<p><strong>ಹೂವಿನಹಡಗಲಿ</strong>: ತಾಲ್ಲೂಕಿನ ಹಿರೇಹಡಗಲಿಯಲ್ಲಿ ಹಾಲಸ್ವಾಮಿ ಜಾತ್ರೆ ಅಂಗವಾಗಿ ಸೋಮವಾರ ಹಾಲಸ್ವಾಮಿ ಮಠದಲ್ಲಿ ಆಯೋಜಿಸಿದ್ದ ಸಾಮೂಹಿಕ ವಿವಾಹದಲ್ಲಿ 19 ಜೋಡಿಗಳು ಹಸೆಮಣೆ ಏರಿದವು.</p>.<p>ಸಾನ್ನಿಧ್ಯ ವಹಿಸಿದ್ದ ಮಾನಿಹಳ್ಳಿ ಮಠದ ಮಳೆಯೋಗೀಶ್ವರ ಸ್ವಾಮೀಜಿ, ‘ಇಲ್ಲಿನ ಹಾಲಸ್ವಾಮಿ ಮಠವು ಸರ್ವ ಜನಾಂಗದ ಭಾವೈಕ್ಯತೆದ ಶ್ರದ್ದಾ ಕೇಂದ್ರವಾಗಿದೆ. ಪ್ರತಿ ಜಾತ್ರೆಯಲ್ಲಿ ಧಾರ್ಮಿಕ, ಸಾಮಾಜಿಕ ಕಾರ್ಯಗಳನ್ನು ನಡೆಸುತ್ತಿರುವುದು ಶ್ಲಾಘನೀಯ’ ಎಂದರು..</p>.<p>ಅಳವುಂಡಿ ಮಠದ ಪಂಡಿತಾರಾಧ್ಯ ಸ್ವಾಮೀಜಿ, ‘ಮಠಮಾನ್ಯಗಳು ಸಂಘಟಿಸುವ ಸಾಮೂಹಿಕ ವಿವಾಹಗಳು ಬಡವರಿಗೆ ವರದಾನವಾಗಿದೆ. ಇಂತಹ ಕಾರ್ಯಗಳಿಗೆ ಭಕ್ತರು ಒತ್ತಾಸೆಯಾಗಿ ನಿಲ್ಲಬೇಕು’ ಎಂದು ಹೇಳಿದರು.</p>.<p>ಸದ್ಗುರು ಶಿವಯೋಗಿ ಸಣ್ಣ ಹಾಲಸ್ವಾಮೀಜಿ, ಹಾಲಸೋಮೇಶ್ವರ ಸ್ವಾಮೀಜಿ, ಹಾಲ ವೀರಭದ್ರಪ್ಪಜ್ಜ ಸ್ವಾಮೀಜಿ, ಅಭಿನವ ಹಾಲವೀರಪ್ಪ ಸ್ವಾಮೀಜಿ ಸೇರಿದಂತೆ ಮಠದ ಎಲ್ಲ ಸ್ವಾಮೀಜಿಗಳು ನೇತೃತ್ವ ವಹಿಸಿದ್ದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಸೋಮಶೇಖರ ಹಲಗೇರಿ ಹಾಗೂ ಗ್ರಾಮದ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ</strong>: ತಾಲ್ಲೂಕಿನ ಹಿರೇಹಡಗಲಿಯಲ್ಲಿ ಹಾಲಸ್ವಾಮಿ ಜಾತ್ರೆ ಅಂಗವಾಗಿ ಸೋಮವಾರ ಹಾಲಸ್ವಾಮಿ ಮಠದಲ್ಲಿ ಆಯೋಜಿಸಿದ್ದ ಸಾಮೂಹಿಕ ವಿವಾಹದಲ್ಲಿ 19 ಜೋಡಿಗಳು ಹಸೆಮಣೆ ಏರಿದವು.</p>.<p>ಸಾನ್ನಿಧ್ಯ ವಹಿಸಿದ್ದ ಮಾನಿಹಳ್ಳಿ ಮಠದ ಮಳೆಯೋಗೀಶ್ವರ ಸ್ವಾಮೀಜಿ, ‘ಇಲ್ಲಿನ ಹಾಲಸ್ವಾಮಿ ಮಠವು ಸರ್ವ ಜನಾಂಗದ ಭಾವೈಕ್ಯತೆದ ಶ್ರದ್ದಾ ಕೇಂದ್ರವಾಗಿದೆ. ಪ್ರತಿ ಜಾತ್ರೆಯಲ್ಲಿ ಧಾರ್ಮಿಕ, ಸಾಮಾಜಿಕ ಕಾರ್ಯಗಳನ್ನು ನಡೆಸುತ್ತಿರುವುದು ಶ್ಲಾಘನೀಯ’ ಎಂದರು..</p>.<p>ಅಳವುಂಡಿ ಮಠದ ಪಂಡಿತಾರಾಧ್ಯ ಸ್ವಾಮೀಜಿ, ‘ಮಠಮಾನ್ಯಗಳು ಸಂಘಟಿಸುವ ಸಾಮೂಹಿಕ ವಿವಾಹಗಳು ಬಡವರಿಗೆ ವರದಾನವಾಗಿದೆ. ಇಂತಹ ಕಾರ್ಯಗಳಿಗೆ ಭಕ್ತರು ಒತ್ತಾಸೆಯಾಗಿ ನಿಲ್ಲಬೇಕು’ ಎಂದು ಹೇಳಿದರು.</p>.<p>ಸದ್ಗುರು ಶಿವಯೋಗಿ ಸಣ್ಣ ಹಾಲಸ್ವಾಮೀಜಿ, ಹಾಲಸೋಮೇಶ್ವರ ಸ್ವಾಮೀಜಿ, ಹಾಲ ವೀರಭದ್ರಪ್ಪಜ್ಜ ಸ್ವಾಮೀಜಿ, ಅಭಿನವ ಹಾಲವೀರಪ್ಪ ಸ್ವಾಮೀಜಿ ಸೇರಿದಂತೆ ಮಠದ ಎಲ್ಲ ಸ್ವಾಮೀಜಿಗಳು ನೇತೃತ್ವ ವಹಿಸಿದ್ದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಸೋಮಶೇಖರ ಹಲಗೇರಿ ಹಾಗೂ ಗ್ರಾಮದ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>