ಹೊಸಪೇಟೆ (ವಿಜಯನಗರ): ಇಲ್ಲಿನ ವಿನಾಯಕ ನಗರದಲ್ಲಿ ಗ್ರಂಥಾಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನೆರವೇರಿಸಲಾಯಿತು.
ನಗರಸಭೆ ಅಧ್ಯಕ್ಷೆ ಸುಂಕಮ್ಮ, ಪೌರಾಯುಕ್ತ ಮನೋಹರ್ ನಾಗರಾಜ್ ಅವರು ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಜಿಲ್ಲಾ ಖನಿಜ ಅಭಿವೃದ್ಧಿ ಪ್ರತಿಷ್ಠಾನದಿಂದ ₹30 ಲಕ್ಷ ರೂಪಾಯಿ ಗ್ರಂಥಾಲಯಕ್ಕೆ ಬಿಡುಗಡೆಯಾಗಿದೆ. ಈ ಭಾಗದ ಜನರಿಗೆ ಇದರ ಪ್ರಯೋಜನವಾಗಲಿದೆ ಎಂದು ಹೇಳಿದರು.
ಬಡಾವಣೆಯ ಅಧ್ಯಕ್ಷ ಎಚ್. ತಿಪ್ಪೇಸ್ವಾಮಿ, ಯು.ಆಂಜಿನೇಯಲು ಮಾತನಾಡಿ, ಈ ಬಡಾವಣೆಯಲ್ಲಿ ಬೀದಿ ದೀಪಗಳು, ಅಡ್ಡರಸ್ತೆಗಳಿಗೆ ನಾಮಫಲಕ, ಸ್ವಾಗತ ಕಮಾನು ಅಳವಡಿಸಬೇಕು. ಗ್ರಂಥಾಲಯ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ವಿನಾಯಕ ನಗರ ಸೇರಿದಂತೆ ಎಲ್ಲ ವಾರ್ಡ್ಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ಕಾಮಗಾರಿಗಳು ಕಳಪೆ ಆಗದಂತೆ ನೋಡಿಕೊಳ್ಳಬೇಕೆಂದು ಒತ್ತಾಯಿಸಿದರು.