<p>ಕಂಪ್ಲಿ: ಅಂಗನವಾಡಿಗಳಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿ ಆರಂಭಿಸಬೇಕು ಎಂದು ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ತಾಲ್ಲೂಕು ಸಮಿತಿಯಿಂದ ತಾಲ್ಲೂಕು ಕಚೇರಿ ಎದುರಿಗೆ ಬುಧವಾರದಿಂದ ಅನಿರ್ಧಿಷ್ಟಾವಧಿ ಧರಣಿ ಆರಂಭಗೊಂಡಿತು.</p>.<p>ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಎಚ್.ಮಂಜುಳಾ ಮಾತನಾಡಿ, ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಗಳನ್ನು ಸರ್ಕಾರಿ ಶಾಲೆಯಲ್ಲಿ ಆರಂಭಿಸುವ ಇಲಾಖೆ ಆದೇಶವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಅಂಗನವಾಡಿ ಕೇಂದ್ರಗಳಲ್ಲಿ ಮುಂದೊಂದು ದಿನ ಮಕ್ಕಳ ಸಂಖ್ಯೆ ಕಡಿಮೆಯಾಗಿ ಕೇಂದ್ರಗಳನ್ನೇ ಬಂದ್ ಮಾಡುವ ಹುನ್ನಾರ ನಡೆದಿದೆ ಎಂದು ಆರೋಪಿಸಿದರು.</p>.<p>ಅಂಗನವಾಡಿಗಳಲ್ಲಿ ಮಕ್ಕಳ ಪೂರ್ವ ಪ್ರಾಥಮಿಕ ಶಿಕ್ಷಣದೊಂದಿಗೆ ಆರೋಗ್ಯ ಕಾಳಜಿ, ಅಪೌಷ್ಟಿಕತೆ ಬಗ್ಗೆ ಕಾಳಜಿವಹಿಸುವ ಕಾರಣ ಅಂಗನವಾಡಿಗಳಲ್ಲೇ ಈ ತರಗತಿಗಳನ್ನು ಆರಂಭಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.</p>.<p>ಸಿಐಟಿಯು ಪ್ರಧಾನ ಕಾರ್ಯದರ್ಶಿ ಜೆ.ಎಂ.ಚನ್ನಬಸಯ್ಯ, ತಾಲ್ಲೂಕು ಸಮಿತಿ ಪದಾಧಿಕಾರಿಗಳಾದ ಬಿ.ಕೆ.ಉಮಾದೇವಿ, ಸಿ.ರಾಧಾಬಾಯಿ, ಎಂ.ಗುರುಪಾದಮ್ಮ, ವಿ.ನಾಜೀರಾ ಪರ್ವೀನ್, ಎಂ.ನಾಗಮ್ಮ, ಎಚ್.ತಿಪ್ಪಮ್ಮ, ಸಿ.ಶಾಂತಮ್ಮ, ಎಚ್.ಶಂಕ್ರಮ್ಮ, ಅಕ್ಕಮಹಾದೇವಿ, ಅಂಜಲಿ, ಎನ್.ಅನುರಾಧ, ಎಸ್.ಹುಲಿಗೆಮ್ಮ, ಮಂಜುಳಾ, ರಸೂಲ್ಬೀ, ಬಿ.ಹುಲಿಗೆಮ್ಮ ಸೇರಿದಂತೆ ತಾಲ್ಲೂಕಿನ 200 ಕಾರ್ಯಕರ್ತೆಯರು, ಸಹಾಯಕಿಯರು ಭಾಗವಹಿಸಿದ್ದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಂಪ್ಲಿ: ಅಂಗನವಾಡಿಗಳಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿ ಆರಂಭಿಸಬೇಕು ಎಂದು ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ತಾಲ್ಲೂಕು ಸಮಿತಿಯಿಂದ ತಾಲ್ಲೂಕು ಕಚೇರಿ ಎದುರಿಗೆ ಬುಧವಾರದಿಂದ ಅನಿರ್ಧಿಷ್ಟಾವಧಿ ಧರಣಿ ಆರಂಭಗೊಂಡಿತು.</p>.<p>ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಎಚ್.ಮಂಜುಳಾ ಮಾತನಾಡಿ, ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಗಳನ್ನು ಸರ್ಕಾರಿ ಶಾಲೆಯಲ್ಲಿ ಆರಂಭಿಸುವ ಇಲಾಖೆ ಆದೇಶವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಅಂಗನವಾಡಿ ಕೇಂದ್ರಗಳಲ್ಲಿ ಮುಂದೊಂದು ದಿನ ಮಕ್ಕಳ ಸಂಖ್ಯೆ ಕಡಿಮೆಯಾಗಿ ಕೇಂದ್ರಗಳನ್ನೇ ಬಂದ್ ಮಾಡುವ ಹುನ್ನಾರ ನಡೆದಿದೆ ಎಂದು ಆರೋಪಿಸಿದರು.</p>.<p>ಅಂಗನವಾಡಿಗಳಲ್ಲಿ ಮಕ್ಕಳ ಪೂರ್ವ ಪ್ರಾಥಮಿಕ ಶಿಕ್ಷಣದೊಂದಿಗೆ ಆರೋಗ್ಯ ಕಾಳಜಿ, ಅಪೌಷ್ಟಿಕತೆ ಬಗ್ಗೆ ಕಾಳಜಿವಹಿಸುವ ಕಾರಣ ಅಂಗನವಾಡಿಗಳಲ್ಲೇ ಈ ತರಗತಿಗಳನ್ನು ಆರಂಭಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.</p>.<p>ಸಿಐಟಿಯು ಪ್ರಧಾನ ಕಾರ್ಯದರ್ಶಿ ಜೆ.ಎಂ.ಚನ್ನಬಸಯ್ಯ, ತಾಲ್ಲೂಕು ಸಮಿತಿ ಪದಾಧಿಕಾರಿಗಳಾದ ಬಿ.ಕೆ.ಉಮಾದೇವಿ, ಸಿ.ರಾಧಾಬಾಯಿ, ಎಂ.ಗುರುಪಾದಮ್ಮ, ವಿ.ನಾಜೀರಾ ಪರ್ವೀನ್, ಎಂ.ನಾಗಮ್ಮ, ಎಚ್.ತಿಪ್ಪಮ್ಮ, ಸಿ.ಶಾಂತಮ್ಮ, ಎಚ್.ಶಂಕ್ರಮ್ಮ, ಅಕ್ಕಮಹಾದೇವಿ, ಅಂಜಲಿ, ಎನ್.ಅನುರಾಧ, ಎಸ್.ಹುಲಿಗೆಮ್ಮ, ಮಂಜುಳಾ, ರಸೂಲ್ಬೀ, ಬಿ.ಹುಲಿಗೆಮ್ಮ ಸೇರಿದಂತೆ ತಾಲ್ಲೂಕಿನ 200 ಕಾರ್ಯಕರ್ತೆಯರು, ಸಹಾಯಕಿಯರು ಭಾಗವಹಿಸಿದ್ದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>