<p><strong>ಬಳ್ಳಾರಿ:</strong> ‘ಗೃಹಲಕ್ಷ್ಮೀ ಯೋಜನೆ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು ₹2 ನೀಡಲಾಗುತ್ತಿದೆ. ಇದು ಮಹಿಳೆಯರ ಮತ್ತು ಕುಟುಂಬಗಳ ಸಬಲೀಕರಣಕ್ಕೆ ಕಾರಣವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಹೇಳಿದರು.</p>.<p>ಬಳ್ಳಾರಿಯ ಕಾಂಗ್ರೆಸ್ ಅಭ್ಯರ್ಥಿ ಇ. ತುಕಾರಾಮ್ ಅವರ ಪರವಾಗಿ ನಗರದ 23ನೇ ವಾರ್ಡ್ನಲ್ಲಿ ಪ್ರಚಾರ ನಡೆಸಿದ ಅವರು, ಈ ವೇಳೆ ಮಾತನಾಡಿದರು. </p>.<p>‘ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಬಿಜೆಪಿಯನ್ನು ಸೋಲಿಸಬೇಕು. ಈ ಚುನಾವಣೆಯಲ್ಲಿ ಮತ್ತೆ ಬಿಜೆಪಿಯನ್ನು ಗೆಲ್ಲಿಸಿದರೆ ಜನರ ಜೀವನ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿದೆ’ ಎಂದರು.</p>.<p>‘ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ವರ್ಷಕ್ಕೆ ₹1 ಲಕ್ಷ ನೀಡಲು ಮಹಾಲಕ್ಷ್ಮೀ ಯೋಜನೆ ಜಾರಿಗೆ ಬರಲಿದೆ. ಈ ಯೋಜನೆಯಿಂದ ಕುಟುಂಬಗಳು ಆರ್ಥಿಕವಾಗಿ ಸಬಲವಾಗಲಿವೆ‘ ಎಂದು ಅವರು ಹೇಳಿದರು.</p>.<p>‘ಇದು ಅತ್ಯಂತ ಮುಖ್ಯ ಚುನಾವಣೆ. ಕಾಂಗ್ರೆಸ್ ಗೆಲ್ಲಲೇಬೇಕು. ಕಾಂಗ್ರೆಸ್ ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಿ ಮನವೊಲಿಸಬೇಕು‘ ಎಂದು ಅವರು ಮನವಿ ಮಾಡಿದರು. </p>.<p>ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ‘ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ ಅವರಿಗೆ ಜನ ಮತ ನೀಡಬೇಕು. ತುಕಾರಾಂ ಅವರು ಬೇರೆ ಅಲ್ಲ, ನಾನು ಬೇರೆ ಅಲ್ಲ. ತುಕಾರಾಂ ಅವರಿಗೆ ಮತ ನೀಡಿದರೆ ನನಗೆ ಮತ ನೀಡಿದಂತೆ’ ಎಂದರು.</p>.<p>ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ್, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎ.ಮಾನಯ್ಯ, ಲಿಡ್ಕರ್ ಅಧ್ಯಕ್ಷ ಮುಂಡ್ರಿಗಿ ನಾಗರಾಜ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಚಿದಾನಂದಪ್ಪ, ಬುಡಾ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಮಾಜಿ ಮೇಯರ್ ಎಂ.ರಾಜೇಶ್ವರಿ ಸುಬ್ಬರಾಯುಡು ಮತ್ತಿತರರು ಇದ್ದರು. </p>.<p><strong>ವಕೀಲರ ಭೇಟಿ</strong></p>.<p>ಬಳ್ಳಾರಿ ನಗರದ ವಕೀಲರನ್ನು ಭೇಟಿಯಾದ ಕಾಂಗ್ರೆಸ್ ಅಭ್ಯರ್ಥಿ ತುಕಾರಾಂ ಮತ್ತು ಶಾಸಕ ಭರತ್ ರೆಡ್ಡಿ, ಅವರ ಕುಂದು ಕೊರತೆಗಳ ಬಗ್ಗೆ ಚರ್ಚಿಸಿದರು. ಈ ಲೋಕಸಭಾ ಚುನಾವಣೆಯಲ್ಲಿ ವಕೀಲರು ಕಾಂಗ್ರೆಸ್ ಬೆಂಬಲಿಸಬೇಕು ಎಂದು ಮನವಿ ಮಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ‘ಗೃಹಲಕ್ಷ್ಮೀ ಯೋಜನೆ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು ₹2 ನೀಡಲಾಗುತ್ತಿದೆ. ಇದು ಮಹಿಳೆಯರ ಮತ್ತು ಕುಟುಂಬಗಳ ಸಬಲೀಕರಣಕ್ಕೆ ಕಾರಣವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಹೇಳಿದರು.</p>.<p>ಬಳ್ಳಾರಿಯ ಕಾಂಗ್ರೆಸ್ ಅಭ್ಯರ್ಥಿ ಇ. ತುಕಾರಾಮ್ ಅವರ ಪರವಾಗಿ ನಗರದ 23ನೇ ವಾರ್ಡ್ನಲ್ಲಿ ಪ್ರಚಾರ ನಡೆಸಿದ ಅವರು, ಈ ವೇಳೆ ಮಾತನಾಡಿದರು. </p>.<p>‘ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಬಿಜೆಪಿಯನ್ನು ಸೋಲಿಸಬೇಕು. ಈ ಚುನಾವಣೆಯಲ್ಲಿ ಮತ್ತೆ ಬಿಜೆಪಿಯನ್ನು ಗೆಲ್ಲಿಸಿದರೆ ಜನರ ಜೀವನ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿದೆ’ ಎಂದರು.</p>.<p>‘ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ವರ್ಷಕ್ಕೆ ₹1 ಲಕ್ಷ ನೀಡಲು ಮಹಾಲಕ್ಷ್ಮೀ ಯೋಜನೆ ಜಾರಿಗೆ ಬರಲಿದೆ. ಈ ಯೋಜನೆಯಿಂದ ಕುಟುಂಬಗಳು ಆರ್ಥಿಕವಾಗಿ ಸಬಲವಾಗಲಿವೆ‘ ಎಂದು ಅವರು ಹೇಳಿದರು.</p>.<p>‘ಇದು ಅತ್ಯಂತ ಮುಖ್ಯ ಚುನಾವಣೆ. ಕಾಂಗ್ರೆಸ್ ಗೆಲ್ಲಲೇಬೇಕು. ಕಾಂಗ್ರೆಸ್ ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಿ ಮನವೊಲಿಸಬೇಕು‘ ಎಂದು ಅವರು ಮನವಿ ಮಾಡಿದರು. </p>.<p>ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ‘ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ ಅವರಿಗೆ ಜನ ಮತ ನೀಡಬೇಕು. ತುಕಾರಾಂ ಅವರು ಬೇರೆ ಅಲ್ಲ, ನಾನು ಬೇರೆ ಅಲ್ಲ. ತುಕಾರಾಂ ಅವರಿಗೆ ಮತ ನೀಡಿದರೆ ನನಗೆ ಮತ ನೀಡಿದಂತೆ’ ಎಂದರು.</p>.<p>ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ್, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎ.ಮಾನಯ್ಯ, ಲಿಡ್ಕರ್ ಅಧ್ಯಕ್ಷ ಮುಂಡ್ರಿಗಿ ನಾಗರಾಜ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಚಿದಾನಂದಪ್ಪ, ಬುಡಾ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಮಾಜಿ ಮೇಯರ್ ಎಂ.ರಾಜೇಶ್ವರಿ ಸುಬ್ಬರಾಯುಡು ಮತ್ತಿತರರು ಇದ್ದರು. </p>.<p><strong>ವಕೀಲರ ಭೇಟಿ</strong></p>.<p>ಬಳ್ಳಾರಿ ನಗರದ ವಕೀಲರನ್ನು ಭೇಟಿಯಾದ ಕಾಂಗ್ರೆಸ್ ಅಭ್ಯರ್ಥಿ ತುಕಾರಾಂ ಮತ್ತು ಶಾಸಕ ಭರತ್ ರೆಡ್ಡಿ, ಅವರ ಕುಂದು ಕೊರತೆಗಳ ಬಗ್ಗೆ ಚರ್ಚಿಸಿದರು. ಈ ಲೋಕಸಭಾ ಚುನಾವಣೆಯಲ್ಲಿ ವಕೀಲರು ಕಾಂಗ್ರೆಸ್ ಬೆಂಬಲಿಸಬೇಕು ಎಂದು ಮನವಿ ಮಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>