ಅಧ್ಯಕ್ಷರಾಗಿ ನೇಮಕಗೊಂಡ ವಿಷಯಕ್ಕೆ ಸಂಬಂಧಿಸಿದಂತೆ ‘ಪ್ರಜಾವಾಣಿ’ ಅವರನ್ನು ಸಂಪರ್ಕಿಸಿದಾಗ, ‘ಸರ್ಕಾರದ ಯಾವ ಪ್ರತಿನಿಧಿಯೂ ನನ್ನನ್ನು ಇದುವರೆಗೆ ಸಂಪರ್ಕಿಸಿ ವಿಷಯ ತಿಳಿಸಿಲ್ಲ. ನನ್ನ ಸ್ನೇಹಿತರಿಂದ ವಿಷಯ ಗೊತ್ತಾಗಿದ್ದು, ಕೇಳಿ ಸಂತೋಷವಾಗಿದೆ. ದೊಡ್ಡ ಜವಾಬ್ದಾರಿ ನನ್ನ ಹೆಗಲ ಮೇಲೆ ಹಾಕಿದ್ದಾರೆ. ಅದನ್ನು ಪ್ರಾಮಾಣಿಕತೆಯಿಂದ ನಿಭಾಯಿಸಲು ಶ್ರಮಿಸುವೆ’ ಎಂದು ಮಂಜಮ್ಮ ಪ್ರತಿಕ್ರಿಯಿಸಿದರು.