕಂಗಾಲು ಆಗಿದ್ದಾರೆ. ಸರ್ಕಾರ ಈ ಬಜೆಟ್ನಲ್ಲಾದರೂ ಪುಸ್ತಕ ಖರೀದಿಗೆ ₹20 ಕೋಟಿ ಮೀಸಲಿಡಬೇಕು’ ಎಂದು ಕರ್ನಾಟಕ ಪ್ರಕಾಶಕರ ಸಂಘದ ಅಧ್ಯಕ್ಷ ಡಾ. ವಸುಂಧರಾ ಭೂಪತಿ ಇಲ್ಲಿ ಆಗ್ರಹಿಸಿದರು.</p>.<p>ಕರ್ನಾಟಕ ಪ್ರಕಾಶಕರ ಸಂಘ ಮತ್ತು ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯ ಸಹಯೋಗದಲ್ಲಿ ಬುಧವಾರ ಆರಂಭಗೊಂಡ ಎರಡು ದಿನಗಳ ‘ಪ್ರಕಾಶಕರ ಕಮ್ಮಟ’ದಲ್ಲಿ ಅವರು ಮಾತನಾಡಿದರು. </p>.<p>‘ಸಮಸ್ಯೆ ಬಗೆಹರಿಸುವುದಾಗಿ ಸರ್ಕಾರ ಇದೇ ಡಿ. 20ರವರೆಗೆ ಸಮಯ ಕೇಳಿದೆ. ಸ್ಪಂದಿಸದಿದ್ದರೆ ಹೋರಾಟ ನಡೆಸಲಾಗುವುದು’ ಎಂದು ಒತ್ತಾಯಿಸಿದರು.</p>.<p>‘ಸ್ಥಳೀಯ ಸಂಸ್ಥೆಗಳ ಮೂಲಕ ಸಂಗ್ರಹಿಸಿರುವ ಗ್ರಂಥಾಲಯ ಕರ (ಸೆಸ್) ₹703 ಕೋಟಿ ಬಾಕಿ ಇದೆ. ಇದರ ಸದ್ವಿನಿಯೋಗ ಆಗಬೇಕು. ನಮ್ಮ ಹಣವನ್ನು ನಮಗೇ ಕೊಡಲು ಏನು ತೊಂದರೆ. ಕೇರಳದಲ್ಲಿ ಇರುವುಂತೆ ಸರ್ಕಾರವು ಲೇಖಕರ ಕೃತಿಗಳ 2000 ಪ್ರತಿಗಳನ್ನು ಖರೀದಿಸಬೇಕು’ ಎಂದು ಒತ್ತಾಯಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>