<p>ಮರಿಯಮ್ಮನಹಳ್ಳಿ: ಪಟ್ಟಣದಲ್ಲಿ ಈಚೆಗೆ ಗ್ರಾಮಸ್ಥರು ಉತ್ತಮ ಮಳೆಬೆಳೆಯಾಗಲೆಂದು ಕೇಲಮ್ಮದೇವಿ ಆಚರಣೆ ನಡೆಸಿ ವಿಶೇಷ ಪೂಜೆ ಸಲ್ಲಿಸಿದರು.</p>.<p>ಪ್ರತಿವರ್ಷದಂತೆ ಕೇಲಮ್ಮ ದೇವಿ ಆಚರಣೆ ಆಚರಿಸುತ್ತ ಬಂದಿದ್ದು, ಆಚರಣೆಯ ಅಂಗವಾಗಿ ಗ್ರಾಮ ದೇವತೆ ದುರ್ಗಾದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.</p>.<p>ದುರ್ಗಾದೇವಿ ದೇವಸ್ಥಾನದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಸಕಲವಾದ್ಯಗಳ ಸಮೇತ ಮುಖ್ಯ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಭಕ್ತರು ಕೇಲಮ್ಮ ದೇವಿಯನ್ನು ಹೊತ್ತು ತಂದು ಪಟ್ಟಣ ಪಂಚಾಯಿತಿ ಕಾರ್ಯಾಲಯದ ಬಳಿಯ ಹುಲಿಗೆಮ್ಮ ದೇವಸ್ಥಾನದ ಹತ್ತಿರ ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಭಕ್ತರು ದೇವಿಗೆ ಹೋಳಿಗೆ ಎಡೆ ಅರ್ಪಿಸಿ ಮಳೆಬೆಳೆ ಚೆನ್ನಾಗಿ ಬರಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.</p>.<p>ಸಂಜೆ ಕೇಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ರೈತರು, ಸಾರ್ವಜನಿಕರು ಸಕಲ ವಾದ್ಯಗಳ ಸಮೇತ ಮೆರವಣಿಗೆಯೊಂದಿಗೆ ಕರೆದೊಯ್ದು ರಾಷ್ಟ್ರೀಯ ಹೆದ್ದಾರಿ-50ರ ಬದಿಯ ಗ್ರಾಮದ ಗಡಿಯನ್ನು ದಾಟಿಸಿ ಬಂದರು. ಮೆರವಣಿಗೆಯಲ್ಲಿ ಗ್ರಾಮದ ಹಿರಿಯರು, ಯುವಕರು, ಮಕ್ಕಳು, ಮಹಿಳೆಯರು ಭಾಗವಹಿಸಿದ್ದು ವಿಶೇಷವಾಗಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-25-1419888043</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮರಿಯಮ್ಮನಹಳ್ಳಿ: ಪಟ್ಟಣದಲ್ಲಿ ಈಚೆಗೆ ಗ್ರಾಮಸ್ಥರು ಉತ್ತಮ ಮಳೆಬೆಳೆಯಾಗಲೆಂದು ಕೇಲಮ್ಮದೇವಿ ಆಚರಣೆ ನಡೆಸಿ ವಿಶೇಷ ಪೂಜೆ ಸಲ್ಲಿಸಿದರು.</p>.<p>ಪ್ರತಿವರ್ಷದಂತೆ ಕೇಲಮ್ಮ ದೇವಿ ಆಚರಣೆ ಆಚರಿಸುತ್ತ ಬಂದಿದ್ದು, ಆಚರಣೆಯ ಅಂಗವಾಗಿ ಗ್ರಾಮ ದೇವತೆ ದುರ್ಗಾದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.</p>.<p>ದುರ್ಗಾದೇವಿ ದೇವಸ್ಥಾನದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಸಕಲವಾದ್ಯಗಳ ಸಮೇತ ಮುಖ್ಯ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಭಕ್ತರು ಕೇಲಮ್ಮ ದೇವಿಯನ್ನು ಹೊತ್ತು ತಂದು ಪಟ್ಟಣ ಪಂಚಾಯಿತಿ ಕಾರ್ಯಾಲಯದ ಬಳಿಯ ಹುಲಿಗೆಮ್ಮ ದೇವಸ್ಥಾನದ ಹತ್ತಿರ ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಭಕ್ತರು ದೇವಿಗೆ ಹೋಳಿಗೆ ಎಡೆ ಅರ್ಪಿಸಿ ಮಳೆಬೆಳೆ ಚೆನ್ನಾಗಿ ಬರಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.</p>.<p>ಸಂಜೆ ಕೇಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ರೈತರು, ಸಾರ್ವಜನಿಕರು ಸಕಲ ವಾದ್ಯಗಳ ಸಮೇತ ಮೆರವಣಿಗೆಯೊಂದಿಗೆ ಕರೆದೊಯ್ದು ರಾಷ್ಟ್ರೀಯ ಹೆದ್ದಾರಿ-50ರ ಬದಿಯ ಗ್ರಾಮದ ಗಡಿಯನ್ನು ದಾಟಿಸಿ ಬಂದರು. ಮೆರವಣಿಗೆಯಲ್ಲಿ ಗ್ರಾಮದ ಹಿರಿಯರು, ಯುವಕರು, ಮಕ್ಕಳು, ಮಹಿಳೆಯರು ಭಾಗವಹಿಸಿದ್ದು ವಿಶೇಷವಾಗಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-25-1419888043</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>