<p><strong>ಸಂಡೂರು</strong>: ತಾಲ್ಲೂಕಿನ ಜೋಗಾ ಗ್ರಾಮದಲ್ಲಿ ಮಂಗವೊಂದು ಗ್ರಾಮದ ತಿಪ್ಪೇರುದ್ರೇಶ್ ಎನ್ನುವವರ ಮೇಲೆ ಗುರುವಾರ ದಾಳಿ ಮಾಡಿ ಎಡಗೈಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ.</p>.<p>ಗ್ರಾಮದಲ್ಲಿ ಸುಮಾರು ಐದಾರು ತಿಂಗಳಿಂದ ಮಂಗನ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ರೋಸಿಹೋಗಿದ್ದಾರೆ. ಮಹಿಳೆಯರು, ಮಕ್ಕಳು, ವೃದ್ಧರು ರಸ್ತೆಯಲ್ಲಿ ಸಂಚರಿಸುವಾಗ ಮಂಗವು ಏಕಾಏಕಿ ದಾಳಿ ಮಾಡುವುದರಿಂದ ಜನರು ಜೀವ ಭಯದಲ್ಲೇ ಸಂಚಾರ ಮಾಡುವಂತಾಗಿದೆ.</p>.<p>‘ಮಂಗನ ಹಾವಳಿ ನಿಯಂತ್ರಿಸುವಂತೆ, ಸೆರೆ ಹಿಡಿದು ಬೇರೆಡೆಗೆ ಸಾಗಿಸುವಂತೆ ಹಲವು ಬಾರಿ ಮನವಿ ಮಾಡಿದ್ದರಿಂದ ಅರಣ್ಯ ಇಲಾಖೆಯಿಂದ ಗ್ರಾಮದಲ್ಲಿ ಬೋನು ಇರಿಸಲಾಗಿದೆ. ಆದರೆ ಸಿಬ್ಬಂದಿ ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿಲ್ಲ’ ಎಂದು ಗ್ರಾಮದ ನಿವಾಸಿ ಗಿರಿಯಪ್ಪ ಬೇಸರ ವ್ಯಕ್ತಪಡಿಸಿದರು.</p>.<p>‘ಗ್ರಾಮದಲ್ಲಿ ಅಳವಡಿಸಿರುವ ಬೋನಿಗೆ ಮಂಗ ಬೀಳುತ್ತಿಲ್ಲ. ಮಂಗಗಳನ್ನು ಹಿಡಿಯುವ ತಜ್ಞರನ್ನು ಕರೆಸಿ ಮಂಗವನ್ನು ತ್ವರಿತವಾಗಿ ಸೆರೆ ಹಿಡಿದು ಬೇರೆಡೆಗೆ ಸಾಗಿಸಲಾಗುವುದು’ ಎಂದು ಸಂಡೂರಿನ ಉತ್ತರ ವಲಯದ ಅರಣ್ಯಾಧಿಕಾರಿ ಬಿ.ಎಸ್.ಮಂಜುನಾಥ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಡೂರು</strong>: ತಾಲ್ಲೂಕಿನ ಜೋಗಾ ಗ್ರಾಮದಲ್ಲಿ ಮಂಗವೊಂದು ಗ್ರಾಮದ ತಿಪ್ಪೇರುದ್ರೇಶ್ ಎನ್ನುವವರ ಮೇಲೆ ಗುರುವಾರ ದಾಳಿ ಮಾಡಿ ಎಡಗೈಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ.</p>.<p>ಗ್ರಾಮದಲ್ಲಿ ಸುಮಾರು ಐದಾರು ತಿಂಗಳಿಂದ ಮಂಗನ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ರೋಸಿಹೋಗಿದ್ದಾರೆ. ಮಹಿಳೆಯರು, ಮಕ್ಕಳು, ವೃದ್ಧರು ರಸ್ತೆಯಲ್ಲಿ ಸಂಚರಿಸುವಾಗ ಮಂಗವು ಏಕಾಏಕಿ ದಾಳಿ ಮಾಡುವುದರಿಂದ ಜನರು ಜೀವ ಭಯದಲ್ಲೇ ಸಂಚಾರ ಮಾಡುವಂತಾಗಿದೆ.</p>.<p>‘ಮಂಗನ ಹಾವಳಿ ನಿಯಂತ್ರಿಸುವಂತೆ, ಸೆರೆ ಹಿಡಿದು ಬೇರೆಡೆಗೆ ಸಾಗಿಸುವಂತೆ ಹಲವು ಬಾರಿ ಮನವಿ ಮಾಡಿದ್ದರಿಂದ ಅರಣ್ಯ ಇಲಾಖೆಯಿಂದ ಗ್ರಾಮದಲ್ಲಿ ಬೋನು ಇರಿಸಲಾಗಿದೆ. ಆದರೆ ಸಿಬ್ಬಂದಿ ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿಲ್ಲ’ ಎಂದು ಗ್ರಾಮದ ನಿವಾಸಿ ಗಿರಿಯಪ್ಪ ಬೇಸರ ವ್ಯಕ್ತಪಡಿಸಿದರು.</p>.<p>‘ಗ್ರಾಮದಲ್ಲಿ ಅಳವಡಿಸಿರುವ ಬೋನಿಗೆ ಮಂಗ ಬೀಳುತ್ತಿಲ್ಲ. ಮಂಗಗಳನ್ನು ಹಿಡಿಯುವ ತಜ್ಞರನ್ನು ಕರೆಸಿ ಮಂಗವನ್ನು ತ್ವರಿತವಾಗಿ ಸೆರೆ ಹಿಡಿದು ಬೇರೆಡೆಗೆ ಸಾಗಿಸಲಾಗುವುದು’ ಎಂದು ಸಂಡೂರಿನ ಉತ್ತರ ವಲಯದ ಅರಣ್ಯಾಧಿಕಾರಿ ಬಿ.ಎಸ್.ಮಂಜುನಾಥ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>