<p><strong>ಹಗರಿಬೊಮ್ಮನಹಳ್ಳಿ</strong>: ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ನಡೆದ ಲೋಕ ಅದಾಲತ್ನಲ್ಲಿ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಆರು ಜೋಡಿ ದಂಪತಿ ಅಂತಿಮವಾಗಿ ರಾಜೀಸಂಧಾನದಲ್ಲಿ ಮತ್ತೆ ಒಂದಾದರು. ಈ ಬಾರಿ 550 ಪ್ರಕರಣಗಳು ಇತ್ಯರ್ಥಗೊಂಡಿದ್ದು ವಿಶೇಷವಾಗಿತ್ತು.</p>.<p>ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಕಾನೂನು ಸೇವೆಗಳ ಸಮಿತಿಯಿಂದ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿತ್ತು. ಹಿರಿಯ ಸಿವಿಲ್ ನ್ಯಾಯಾಧೀಶ ಡಿ.ಕೆ.ಮಧುಸೂಧನ ಅವರ ನ್ಯಾಯಾಲಯದಲ್ಲಿ 1141 ಪ್ರಕರಣಗಳ ಪೈಕಿ 90 ಪ್ರಕರಣಗಳನ್ನು ಇತ್ಯರ್ಥ ಮಾಡಿ ₹3.58 ಕೋಟಿ ರೂಪಾಯಿ ಪರಿಹಾರ ಒದಗಿಸಲಾಯಿತು.</p>.<p>ಸಿವಿಲ್ ನ್ಯಾಯಾಧೀಶ ಸೈಯದ್ ಮೋಹಿದ್ದಿನ್ ಅವರ ನ್ಯಾಯಾಲಯದಲ್ಲಿ 1523 ಪ್ರಕರಣಗಳನ್ನು ಗುರುತಿಸಿ 460 ಪ್ರಕರಣಗಳನ್ನು ಇತ್ಯರ್ಥಗೊಳಿಸಿ ₹46.92ಲಕ್ಷ ಮೊತ್ತದ ಪರಿಹಾರ ಒದಗಿಸಲಾಯಿತು. ಜತೆಗೆ 1229 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಮಾಡಿ ₹41.62ಲಕ್ಷ ಮೊತ್ತದ ಪರಿಹಾರ ನೀಡಲಾಯಿತು.</p>.<p>ಚೆಕ್ ಬೌನ್ಸ್ ಪ್ರಕರಣಗಳು, ಪಾಲುವಿಭಾಗ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಕಕ್ಷಿದಾರರು ಮತ್ತು ವಕೀಲರ ರಾಜೀಸಂಧಾನದ ಮೂಲಕ ಮುಕ್ತಾಯಗೊಳಿಸಲಾಯಿತು.</p>.<p>ವಕೀಲರ ಸಂಘದ ಹಿರಿಯ ಸದಸ್ಯ ಟಿ.ಜಿ.ಎಂ.ಕೊಟ್ರೇಶ್, ಅಡ್ವೊಕೇಟ್ ಕೌನ್ಸಿಲರ್ ಎ.ಚಂದ್ರಶೇಖರ್, ಶೇಕ್ ಅಹ್ಮದ್, ನ್ಯಾಯಾಲಯದ ರಾಜಶೇಖರಗೌಡ, ನಿಂಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಗರಿಬೊಮ್ಮನಹಳ್ಳಿ</strong>: ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ನಡೆದ ಲೋಕ ಅದಾಲತ್ನಲ್ಲಿ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಆರು ಜೋಡಿ ದಂಪತಿ ಅಂತಿಮವಾಗಿ ರಾಜೀಸಂಧಾನದಲ್ಲಿ ಮತ್ತೆ ಒಂದಾದರು. ಈ ಬಾರಿ 550 ಪ್ರಕರಣಗಳು ಇತ್ಯರ್ಥಗೊಂಡಿದ್ದು ವಿಶೇಷವಾಗಿತ್ತು.</p>.<p>ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಕಾನೂನು ಸೇವೆಗಳ ಸಮಿತಿಯಿಂದ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿತ್ತು. ಹಿರಿಯ ಸಿವಿಲ್ ನ್ಯಾಯಾಧೀಶ ಡಿ.ಕೆ.ಮಧುಸೂಧನ ಅವರ ನ್ಯಾಯಾಲಯದಲ್ಲಿ 1141 ಪ್ರಕರಣಗಳ ಪೈಕಿ 90 ಪ್ರಕರಣಗಳನ್ನು ಇತ್ಯರ್ಥ ಮಾಡಿ ₹3.58 ಕೋಟಿ ರೂಪಾಯಿ ಪರಿಹಾರ ಒದಗಿಸಲಾಯಿತು.</p>.<p>ಸಿವಿಲ್ ನ್ಯಾಯಾಧೀಶ ಸೈಯದ್ ಮೋಹಿದ್ದಿನ್ ಅವರ ನ್ಯಾಯಾಲಯದಲ್ಲಿ 1523 ಪ್ರಕರಣಗಳನ್ನು ಗುರುತಿಸಿ 460 ಪ್ರಕರಣಗಳನ್ನು ಇತ್ಯರ್ಥಗೊಳಿಸಿ ₹46.92ಲಕ್ಷ ಮೊತ್ತದ ಪರಿಹಾರ ಒದಗಿಸಲಾಯಿತು. ಜತೆಗೆ 1229 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಮಾಡಿ ₹41.62ಲಕ್ಷ ಮೊತ್ತದ ಪರಿಹಾರ ನೀಡಲಾಯಿತು.</p>.<p>ಚೆಕ್ ಬೌನ್ಸ್ ಪ್ರಕರಣಗಳು, ಪಾಲುವಿಭಾಗ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಕಕ್ಷಿದಾರರು ಮತ್ತು ವಕೀಲರ ರಾಜೀಸಂಧಾನದ ಮೂಲಕ ಮುಕ್ತಾಯಗೊಳಿಸಲಾಯಿತು.</p>.<p>ವಕೀಲರ ಸಂಘದ ಹಿರಿಯ ಸದಸ್ಯ ಟಿ.ಜಿ.ಎಂ.ಕೊಟ್ರೇಶ್, ಅಡ್ವೊಕೇಟ್ ಕೌನ್ಸಿಲರ್ ಎ.ಚಂದ್ರಶೇಖರ್, ಶೇಕ್ ಅಹ್ಮದ್, ನ್ಯಾಯಾಲಯದ ರಾಜಶೇಖರಗೌಡ, ನಿಂಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>