<p><strong>ಮರಿಯಮ್ಮನಹಳ್ಳಿ</strong>: ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪಟ್ಟಣದ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯಕ್ಕೆ ಬುಧವಾರ ಸಮೀಪದ ಎಸ್ಎಲ್ಆರ್ ಮೆಟಾಲಿಕ್ಸ್ ಕಂಪನಿಯು ವಿದ್ಯಾರ್ಥಿ ಮಿತ್ರ ಯೋಜನೆಯಡಿಯಲ್ಲಿ ₹2.21ಲಕ್ಷ ಮೌಲ್ಯದ ಪಠ್ಯಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.</p>.<p>ಪಿಎಸ್ಐ ರಾಮಕೃಷ್ಣನಾಯ್ಕ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸೌಲಭ್ಯ ಒದಗಿಸಲು ಇಂತಹ ದಾನಿಗಳು ಮುಂದಾಗಿರುವುದು ಶ್ಲಾಘನೀಯ. ಕಂಪನಿಯು ನೀಡಿದ ಪಠ್ಯ ಪುಸ್ತಕಗಳನ್ನು ವಿದ್ಯಾರ್ಥಿಗಳ ವಿದ್ಯಾಭ್ಯಾಸ ಸುಲಭಗೊಳಿಸಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಸಹಕಾರಿಯಾಗಲಿದೆ ಎಂದರು.</p>.<p>ಕಂಪನಿಯ ಅಧಿಕಾರಿ ದೀಪಕ್ ಬೆಳ್ಳೂರು ಮಾತನಾಡಿ, ‘ಶಿಕ್ಷಣವೇ ಸಮಗ್ರ ಅಭಿವೃದ್ಧಿಗೆ ಮೂಲ ಎಂಬಂತೆ, ಕಂಪನಿಯು ಸದಾ ಸಮಾಜಮುಖಿ ಚಟುವಟಿಕೆಗಳಿಗೆ ಬದ್ಧವಾಗಿದ್ದು, ವಿದ್ಯಾರ್ಥಿ ಮಿತ್ರ ಯೋಜನೆ ಮೂಲಕ ಗ್ರಾಮೀಣ ವಿದ್ಯಾರ್ಥಿಗಳ ಕನಸುಗಳನ್ನು ನನಸಾಗಿಸಲು ಪ್ರಯತ್ನಿಸುತ್ತಿದ್ದೇವೆ’ ಎಂದರು.</p>.<p>ಕಂಪನಿಯ ಅಧಿಕಾರಿ ಸಂಜೀಪ ಪತ್ತಾರ್, ಪ್ರಾಂಶುಪಾಲೆ ರೂಪಾ ಪಿ.ಸಿ ಮಾತನಾಡಿದರು. ಕಂಪನಿಯ ಅಧಿಕಾರಿಗಳಾದ ಕೆ.ಮಲ್ಲಿಕಾರ್ಜುನ್, ಮಾರುತಿ ಗೋಸಿ, ಪ್ರಾಧ್ಯಪಕರಾದ ದೊಡ್ಡಮನಿ ಲೋಕರಾಜ್, ಸೈಯದ್ ಉಸ್ಮಾನ್, ವಿಜಯಕುಮಾರ್, ಎರಿಸ್ವಾಮಿ ಸೇರಿದಂತೆ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮರಿಯಮ್ಮನಹಳ್ಳಿ</strong>: ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪಟ್ಟಣದ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯಕ್ಕೆ ಬುಧವಾರ ಸಮೀಪದ ಎಸ್ಎಲ್ಆರ್ ಮೆಟಾಲಿಕ್ಸ್ ಕಂಪನಿಯು ವಿದ್ಯಾರ್ಥಿ ಮಿತ್ರ ಯೋಜನೆಯಡಿಯಲ್ಲಿ ₹2.21ಲಕ್ಷ ಮೌಲ್ಯದ ಪಠ್ಯಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.</p>.<p>ಪಿಎಸ್ಐ ರಾಮಕೃಷ್ಣನಾಯ್ಕ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸೌಲಭ್ಯ ಒದಗಿಸಲು ಇಂತಹ ದಾನಿಗಳು ಮುಂದಾಗಿರುವುದು ಶ್ಲಾಘನೀಯ. ಕಂಪನಿಯು ನೀಡಿದ ಪಠ್ಯ ಪುಸ್ತಕಗಳನ್ನು ವಿದ್ಯಾರ್ಥಿಗಳ ವಿದ್ಯಾಭ್ಯಾಸ ಸುಲಭಗೊಳಿಸಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಸಹಕಾರಿಯಾಗಲಿದೆ ಎಂದರು.</p>.<p>ಕಂಪನಿಯ ಅಧಿಕಾರಿ ದೀಪಕ್ ಬೆಳ್ಳೂರು ಮಾತನಾಡಿ, ‘ಶಿಕ್ಷಣವೇ ಸಮಗ್ರ ಅಭಿವೃದ್ಧಿಗೆ ಮೂಲ ಎಂಬಂತೆ, ಕಂಪನಿಯು ಸದಾ ಸಮಾಜಮುಖಿ ಚಟುವಟಿಕೆಗಳಿಗೆ ಬದ್ಧವಾಗಿದ್ದು, ವಿದ್ಯಾರ್ಥಿ ಮಿತ್ರ ಯೋಜನೆ ಮೂಲಕ ಗ್ರಾಮೀಣ ವಿದ್ಯಾರ್ಥಿಗಳ ಕನಸುಗಳನ್ನು ನನಸಾಗಿಸಲು ಪ್ರಯತ್ನಿಸುತ್ತಿದ್ದೇವೆ’ ಎಂದರು.</p>.<p>ಕಂಪನಿಯ ಅಧಿಕಾರಿ ಸಂಜೀಪ ಪತ್ತಾರ್, ಪ್ರಾಂಶುಪಾಲೆ ರೂಪಾ ಪಿ.ಸಿ ಮಾತನಾಡಿದರು. ಕಂಪನಿಯ ಅಧಿಕಾರಿಗಳಾದ ಕೆ.ಮಲ್ಲಿಕಾರ್ಜುನ್, ಮಾರುತಿ ಗೋಸಿ, ಪ್ರಾಧ್ಯಪಕರಾದ ದೊಡ್ಡಮನಿ ಲೋಕರಾಜ್, ಸೈಯದ್ ಉಸ್ಮಾನ್, ವಿಜಯಕುಮಾರ್, ಎರಿಸ್ವಾಮಿ ಸೇರಿದಂತೆ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>