<p><strong>ಹೂವಿನಹಡಗಲಿ</strong>: ವಿವಾಹಿತೆಯೊಬ್ಬರು ತಾಲ್ಲೂಕಿನ ಮದಲಗಟ್ಟಿ ಸೇತುವೆ ಮೇಲಿಂದ ತುಂಗಭದ್ರಾ ನದಿಗೆ ಜಿಗಿದು ನೀರು ಪಾಲಾಗಿರುವ ಘಟನೆ ಜರುಗಿದೆ.</p><p>ತಾಲ್ಲೂಕಿನ ಕೆ.ಅಯ್ಯನಹಳ್ಳಿ ಗ್ರಾಮದ ಜ್ಯೋತಿ (28) ನೀರು ಪಾಲಾದವರು ಎಂದು ತಿಳಿದು ಬಂದಿದೆ.</p><p>ಮಹಿಳೆ ಸೇತುವೆ ಮೇಲಿಂದ ಜಿಗಿಯುವುದನ್ನು ಸ್ಥಳೀಯರು ನೋಡಿದ್ದಾರೆ. ಮೀನುಗಾರರು ರಕ್ಷಣೆಗೆ ಅಣಿಯಾಗುವಷ್ಟರಲ್ಲಿ ರಭಸವಾಗಿ ಹರಿಯುವ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಶನಿವಾರ ಇಡೀ ದಿನ ನದಿಯಲ್ಲಿ ಶೋಧ ಕಾರ್ಯ ನಡೆಸಿದರೂ ಶವ ಪತ್ತೆಯಾಗಿರಲಿಲ್ಲ.</p><p>ಡೆತ್ನೋಟ್ ಪತ್ತೆ: ಆಕೆ ಮನೆಬಿಟ್ಟು ಬರುವಾಗ ಬರೆದಿದ್ದಾರೆ ಎನ್ನಲಾದ ಡೆತ್ ನೋಟ್ ಜಾಲತಾಣದಲ್ಲಿ ವೈರಲ್ ಆಗಿದೆ.</p><p>‘ಪ್ರಿಯಕರ ನನ್ನನ್ನು ಬಳಸಿಕೊಂಡು ಮೋಸ ಮಾಡಿದ್ದಾನೆ. ಬೇರೆ ಯುವತಿ ಜತೆಗೂ ಆತ ಸಂಬಂಧ ಇರಿಸಿಕೊಂಡು ನನಗೆ ವಂಚಿಸಿದ್ದಾನೆ. ನನ್ನ ಸಾವಿಗೆ ಆತನೇ ಕಾರಣ’ ಎಂದು ಯುವತಿ ಡೆತ್ ನೋಟ್ ನಲ್ಲಿ ಆರೋಪಿಸಿದ್ದಾರೆ.<br>ಕುಟುಂಬದವರು ಮಹಿಳೆ ಕಾಣೆಯಾಗಿದ್ದಾಳೆ ಎಂದು ಪಟ್ಟಣ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ</strong>: ವಿವಾಹಿತೆಯೊಬ್ಬರು ತಾಲ್ಲೂಕಿನ ಮದಲಗಟ್ಟಿ ಸೇತುವೆ ಮೇಲಿಂದ ತುಂಗಭದ್ರಾ ನದಿಗೆ ಜಿಗಿದು ನೀರು ಪಾಲಾಗಿರುವ ಘಟನೆ ಜರುಗಿದೆ.</p><p>ತಾಲ್ಲೂಕಿನ ಕೆ.ಅಯ್ಯನಹಳ್ಳಿ ಗ್ರಾಮದ ಜ್ಯೋತಿ (28) ನೀರು ಪಾಲಾದವರು ಎಂದು ತಿಳಿದು ಬಂದಿದೆ.</p><p>ಮಹಿಳೆ ಸೇತುವೆ ಮೇಲಿಂದ ಜಿಗಿಯುವುದನ್ನು ಸ್ಥಳೀಯರು ನೋಡಿದ್ದಾರೆ. ಮೀನುಗಾರರು ರಕ್ಷಣೆಗೆ ಅಣಿಯಾಗುವಷ್ಟರಲ್ಲಿ ರಭಸವಾಗಿ ಹರಿಯುವ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಶನಿವಾರ ಇಡೀ ದಿನ ನದಿಯಲ್ಲಿ ಶೋಧ ಕಾರ್ಯ ನಡೆಸಿದರೂ ಶವ ಪತ್ತೆಯಾಗಿರಲಿಲ್ಲ.</p><p>ಡೆತ್ನೋಟ್ ಪತ್ತೆ: ಆಕೆ ಮನೆಬಿಟ್ಟು ಬರುವಾಗ ಬರೆದಿದ್ದಾರೆ ಎನ್ನಲಾದ ಡೆತ್ ನೋಟ್ ಜಾಲತಾಣದಲ್ಲಿ ವೈರಲ್ ಆಗಿದೆ.</p><p>‘ಪ್ರಿಯಕರ ನನ್ನನ್ನು ಬಳಸಿಕೊಂಡು ಮೋಸ ಮಾಡಿದ್ದಾನೆ. ಬೇರೆ ಯುವತಿ ಜತೆಗೂ ಆತ ಸಂಬಂಧ ಇರಿಸಿಕೊಂಡು ನನಗೆ ವಂಚಿಸಿದ್ದಾನೆ. ನನ್ನ ಸಾವಿಗೆ ಆತನೇ ಕಾರಣ’ ಎಂದು ಯುವತಿ ಡೆತ್ ನೋಟ್ ನಲ್ಲಿ ಆರೋಪಿಸಿದ್ದಾರೆ.<br>ಕುಟುಂಬದವರು ಮಹಿಳೆ ಕಾಣೆಯಾಗಿದ್ದಾಳೆ ಎಂದು ಪಟ್ಟಣ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>