ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ ಲೋಕಸಭಾ ಕ್ಷೇತ್ರ: ಶ್ರೀರಾಮುಲು ಪರ ಸುರೇಶ್ ಬಾಬು ಪ್ರಚಾರ

Published 23 ಏಪ್ರಿಲ್ 2024, 15:59 IST
Last Updated 23 ಏಪ್ರಿಲ್ 2024, 15:59 IST
ಅಕ್ಷರ ಗಾತ್ರ

ಕುರುಗೋಡು: ಮಾಜಿ ಶಾಸಕ ಟಿ.ಎಚ್.ಸುರೇಶ್ ಬಾಬು ಅವರು ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಪರ ಪಟ್ಟಣದಲ್ಲಿ ಮಂಗಳವಾರ ಪ್ರಚಾರ ನಡೆಸಿದರು.

ವಿವಿಧ ವಾರ್ಡ್‍ಗಳ ಮನೆಮನೆಗೆ ಭೇಟಿನೀಡಿದ ಅವರು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.

‘ನರೇಂದ್ರ ಮೋದಿ ಪ್ರಧಾನಿಯಾದ ನಂತರ ದೇಶ ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಧಿಸಿದೆ. ಉತ್ತಮ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿದೇಶಗಳಲ್ಲಿಯೂ ಮೆಚ್ಚುಗೆ ವ್ಯಕ್ತವಾಗುತ್ತಿದೆ’ ಎಂದರು.

ಮುಖಂಡರಾದ ಯರಿಂಗಳಿಗಿ ತಿಮ್ಮಾರೆಡ್ಡಿ, ಸುನೀಲ್, ಪ್ರೇಮ್, ನರಸಪ್ಪ ಯಾದವ್, ಡಿಶ್ ರಾಜಾ, ನಟರಾಜ ಗೌಡ, ಕುರಿ ಹನುಮಣ್ಣ, ಎನ್.ಕೊಮಾರೆಪ್ಪ, ಆಗಲೂರು ಸುರೇಶ್ ಬಾಬು, ಸದಾನಂದ ಗೌಡ, ದಾಸರ ಹನುಮಂತಪ್ಪ, ಭದ್ರಿ, ಲತಾ, ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT